Thursday, December 26, 2019

ಅಬಕಾರಿ ಇನ್ಸ್‌ಪೆಕ್ಟರ್ ಯಲಗಟ್ಟಾದ ತಿರುಪತಿ ವಿ ಪಾಟೀಲ್ ಈಗ ತಹಶಿಲ್ದಾರ

ನೂತನ ತಹಶಿಲ್ದಾರ ತಿರುಪತಿ ವಿ ಪಾಟೀಲ್ ರಿಗೆ ದಕ್ಷ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ರಿಂದ ಸನ್ಮಾನ. (ಸಂಗ್ರಹ ಚಿತ್ರ)

ಸಾಧಿಸುವ ಛಲವಿದ್ದವರು ಏನನ್ನಾದರೂ ಸಾಧಿಸುತ್ತಾರೆ ಎಂಬ ಮಾತನ್ನು ಅನೇಕರು ದೃಢಪಡಿಸಿದ್ದಾರೆ. ಬಡತನ, ಹಣಕಾಸಿನ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳಿದ್ದರು ಅವುಗಳನ್ನು ಮೆಟ್ಟಿನಿಂತು ಸಾಧಿಸಿದವರು ಅನೇಕರಿದ್ದಾರೆ. ಸಮಸ್ಯೆಗಳನ್ನು ಸವಾಲಾಗಿ ತೆಗೆದುಕೊಂಡವರು ಜೀವನದಲ್ಲಿ ಒಂದಲ್ಲಾ ಒಂದು ದೊಡ್ಡ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. 
ಅಂಥವರ ಸಾಲಿನಲ್ಲಿ ಹಿಂದುಳಿದ ಜಿಲ್ಲೆ, ಬಿಸಿಲನಾಡು, ಬರದನಾಡು ಅನ್ನೋ ಹಣೆಪಟ್ಟಿ ಹೊಂದಿರುವ ರಾಯಚೂರು ಜಿಲ್ಲೆಯವರು ಅನೇಕರಿದ್ದಾರೆ. ಈ ಜಿಲ್ಲೆಯ ಅದೆಷ್ಟೋ ಜನರು ವಿವಿಧ ದೊಡ್ಡ ದೊಡ್ಡ ಹುದ್ದೆಗಳನ್ನು ಪಡೆದುಕೊಳ್ಳುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕೆಎಎಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. 
ತಿರುಪತಿ ವಿ ಪಾಟೀಲ್
ಹೌದು, ಆ ಸಾಲಿಗೆ ಇದೀಗ ಚಿನ್ನದ ನಾಡು ಲಿಂಗಸುಗೂರು ತಾಲೂಕಿನ ಯಲಗಟ್ಟಾ ಗ್ರಾಮದ ವಡಿಕೆಪ್ಪ - ದೇವಮ್ಮ ದಂಪತಿಗಳ ಹಿರಿಯ ಪುತ್ರ ತಿರುಪತಿ ವಿ ಪಾಟೀಲ್ ಸೇರಿದ್ದಾರೆ. ಅಂದ ಹಾಗೆ ವಡಿಕೆಪ್ಪ - ದೇವಮ್ಮ ದಂಪತಿಗಳಿಗೆ ಸ್ವಂತ ಜಮೀನು ಇಲ್ಲ. ಇವರು ಸ್ವಗ್ರಾಮ ಯಲಗಟ್ಟಾದಲ್ಲೇ ಬೇರೆಯವರ ಜಮೀನುಗಳಲ್ಲಿ ಕೂಲಿ - ನಾಲಿ ಮಾಡುತ್ತಾ ಕಷ್ಟಪಟ್ಟು ಮಕ್ಕಳನ್ನು ಬೆಳಸಿದ್ದಾರೆ. ತಂದೆ - ತಾಯಿ ಹಾಗೂ ಕುಟುಂಬದ ಕಷ್ಟಗಳನ್ನು ಕಣ್ಣಾರೇ ಕಂಡ ಮಕ್ಕಳು ಜೀವನದಲ್ಲಿ ಏನನ್ನಾದರು ಸಾಧಿಸಬೇಕೆಂಬ ಛಲದೊಂದಿಗೆ ಮುನ್ನುಗುತ್ತಿದ್ದಾರೆ. 
ವಡಿಕೆಪ್ಪ - ದೇವಮ್ಮ ದಂಪತಿಗಳಿಗೆ ನಾಲ್ವರು ಮಕ್ಕಳಿದ್ದು, ತಿರುಪತಿ ವಿ ಪಾಟೀಲ್ ಹಿರಿಯ ಮಗ, ತಂದೆ - ತಾಯಿ ಮತ್ತು ಹಿತೈಷಿಗಳ ಆಸೆಯಂತೆ ಇದೀಗ ತಹಶಿಲ್ದಾರ ಆಗಿದ್ದಾರೆ. ಇನ್ನೂ ನಿಂಗಪ್ಪ ಎರಡನೇಯ ಮಗ, ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೂರನೇಯ ಮಗ ಬಸವರಾಜ, ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಒಬ್ಬ ಮಗಳಿದ್ದಾಳೆ.


ತಿರುಪತಿ ವಿ ಪಾಟೀಲ್ ಬೆಳೆದುಬಂದ ಹಾದಿ: 
ತಿರುಪತಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹುಟ್ಟೂರು ಯಲಗಟ್ಟಾದ ಸರಕಾರಿ ಪ್ರಾಥಮಿಕ ಮತ್ತು ಪ್ರೌಡ ಶಾಲೆಗಳಲ್ಲಿ ಮುಗಿಸಿದ್ದಾರೆ. ಪದವಿ ಪೂರ್ವ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಲಿಂಗಸುಗೂರಿನಲ್ಲಿ ಮುಗಿಸಿದ್ದು, ಡಿ.ಎಡ್ ಶಿಕ್ಷಣವನ್ನು ಡೆಕ್ಕನ್ ಶಿಕ್ಷಣ ಸಂಸ್ಥೆ ಕಲಬುರಗಿಯಲ್ಲಿ ಪೂರ್ಣಗೊಳಿಸಿದ್ದಾರೆ. ಪದವಿ ಶಿಕ್ಷಣವನ್ನು  ಎಸ್ಎಮ್ಎಲ್ಬಿ ಕಲಾ ಮಹಾವಿದ್ಯಾಲಯ ಲಿಂಗಸುಗೂರಿನಲ್ಲಿ ಮುಗಿಸಿದ್ದಾರೆ. ಇನ್ನೂ ಎಮ್ಎ ಅರ್ಥಶಾಸ್ತ್ರ ಪದವಿಯನ್ನು ದೂರ ಶಿಕ್ಷಣದ ಮೂಲಕ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಮುಂದುವರಿಸಿದ್ದಾರೆ. 
ಮೂರು ವರ್ಷದ ಪದವಿ ಶಿಕ್ಷಣವನ್ನು ಲಿಂಗಸುಗೂರಿನ  ಡಾ.ಬಿ.ಆರ್ ಅಂಬೇಡ್ಕರ್ ವಸತಿ ನಿಲಯದಲ್ಲಿ ಇದ್ದುಕೊಂಡು ಮುಗಿಸಿದ ಇವರಿಗೆ ಆ ದಿನಗಳಲ್ಲೇ ವಸತಿ ನಿಲಯದ ಮೇಲ್ವಿಚಾರಕರು, ಎಸ್ಎಮ್ಎಲ್ಬಿ ಕಲಾ ಮಹಾವಿದ್ಯಾಲಯದ ಆಡಳಿತ ಅಧಿಕಾರಿಗಳು, ಪ್ರಾಚಾರ್ಯರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಕೆಎಎಸ್ ಪರೀಕ್ಷೆ ಬರೆಯುವಂತೆ ಸಲಹೆ ನೀಡಿದ್ದರಂತೆ. ಹೀಗೆ ಅನೇಕರ ಸಲಹೆ, ಸಹಕಾರ,  ಪ್ರೋತ್ಸಾಹದಿಂದ ಕೆಎಎಸ್ ಪರೀಕ್ಷೆ ಬರೆದು ತಹಶಿಲ್ದಾರ ಆಗಲು ಸಾಧ್ಯವಾಯಿತು ಎಂದಿದ್ದಾರೆ ನೂತನ ತಹಶಿಲ್ದಾರ ತಿರುಪತಿ ವಿ ಪಾಟೀಲ್.


ಇದುವರೆಗೂ ದೊರೆತ ಸರ್ಕಾರಿ ಹುದ್ದೆಗಳು: 
ತಿರುಪತಿ ಸತತವಾಗಿ ಶ್ರಮಪಟ್ಟು ಓದುವ ಮೂಲಕ ಮೊದಲಿಗೆ ಎಸ್ಡಿಎ ಹುದ್ದೆ ಗಿಟ್ಟಿಸಿಕೊಂಡಿದ್ದರು. ನಂತರ ಎಫ್‌ಡಿಎ, ಕಂದಾಯ ನಿರೀಕ್ಷಕ, ಚೀಪ್ ಆಫೀಸರ್ ಗ್ರೇಡ್ - 2, ಮಾರ್ಕೆಟಿಂಗ್ ಅಸಿಸ್ಟೆಂಟ್, ಅಬಕಾರಿ ನಿರೀಕ್ಷಕ, ವಸತಿ ಶಾಲೆಯ ಶಿಕ್ಷಕ ಹುದ್ದೆಗಳಿಗೂ ಇವರು ಆಯ್ಕೆಯಾಗಿದ್ದರು.
ನಂತರ ಎರಡು ವರ್ಷಗಳ ಕಾಲ ಧಾರವಾಡದ ಹಲವಾರು ಪ್ರತಿಷ್ಠಿತ  ಸ್ಪರ್ಧಾತ್ಮಕ ತರಬೇತಿ ಸಂಸ್ಥೆಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನಲ್ಲಿ ಅಬಕಾರಿ ಇಲಾಖೆಯ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ತಿರುಪತಿಗೆ ಎರಡನೆಯ ಪ್ರಯತ್ನದ ಕೆಎಎಸ್ ಪರೀಕ್ಷೆಯಲ್ಲಿ ತಹಶಿಲ್ದಾರ ಹುದ್ದೆ ಒಲಿದು ಬಂದಿದೆ.
2015ರಲ್ಲಿ ಕೆಪಿಎಸ್ಸಿಯಿಂದ ನಡೆದಿದ್ದ ಪರೀಕ್ಷೆಯಲ್ಲಿ ತಿರುಪತಿ 1083 ಅಂಕಗಳನ್ನು ಪಡೆಯುವ ಮೂಲಕ   43ನೇ ರ್ಯಾಂಕ್ ಪಡೆದುಕೊಂಡು ತಹಶಿಲ್ದಾರ ಹುದ್ದೆ ಗಿಟ್ಟಿಸಿಕೊಳ್ಳುವ ಮೂಲಕ ಸಹೋದರ ಶರಣು ಬಾಗೂರು, ಗೆಳೆಯ ಸಿ.ಪಿ ರೆಡ್ಡಿ ಸೇರಿದಂತೆ ಕುಟುಂಬ ವರ್ಗ, ತಾಲೂಕು, ಜಿಲ್ಲೆ, ರಾಜ್ಯದ ಜನತೆಯ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರ ಸಾಧನೆ ಇಂದಿನ ಯುವ ಸಮುದಾಯಕ್ಕೆ ಮಾದರಿಯಾಗಲಿ ಎಂಬುದೇ ನಮ್ಮ ಆಶಯವಾಗಿದೆ.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

Tuesday, December 24, 2019

ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ: ಲಿಂಗಸುಗೂರು, ದೇವದುರ್ಗದಲ್ಲಿ ಪೂರ್ವಭಾವಿ ಸಭೆ

ರಾಯಚೂರು ಜಿಲ್ಲೆ ಲಿಂಗಸುಗೂರಿನಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡ ವಾಲ್ಮೀಕಿ ನಾಯಕರು.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ  2020ನೇ ಸಾಲಿನಲ್ಲಿ  ನಡೆಯಲಿರುವ‌ ಎರಡನೆಯ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ. ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಗುರುಗಳಾದ ಪ್ರಸನ್ನಾನಂದಪುರಿ ಶ್ರೀಗಳ‌ ನೇತೃತ್ವದಲ್ಲಿ ‌ಈಗಾಗಲೇ ರಾಜ್ಯದ ಅನೇಕ ತಾಲೂಕುಗಳಲ್ಲಿ ಸಭೆ ನಡೆಸಲಾಗಿದ್ದು, ಇಂದು ರಾಯಚೂರು ಜಿಲ್ಲೆಯ ಲಿಂಗಸುಗೂರು ಹಾಗೂ ದೇವದುರ್ಗ ತಾಲೂಕುಗಳಲ್ಲಿ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ ನಡೆಸಲಾಯಿತು.
ಲಿಂಗಸುಗೂರು: ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ಇಂದು ನಡೆದ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಎರಡನೆಯ ವರ್ಷದ ಮಹರ್ಷಿ ವಾಲ್ಮೀಕಿ  ಜಾತ್ರಾ ಮಹೋತ್ಸವ ಸಮಿತಿಯ ತಾಲೂಕು ಅಧ್ಯಕ್ಷರನ್ನಾಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಗುಂಡಪ್ಪ ನಾಯಕ ಸರ್ಜಾಪುರ ಅವರನ್ನು ಆಯ್ಕೆ ಮಾಡಲಾಯಿತು.
ಗುಂಡಪ್ಪ ನಾಯಕ ಸರ್ಜಾಪುರರವರಿಗೆ ವಾಲ್ಮೀಕಿ ಶ್ರೀಗಳಿಂದ ಸನ್ಮಾನ.
ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಮಾಜದ ಮುಖಂಡರಾದ ಡಿ.ಜಿ ಗುರಿಕಾರ್, ನಂದೇಶ್ ನಾಯಕ,  ಭೀಮಣ್ಣ ನಾಯಕ, ಪಿಡ್ಡನಗೌಡ, ಗಂಗಮ್ಮ, ಹುಲುಗಪ್ಪ ನಾಯಕ ಸೇರಿದಂತೆ ಅನೇಕರಿದ್ದರು.
ದೇವದುರ್ಗದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪ್ರಸನ್ನಾನಂದಪುರಿ ಶ್ರೀಗಳೊಂದಿಗೆ ರಾಚಣ್ಣ ನಾಯಕ.
ದೇವದುರ್ಗ: ಇಂದು ಪಟ್ಟಣದ ಐಬಿಯಲ್ಲಿ‌‌ ಎರಡನೆಯ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನಡೆಸಲಾಯಿತು. ವಾಲ್ಮೀಕಿ ಗುರುಪೀಠದ ಗುರುಗಳಾದ ಪ್ರಸನ್ನಾನಂದಪುರಿ ಶ್ರೀಗಳು ನೇತೃತ್ವ ವಹಿಸಿಕೊಂಡಿದ್ದರು. 

ಸಭೆಯಲ್ಲಿ 2020ನೇ ಸಾಲಿನ ಜಾತ್ರಾ ಮಹೋತ್ಸವ ಸಮಿತಿಯ ದೇವದುರ್ಗ ತಾಲೂಕಿನ ಅಧ್ಯಕ್ಷರನ್ನಾಗಿ ನಿವೃತ್ತ ತಹಶಿಲ್ದಾರ ವೆಂಕನಗೌಡ ಪಾಟೀಲರನ್ನು ಆಯ್ಕೆ ಮಾಡಲಾಯಿತು.
ಈ ಸಭೆಯಲ್ಲಿ  2019ನೇ ಸಾಲಿನ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರು, ಮಹಿಳಾ ಸಂಘದ ಅಧ್ಯಕ್ಷರು, ನೌಕರರ ಸಂಘದ ಅಧ್ಯಕ್ಷರು ಸೇರಿದಂತೆ ವಾಲ್ಮೀಕಿ ನಾಯಕ ಸಮಾಜದ ನೂರಾರು ಜನರು ಪಾಲ್ಗೊಂಡಿದ್ದರು.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

ಹಂಪಿ ಕನ್ನಡ ವಿವಿಗೆ ವಾಲ್ಮೀಕಿ ಹೆಸರಿಡಿ: ವಾಲ್ಮೀಕಿ ಶ್ರೀ


ಲಿಂಗಸುಗೂರು ಪಟ್ಟಣದಲ್ಲಿ ಪ್ರಸನ್ನಾನಂದಪುರಿ ಶ್ರೀಗಳು ಮಾತನಾಡಿದರು. ಗೋಲಪಲ್ಲಿ ವಾಲ್ಮೀಕಿ ಆಶ್ರಮದ ವರದಾನಂದ ಶ್ರೀಗಳು ಇದ್ದರು.
ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರಿಡಬೇಕೆಂದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಗುರುಗಳಾದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.
ರಾಯಚೂರು ಜಿಲ್ಲೆ ಲಿಂಗಸುಗೂರು ಪಟ್ಟಣದಲ್ಲಿ ಮಾತನಾಡಿದ ಅವರು, ರಾಮಾಯಣದ ಕುರುಹುಗಳ ಅಭಿವೃದ್ಧಿಯ ದೃಷ್ಟಿಯಿಂದ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರಿಡಬೇಕು. ವಾಲ್ಮೀಕಿ ನಾಯಕ ಸಮಾಜ ಸೇರಿದಂತೆ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 7.5% ಕ್ಕೆ ಹೆಚ್ಚಿಸಬೇಕು. ಎಸ್ಟಿ ಹೆಸರಿನ ನಕಲಿ ಜಾತಿ ಪ್ರಮಾಣ ಪತ್ರ ತಡೆಯಬೇಕು.
ವಾಲ್ಮೀಕಿ ನಾಯಕ ಸಮಾಜ ಸೇರಿದಂತೆ ಪರಿಶಿಷ್ಟ ಪಂಗಡಕ್ಕಾಗಿ ಪ್ರತ್ಯೇಕ ಸಚಿವಾಲಯ ರಚನೆಯಾಗಬೇಕು. ರಾಮಮಂದಿರದಲ್ಲಿ ಆದಿ ಕವಿ ವಾಲ್ಮೀಕಿ ಮಂದಿರ ನಿರ್ಮಿಸಬೇಕೆಂಬ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಹೋರಾಡಬೇಕೆಂದು ಪ್ರಸನ್ನಾನಂದಪುರಿ ಶ್ರೀಗಳು ಕರೆ ನೀಡಿದರು.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

Tuesday, December 17, 2019

'ಇಂದಿರಾ ಕ್ಯಾಂಟೀನ್' ಇನ್ನುಮುಂದೆ 'ಶ್ರೀ ಮಹರ್ಷಿ ವಾಲ್ಮೀಕಿ ಅನ್ನ ಕುಟೀರ'..!?


ದೊರೆ ನ್ಯೂಸ್ ಕನ್ನಡ ವಿಶೇಷ ವರದಿ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಚಿಸಲಾಗಿದ್ದ ಇಂದಿರಾ ಕ್ಯಾಂಟೀನ್ ಗಳು ಮೊದಲಿಗೆ ಬೆಂಗಳೂರು ಮಹಾನಗರಕ್ಕೆ ಸೀಮಿತವಾಗಿದ್ದವು. ನಂತರ ಅವುಗಳ ವಿಸ್ತರಣೆ ಮಾಡುವ ಮೂಲಕ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭ ಮಾಡಲಾಗಿತ್ತು. ನಂತರದ ದಿನಗಳಲಿ ಇಂದಿರಾ ಕ್ಯಾಂಟೀನ್ ನ ಹೆಸರು ಬದಲಾಯಿಸಲಾಗುತ್ತದೆ ಎಂಬ ಮಾತುಗಳು ಆಗಾಗ ಕೇಳಿಬಂದಿದ್ದವು ಇದೀಗ ಆ ಮಾತು ನಿಜವಾಗುವ ಲಕ್ಷಣಗಳು ಕಾಣಿಸಿಕೊಂಡಿವೆ. 
ಸಮ್ಮಿಶ್ರ ಸರ್ಕಾರದ ಪತನದ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಸರ್ಕಾರ ರಚನೆಯಾದ ನಂತರ‌ ಇಂದಿರಾ ಕ್ಯಾಂಟೀನ್ ರದ್ದು ಮಾಡ್ತಾರೆ ಅನ್ನೋ ಮಾತುಗಳು ಮೊದಮೊದಲು ಕೇಳಿಬಂದಿದ್ದವು. ಅನೇಕರು ವಿರೋಧ ವ್ಯಕ್ತಪಡಿಸಿದ ಬಳಿಕ ಇಂದಿರಾ ಕ್ಯಾಂಟೀನ್ ರದ್ದು ಮಾಡುವ ಬದಲಿಗೆ ಹೆಸರು ಬದಲು ಮಾಡಲು ಬಿಜೆಪಿ ಸರ್ಕಾರ ಮುಂದಾದಂತೆ ಕಂಡುಬಂದಿದೆ. 
ಈಗಾಗಲೇ ಬಿಜೆಪಿ ಶಾಸಕ ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಸರ್ಕಾರಕ್ಕೆ ಈ ಕುರಿತು ಪತ್ರ ಬರೆದು ಮನವಿ ಮಾಡಿದ್ದಾರೆ. ಸಚಿವ ಆರ್.ಅಶೋಕ್ ರವರಿಗೆ ಬರೆದ ಪತ್ರದಲ್ಲಿ ‌ನರಸಿಂಹ ನಾಯಕ 'ಇಂದಿರಾ ಕ್ಯಾಂಟೀನ್' ಹೆಸರು ಬದಲಿಸಿ 'ಶ್ರೀ ಮಹರ್ಷಿ ವಾಲ್ಮೀಕಿ ಅನ್ನ ಕುಟೀರ' ಎಂದು ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ. ಆದರೆ ಬೆಂಗಳೂರು ನಗರವನ್ನು ಹೊರತುಪಡಿಸಿ ಹೆಸರು ಬದಲಿಸುವಂತೆ ಶಾಸಕ ನರಸಿಂಹ ನಾಯಕ ಮನವಿ ಮಾಡಿರುವುದು ವಿವಿಧ ರೀತಿಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಇಂದಿರಾ ಗಾಂಧಿ ಒಂದು ಪಕ್ಷಕ್ಕೆ ಸೀಮಿತವಾದವರಾಗುತ್ತಾರೆ. ಅವರ ಹೆಸರಿನ ಕ್ಯಾಂಟೀನ್ ಅನ್ನು  ಶ್ರೀ ಮಹರ್ಷಿ ವಾಲ್ಮೀಕಿ ಅನ್ನ ಕುಟೀರ ಅಂತ ಮಾಡುವ ಮೂಲಕ ರಾಮಾಯಣ ಬರೆದ ಮಹಾತ್ಮರ ಹೆಸರು ಇಡುವಂತೆ ನರಸಿಂಹ ನಾಯಕ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. 
ಈ ಕುರಿತು ಸಚಿವ ಆರ್.ಅಶೋಕ ಕೂಡ ಪ್ರತಿಕ್ರಿಯೆ ನೀಡಿದ್ದು, ಹೆಸರು ಬದಲಾವಣೆಯ ಪ್ರಸ್ತಾಪವನ್ನು ಗಂಭೀರವಾಗಿ ಪರಿಗಣಿಸುವ ಸಾಧ್ಯತೆ ಹೆಚ್ಚಾಗಿದೆ. ಇನ್ನೂ ಕ್ಯಾಂಟೀನ್ ಗೆ ಹೆಸರಿಡುವ ಮೊದಲು ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ಎಂಬುದು ವಾಲ್ಮೀಕಿ ನಾಯಕ ಸಮಾಜದ ಬಹುತೇಕರ ವಾದವಾಗಿದೆ. ಹೆಸರು ಬದಲಾವಣೆಯ ಈ ಪ್ರಸ್ತಾವ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ಕಾಯ್ದುನೋಡಬೇಕಿದೆ.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

Monday, December 16, 2019

ಮುಖ್ಯಮಂತ್ರಿ ಬಿಎಸ್ವೈ ಹೇಳಿಕೆ ಖಂಡನಾರ್ಹ: ಡಿಎಸ್ಪಿ ನಾಯಕ

ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅನೇಕ ಜಾತಿಗಳನ್ನು ಪರಿಶಿಷ್ಟ ಪಂಗಡ (ಎಸ್ಟಿ)ಗೆ ಸೇರಿಸುವ ಭರವಸೆ ಕೊಡುತ್ತಿದ್ದಾರೆ. ಈಗಾಗಲೇ ಪರಿವಾರ, ತಳವಾರಗಳನ್ನು ಎಸ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಬಿಎಸ್ವೈ ಕೂಡ ಮೀನುಗಾರರನ್ನು ಎಸ್ಟಿಗೆ ಸೇರಿಸುವ ಭರವಸೆ ನೀಡಿದ್ದಾರೆ. ಅಲ್ಲದೇ ಅನೇಕ ಜಾತಿಗಳನ್ನು ಎಸ್ಟಿಗೆ ಸೇರಿಸುವ ಭರವಸೆ ನೀಡಿದ್ದಾರೆ ಇದು ಖಂಡನಾರ್ಹ ಕ್ರಮವಾಗಿದೆ ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಯುವಪಡೆಯ ಮಸ್ಕಿ ತಾಲೂಕು ಅಧ್ಯಕ್ಷ  ಡಿಎಸ್ಪಿ (ದುರುಗೇಶ್) ನಾಯಕ ಆರೋಪಿಸಿದ್ದಾರೆ.
ಈ ವಿಚಾರವಾಗಿ ಪತ್ರಿಕಾ ಪ್ರಕಟಣೆ ನೀಡಿದ ಅವರು, ಬಿಎಸ್ ಯಡಿಯೂರಪ್ಪ ಈ ಹಿಂದೆ ಲಿಂಗಸುಗೂರಿನಲ್ಲಿ ನಡೆದಿದ್ದ ವಾಲ್ಮೀಕಿ ನಾಯಕ ಸಮಾವೇಶದಲ್ಲಿ ಮಾತನಾಡಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ  ಇಪ್ಪತ್ತನಾಲ್ಕು ತಾಸುಗಳಲ್ಲೇ ಎಸ್ಟಿ ಮೀಸಲಾತಿ ಹೆಚ್ಚಿಸುತ್ತೇನೆ, ವಾಲ್ಮೀಕಿ ನಾಯಕ ಸಮುದಾಯದ ನಾಯಕ ಶ್ರೀರಾಮುಲುರನ್ನು ಡಿಸಿಎಂ ಮಾಡುತ್ತೇನೆ ಎಂಬ ಭರವಸೆ ನೀಡಿದ್ದರು. ಈಗಾಗಲೇ ಸರ್ಕಾರ ಅಧಿಕಾರಕ್ಕೆ ಬಂದು ಅನೇಕ ತಿಂಗಳು ಕಳೆದರು ಮೀಸಲಾತಿ ಹೆಚ್ಚಿಸಿಲ್ಲ. ಬದಲಾಗಿ ಬುಡಕಟ್ಟು ಹಿನ್ನೆಲೆ ಇಲ್ಲದ ಜಾತಿಗಳನ್ನು ಎಸ್ಟಿಗೆ ಸೇರಿಸಲು ಮುಂದಾಗಿರುವುದು ಸಿಎಂ ಬಿಎಸ್ವೈ ವಾಲ್ಮೀಕಿ ನಾಯಕ ಸಮುದಾಯಕ್ಕೆ ಮಾಡುತ್ತಿರುವ ದ್ರೋಹವಾಗಿದೆ. 
ಬಿಎಸ್ವೈ ತಾವು ಕೊಟ್ಟ ಮಾತಿನಂತೆ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಬೇಕು, ಅಲ್ಲದೇ ಎಸ್ಟಿಗೆ ಬೇರೆ ಬೇರೆ ಜಾತಿಗಳನ್ನು ಸೇರಿಸುವ ಮೊದಲು ಕುಲಶಾಸ್ತ್ರ ಅಧ್ಯಯನ ಮಾಡಿಸಬೇಕು, ಬುಡಕಟ್ಟು ಹಿನ್ನೆಲೆಯನ್ನು ಖಚಿತ ಪಡಿಸಿಕೊಳ್ಳಬೇಕು, ಬೇರೆ ಬೇರೆ ಜಾತಿಗಳನ್ನು ಎಸ್ಟಿಗೆ ಸೇರಿಸುವುದಾದರೆ ಆ ಜಾತಿಗಳೊಟ್ಟಿಗೆ ಅವುಗಳ ಮೀಸಲಾತಿಯನ್ನು ಎಸ್ಟಿಗೆ ಸೇರಿಸಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಬಿಜೆಪಿಗೆ ಮತ್ತು ಬಿಎಸ್ವೈಗೆ ವಾಲ್ಮೀಕಿ ನಾಯಕ ಸಮುದಾಯ ತಕ್ಕಪಾಠ ಕಲಿಸಲಿದೆ ಎಂದು ಡಿಎಸ್ಪಿ (ದುರುಗೇಶ್) ನಾಯಕ ಎಚ್ಚರಿಕೆ ನೀಡಿದ್ದಾರೆ.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

ಪಾಮನಕಲ್ಲೂರು: ಛಲವಾದಿ ಮಹಾಸಭಾ ಹೋಬಳಿ ಘಟಕ ರಚನೆ

ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಛಲವಾದಿ ಮಹಾಸಭಾದ ಹೋಬಳಿ ಘಟಕವನ್ನು ರಚನೆ ಮಾಡಲಾಗಿದ್ದು, ಪಾಮನಕಲ್ಲೂರಿನ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ  ಹೋಬಳಿ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಆರ್ ಅಮೀನಗಡ, ಉಪಾಧ್ಯಕ್ಷರಾಗಿ ರಾಜಕುಮಾರ ಪಾಮನಕಲ್ಲೂರು, ಸದಸ್ಯರಾಗಿ ಹುಲುಗಪ್ಪ ಚಿಲ್ಕರಾಗಿ, ಅಮರೇಶ್ ಸಿಎಂ, ಅಮರೇಶ ಎನ್.ಜಿ.ಒ, ಹುಸೇನಪ್ಪ ಇರಕಲ್, ಶಿವಪುತ್ರ ಯಕ್ಲ್ಸಪೂರ, ಹುಚ್ಚಪ್ಪ ಬಸ್ಸಾಪುರ ಆಯ್ಕೆಯಾಗಿದ್ದಾರೆ. 
ನೂತನ ಪದಾಧಿಕಾರಿಗಳನ್ನು ಛಲವಾದಿ ಸಮಾಜದ ಮುಖಂಡರು ಸನ್ಮಾನಿಸಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಮುಖಂಡರಾದ ನಾಗಲಿಂಗಪ್ಪ ಛಲವಾದಿ, ಮೌನೇಶ ಅಮೀನಗಡ, ಸುರೇಶ್ ಬಸ್ಸಾಪುರು, ಮಲ್ಲಪ್ಪ ಗೋನಾಳ ಸೇರಿದಂತೆ ಅನೇಕರು ಇದ್ದರು.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

Tuesday, December 10, 2019

ಸರಕಾರಿ ಪ್ರಥಮ ದರ್ಜೆ ಕಾಲೇಜಿನ 'ಪವಿತ್ರಾ' ಗುವಿಕದ ವಾಲಿಬಾಲ್ ತಂಡಕ್ಕೆ ನಾಯಕಿ

ಗುಲ್ಬರ್ಗಾ ವಿಶ್ವವಿದ್ಯಾಲಯದ ಮಹಿಳೆಯರ ವಾಲಿಬಾಲ್ ತಂಡಕ್ಕೆ ರಾಯಚೂರು ಜಿಲ್ಲೆ ಲಿಂಗಸುಗೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಪವಿತ್ರಾ ತಂದೆ ಆದಪ್ಪ ಆಯ್ಕೆಯಾಗಿದ್ದಾಳೆ. ಈಕೆ ಸತತ ಮೂರು ವರ್ಷ ವಿಶ್ವವಿದ್ಯಾಲಯದ ತಂಡಕ್ಕೆ ಆಯ್ಕೆಯಾಗುವದರ ಜೊತೆಗೆ ಈ ವರ್ಷ ಆ ತಂಡದ ನಾಯಕಿ (ಕ್ಯಾಪ್ಟನ್)ಯಾಗಿದ್ದಾಳೆ.
ತಮಿಳುನಾಡಿನ ಚನೈನಲ್ಲಿರುವ ಎಸ್.ಆರ್.ಎಮ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯಗಳ ವಾಲಿಬಾಲ್ ಪಂದ್ಯಾವಳಿಯಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ತಂಡವನ್ನು ಪವಿತ್ರಾ ಪ್ರತಿನಿಧಿಸಲಿದ್ದಾಳೆ. ಈ ವಿದ್ಯಾರ್ಥಿನಿಯು ಕಾಲೇಜಿಗೆ ಹಾಗೂ ರಾಯಚೂರು ಜಿಲ್ಲೆಗೆ ಕೀರ್ತಿತಂದಿದ್ದಾಳೆ.
ಈಕೆಯ ಸಾಧನೆಯನ್ನು  ಶಾಸಕರು ಹಾಗೂ ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಡಿ.ಎಸ್ ಹೂಲಗೇರಿ, ಪ್ರಾಚಾರ್ಯರಾದ ಡಾ.ಮಹಾಂತಗೌಡ ಪಾಟೀಲ್, ದೈಹಿಕ ಶಿಕ್ಷಣ ನಿರ್ದೇಶಕರಾದ ಶಿವಾನಂದ ನರಹಟ್ಟಿ ಶ್ಲಾಘಿಸಿದ್ದಾರೆ. ಇನ್ನೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿವರ್ಗದವರು, ವಿದ್ಯಾರ್ಥಿಗಳು ಅಭಿನಂದಿಸಿ ಅಂತರ ವಿಶ್ವವಿದ್ಯಾಲಯಗಳ ಪದ್ಯಾವಳಿಯಲ್ಲಿ ಜಯಗಳಿಸಲೆಂದು ಶುಭಹಾರೈಸಿದ್ದಾರೆ.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

Monday, November 25, 2019

ಪಾಮನಕಲ್ಲೂರು: ಗ್ರಾಮದ ಸಮಸ್ಯೆ ಪರಿಹಾರಕ್ಕೆ 'ಕರವೇ'ಯಿಂದ ಮನವಿ

ಪಾಮನಕಲ್ಲೂರು (ನ.25): ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿನ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ ಶೆಟ್ಟಿ ಬಣ) ಕಾರ್ಯಕರ್ತರು ಸೋಮವಾರ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದರು.
ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕವನ್ನು ಮರು ಪ್ರಾರಂಭ ಮಾಡುವುದು, ಊರಲ್ಲಿ ಪ್ರತಿದಿನ ನೀರು ಬಿಡಲು ಕ್ರಮಕೈಗೊಳ್ಳುವುದು, ಊರಿನ ಚರಂಡಿಗಳನ್ನು ಸ್ವಚ್ಛಗೊಳಿಸುವುದು, ಪ್ಲಾಗಿಂಗ್ ಮಾಡುವುದು, ಗ್ರಾಮದಲ್ಲಿ ಹೊಸದಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ (ಎಸ್ಸಿ ವಾರ್ಡ್) ಕ್ಕೆ ಕೈಪಂಪ್ ಅಳವಡಿಸುವುದು.
ಊರಿನ ರಸ್ತೆಯ ತಗ್ಗು ಗುಂಡಿಗಳನ್ನು ಮುಚ್ಚುವುದು, ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಒದಗಿಸುವುದು, ಗ್ರಾಮದಲ್ಲಿನ ಎಲ್ಲಾ ವಿದ್ಯುತ್ ಕಂಬಗಳಿಗೆ ವಿದ್ಯುತ್ ದೀಪಗಳನ್ನು ಅಳವಡಿಸುವುದು, ಗ್ರಾಮಸ್ಥರಿಗೆ ಉದ್ಯೋಗ ಖಾರ್ತಿ ಕೆಲಸ ನೀಡುವುದು, ಗ್ರಾಮದ ಕಾನ್ಯಾಳ್ ಭಾಗಕ್ಕೆ ವಿದ್ಯುತ್ ವ್ಯವಸ್ಥೆ ಕಲ್ಪಿಸುವುದು  ಸೇರಿದಂತೆ ಗ್ರಾಮದ ವಿವಿಧ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸುವಂತೆ ಕರವೇ ಮುಖಂಡರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಮರೇಶಪ್ಪರಿಗೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರವೇ ಮುಖಂಡರಾದ ಶಿವಾನಂದ ಹೂಗಾರ, ರಮೇಶ್ ಗಂಟ್ಲಿ, ಲಕ್ಷ್ಮಣ ಚೌಡ್ಲಿ, ಮಲ್ಲಪ್ಪ ಹಿರೇಮನೆ, ಯಲ್ಲಪ್ಪ, ನಾಗಪ್ಪ ಹಡಪದ, ಗುಡದಯ್ಯ ಗಡ್ಡಿಮನೆ, ಶಿವಪ್ಪ, ಬಸವರಾಜ್ ಪಲ್ಲೇದ್ ಸೇರಿದಂತೆ ಅನೇಕರಿದ್ದರು. 
ಪಾಮನಕಲ್ಲೂರು ಗ್ರಾಮ ಪಂಚಾಯತಿಯಲ್ಲಿ ಈ ಹಿಂದೆ ಕೃಷ್ಣ ಎಂಬುವವರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿದ್ದಾಗ ಕೂಡ ಕರವೇ ಮುಖಂಡರು, ಗ್ರಾಮಸ್ಥರು ಅನೇಕ ಬಾರಿ ಗ್ರಾಮದ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದ್ದರು. ಈಗ ಕೃಷ್ಣ ಎಂಬುವವರು ವರ್ಗಾವಣೆಯಾಗಿ ಆ ಸ್ಥಾನಕ್ಕೆ ಅಮರೇಶಪ್ಪ ಎಂಬುವವರು ಬಂದಿದ್ದಾರೆ. ಕೃಷ್ಣ ಸರ್ ಇದ್ದಾಗ ನಾವು ಅನೇಕ ಸಾರಿ ಮನವಿ ಪತ್ರ ಸಲ್ಲಿಸಿದ್ವಿ ಆದ್ರೆ ನಮ್ಮೂರಿನ ಸಮಸ್ಯೆಗಳು ಮಾತ್ರ ಪರಿಹಾರವಾಗಲಿಲ್ಲ. ಈಗ ಅಮರೇಶಪ್ಪ ಎಂಬುವವರು ಬಂದಿದ್ದಾರೆ ಅವರಾದ್ರು ನಮ್ಮೂರಿನ ಸಮಸ್ಯೆಗಳನ್ನು ಪರಿಹಾರ ಮಾಡ್ತಾರೋ ಇಲ್ವೋ ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಪರ್ಯಾಸವೆನ್ನಬಹುದಾಗಿದೆ.

-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

Saturday, November 23, 2019

ಪಾಮನಕಲ್ಲೂರು: ಕುಷ್ಠ, ಕ್ಷಯರೋಗದ ಕುರಿತು ಜಾಗೃತಿ ಅಭಿಯಾನ


ಪಾಮನಕಲ್ಲೂರು ನ.23: ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಶನಿವಾರ 'ಕುಷ್ಠ ರೋಗ ಹಾಗೂ ಕ್ಷಯರೋಗ'ದ ಕುರಿತು ಜಾಗೃತಿ ಅಭಿಯಾನ ನಡೆಯಿತು.
ಗ್ರಾಮದ ಮಾರೆಮ್ಮನಗುಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು & ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮದ ವಿವಿಧ ಬೀದಿಗಳ ಮೂಲಕ ಸಂಚರಿಸಿ ಗ್ರಾಮಸ್ಥರಿಗೆ 'ಕುಷ್ಠ ರೋಗ ಹಾಗೂ ಕ್ಷಯರೋಗ' ತಡೆಯ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಗಣಪತಿ ನಾಯ್ಕ, ಶಿಕ್ಷಕಿಯರಾದ ಪರಿನಾಭಿ, ಈರಮ್ಮ, ರೇಣುಕಾ, ಕಿರಿಯ ಆರೋಗ್ಯ ಸಹಾಯಕಿ ಶಶಿಕಲಾ, ಕಿರಿಯ ಆರೋಗ್ಯ ಸಹಾಯಕ ಸಂಶುದ್ಧಿನ್, ಆಶಾ ಕಾರ್ಯಕರ್ತೆಯರು, ಶಾಲಾ ಮಕ್ಕಳು ಇದ್ದರು.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )


Friday, November 15, 2019

ಪಾಮನಕಲ್ಲೂರು: ಕನಕದಾಸರ ನಾಮಫಲಕ ಅನಾವರಣ

ಪಾಮನಕಲ್ಲೂರು (ನ.15): ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ದಾಸಶ್ರೇಷ್ಟ ಕನಕದಾಸ ಜಯಂತೋತ್ಸವದ ಅಂಗವಾಗಿ ಕನಕದಾಸರ ನೂತನ ನಾಮಫಲಕ ಅನಾವರಣಗೊಳಿಸಲಾಯಿತು. ಗ್ರಾಮದೇವತೆ ದುರ್ಗಾದೇವಿ ದೇವಸ್ಥಾನದ ಆವರಣದಿಂದ ಆರಂಭವಾದ ಕನಕದಾಸರ ಭಾವಚಿತ್ರ ಮೆರವಣಿಗೆ ಬಸ್ಟಾಂಡ್ ಸರ್ಕಲ್ ವರೆಗೂ ನಡೆಯಿತು. ಈ ವೇಳೆ ಡೊಳ್ಳು ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕನಕದಾಸರ ನೂತನ ನಾಮಫಲಕ (ಬೋರ್ಡ್) ಅನಾವರಣ ಕಾರ್ಯಕ್ರಮದಲ್ಲಿ ವಿವಿಧ ಜಾತಿ, ಜನಾಂಗ, ವಿವಿಧ ಧರ್ಮದ ನೂರಾರು ಜನರು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರಗು ತಂದರು. ಅಲ್ಲದೇ ಗ್ರಾಮದಲ್ಲಿರುವ ಅಂಬೇಡ್ಕರ್, ವಾಲ್ಮೀಕಿ, ಅಂಬಿಗರ ಚೌಡಯ್ಯ, ಒಳಬಳ್ಳಾರಿ ಚನ್ನಬಸವೇಶ್ವರ ತಾತ ಸೇರಿದಂತೆ ವಿವಿಧ ನಾಮಫಲಕಗಳಿಗೂ ಪೂಜೆ ಸಲ್ಲಿಸಿದ್ದು‌ ವಿಶೇಷವಾಗಿತ್ತು. ಗ್ರಾಮದಲ್ಲಿ ನಡೆಯುವ ಪ್ರತಿಯೊಂದು ಜಯಂತೋತ್ಸವ ಸಂದರ್ಭದಲ್ಲಿ ಇದೇ ರೀತಿ ಎಲ್ಲಾ ನಾಮಫಲಕಗಳಿಗೂ ಪೂಜೆ ಸಲ್ಲಿಸಲಾಗುತ್ತಿದ್ದು, ಇದು ಭಾವೈಕ್ಯತೆಯ ಸಂಕೇತವಾಗಿದೆ ಎನ್ನುತ್ತಾರೆ ಗ್ರಾಮಸ್ಥರು.
ಕಾರ್ಯಕ್ರಮದಲ್ಲಿ ಆದಯ್ಯ, ನಿಂಗಪ್ಪ ಮಾಸ್ತರ, ಗ್ರಾಮ ಪಂಚಾಯ್ತಿ ಸದಸ್ಯ ಅಯ್ಯಣ್ಣ, ಅಯ್ಯಪ್ಪ ಅಮರಪ್ಪ, ದುರುಗಪ್ಪ, ಬಸವರಾಜ ರೋಡಲಬಂಡಾ, ಬಸವರಾಜ, ಬಸಣ್ಣ, ಶಿವು ವಾಟರ್ ಮ್ಯಾನ್, ಮಾಳಪ್ಪ, ಮಾಂಕಾಳೆಪ್ಪ, ಮಲ್ಲಿಕಾರ್ಜುನ ನಾಲ್ವಾರಕರ್, ಅಮರಯ್ಯ ಸ್ವಾಮಿ ಸೇರಿದಂತೆ ಹಾಲುಮತ ಕುರುಬ ಸಮುದಾಯದ ಮುಖಂಡರು, ವಿವಿಧ ಜಾತಿ, ಧರ್ಮದ ಮುಖಂಡರು ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

Tuesday, November 12, 2019

ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ವಿಚಾರ: ವಿವಿಧ ಮುಖಂಡರೊಂದಿಗೆ ಚರ್ಚೆ

ದೊರೆ ನ್ಯೂಸ್ ಕನ್ನಡ: ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ  ರಚಿಸಲಾದ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ಆಯೋಗವನ್ನು  ಪರಿಶಿಷ್ಟ ಪಂಗಡ ಜನಾಂಗದ ತಜ್ಞರ ತಂಡ   ಭೇಟಿಯಾಗಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿತು. 
ನಿಯೋಗದ ಕಛೇರಿಗೆ ಭೇಟಿ ನೀಡಿದ ತಜ್ಞರು, ಸ್ವಾತಂತ್ರ್ಯ ಪೂರ್ವದಲ್ಲಿ ಬುಡಕಟ್ಟುಗಳ ಬೆಳವಣಿಗೆ, ಈ ಸಮುದಾಯದ ಮೀಸಲಾತಿ ಸಂಬಂಧ ಕೇಂದ್ರ ರಾಜ್ಯ ಸರ್ಕಾರದ ಆದೇಶಗಳು, ತಾರತಮ್ಯಗಳ ಕುರಿತು ಅತ್ಯಮೂಲ್ಯವಾದ ದಾಖಲೆಗಳನ್ನು ಆಯೋಗಕ್ಕೆ ಸಲ್ಲಿಸಿದರು. ನಿಯೋಗದ ಪ್ರತಿನಿಧಿಗಳ ವಿಚಾರ ಮಂಡನೆ ಅದ್ಬುತವಾಗಿತ್ತು. ಮತ್ತೆರಡು ಸಲ ಆಯೋಗದ ಎದುರು ದಾಖಲೆಗಳನ್ನು ಸಲ್ಲಿಸಲು ಈ ನಿಯೋಗಕ್ಕೆ ಅವಕಾಶ ಸಿಗಲಿದ್ದು, ಈ ನಿಯೋಗದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಶಿವಪ್ಪ, ನಿವೃತ್ತ ಕೆಎಎಸ್ ಅಧಿಕಾರಿ ಮೃತ್ಯುಂಜಯ, ನಿವೃತ್ತ ನ್ಯಾಯಾಧೀಶ ವೆಂಕಟಪ್ಪ ನಾಯಕ, ಮಲ್ಲೇಶಪ್ಪ ನಾಯಕ ಇತರರು ಇದ್ದರು. 
ಈ ಸಂದರ್ಭದಲ್ಲಿ ಆಯೋಗದ ಕಾರ್ಯದರ್ಶಿ ಮುಲ್ಲಾ ಸಾಹೇಬ್, ವಕೀಲರಾದ ಅನಂತನಾಯಕ, ಡಾ ಟಿ.ಆರ್ ಚಂದ್ರಶೇಖರ, ರಾಜಶೇಖರ, ವಾಲ್ಮೀಕಿ ನಿಗಮದ ಎಂಡಿ ಹನುಮ ನರಸಯ್ಯ ಸೇರಿದಂತೆ ಅನೇಕರು ಇದ್ದರು.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )


Thursday, October 31, 2019

ರೋಡಲಬಂಡಾ ಕ್ಯಾಂಪ್ ನ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ


ದೊರೆ ನ್ಯೂಸ್ ಕನ್ನಡ: ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಕ್ಯಾಂಪ್ ನ ಸರಕಾರಿ ಪ್ರೌಢ ಶಾಲೆಯಲ್ಲಿ ಇಂದು ರಾಷ್ಟ್ರೀಯ ಏಕತಾ ದಿನ ಆಚರಣೆ ಮಾಡಲಾಯಿತು.
ಮಾಜಿ ಉಪರಾಷ್ಟ್ರಪತಿ ಉಕ್ಕಿನ ಮನುಷ್ಯ ದಿ.ಸರದಾರ ವಲ್ಲಭಭಾಯಿ ಪಟೇಲರ 144ನೇ ವರ್ಷದ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿನವನ್ನು ರಾಷ್ಟ್ರದಾದ್ಯಂತ ಇಂದು ಆಚರಣೆ ಮಾಡಲಾಗಿದ್ದು, ಅದರಂತೆ ಇಲ್ಲಿ ಕೂಡ ಏಕತಾ ನಡಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯರಾದ ರಾಮನಗೌಡ ಪಾಟೀಲ್, ಶೃತಿ, ಬಸಮ್ಮ, ಜಯಶ್ರೀ, ಸಿದ್ದರಾಮಪ್ಪ, ಗೀತಾ ಪಾಂಡೆ, ಗೀತಾ ಅಲೆಗಾವಿ, ಗಂಗಾ ಮೇಟಿ ಸೇರಿದಂತೆ ಅನೇಕ ಶಿಕ್ಷಕ, ಶಿಕ್ಷಕಿಯರು, ವಿದ್ಯಾರ್ಥಿಗಳು, ಊರಿನ ಗಣ್ಯರು ಇದ್ದರು.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com

Tuesday, October 29, 2019

ಪಾಮನಕಲ್ಲೂರಿಗೆ ಬ್ರಹ್ಮಾನಂದ ಗುರೂಜಿ ಭೇಟಿ: ನೂತನ ವಾಲ್ಮೀಕಿ ಭವನ ವೀಕ್ಷಣೆ


ದೊರೆ ನ್ಯೂಸ್ ಕನ್ನಡ: ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮಕ್ಕೆ ಚಿಕ್ಕಬಳ್ಳಾಪುರ ವಾಲ್ಮೀಕಿ ಗುರುಕುಲ ಪೀಠದ ಗುರುಗಳಾದ ಬ್ರಹ್ಮಾನಂದ ಗುರೂಜಿ ಭೇಟಿ ನೀಡಿದರು. ನಿನ್ನೆ ಕೋಟೆಕಲ್ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಶ್ರೀಗಳು ಇಂದು ಪಾಮನಕಲ್ಲೂರಿಗೆ ಭೇಟಿ ನೀಡಿ ಸರ್ಕಲ್ ನಲ್ಲಿರುವ ಮಹರ್ಷಿ ವಾಲ್ಮೀಕಿ ನಾಮಫಲಕಕ್ಕೆ ಪೂಜೆ ಸಲ್ಲಿಸಿದರು. 
ನಂತರ ಗ್ರಾಮದ ಹೊರಭಾಗದಲ್ಲಿರುವ ನೂತನ ವಾಲ್ಮೀಕಿ ಭವನಕ್ಕೆ ಭೇಟಿ ನೀಡಿ ಮಹರ್ಷಿ ವಾಲ್ಮೀಕಿ ಪೋಟೋಗೆ ಪೂಜೆ ಸಲ್ಲಿಸಿ, ಭವನ ವೀಕ್ಷಣೆ ನಡೆಸಿ ನೂತನ ಕಟ್ಟಡದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೇ ವಾಲ್ಮೀಕಿ ನಾಯಕ ಜನಾಂಗದ ಸ್ಥಿತಿಗತಿಗಳ ಬಗ್ಗೆ ಗ್ರಾಮದ, ಸುತ್ತಮುತ್ತಲಿನ ಗ್ರಾಮದ ವಾಲ್ಮೀಕಿ ನಾಯಕ  ಸಮಾಜದ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಇದೇ ವೇಳೆ ಪಾಮನಕಲ್ಲೂರು, ಕೋಟೆಕಲ್, ಉಸ್ಕಿಹಾಳ್ ಗ್ರಾಮದ ಯುವಕರು ಬ್ರಹ್ಮಾನಂದ ಗುರೂಜಿಯವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಪಾಮನಕಲ್ಲೂರು ಗ್ರಾಮದ ವಾಲ್ಮೀಕಿ ನಾಯಕ ಸಮಾಜದ ಮುಖಂಡರಾದ ಲಚಮಪ್ಪ ಕೊಂಡಾಲ್, ನಾಗಪ್ಪ ತಳವಾರ್, ಅಯ್ಯಪ್ಪ ಯದ್ದಲದೊಡ್ಡಿ, ಅಯ್ಯಪ್ಪ ತಳವಾರ್, ಶರಣಪ್ಪ ಕೊಂಡಾಲ್, ದುರುಗಪ್ಪ ಅರಕೇರಿ, ಅಯ್ಯಣ್ಣ ನಾಯಕ ಪಾಮನಕಲ್ಲೂರು, ಮರೇಪ್ಪ ತಳವಾರ್, ಕೋಟೆಕಲ್ ಗ್ರಾಮದ ಬಸವರಾಜ ನಾಯಕ, ಹುಚ್ಚಪ್ಪ ನಾಯಕ, ಅಂಜಿ ನಾಯಕ, ಉಸ್ಕಿಹಾಳ್ ಗ್ರಾಮದ ಗ್ವಾಲಪ್ಪ ನಾಯಕ, ಆದಪ್ಪ ನಾಯಕ, ಚಿಕ್ಕಹೆಸರೂರು ಗ್ರಾಮದ ಮಹಾಂತೇಶ್ ನಾಯಕ ಸೇರಿದಂತೆ ಅನೇಕರಿದ್ದರು.

-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

Monday, October 28, 2019

ಬ್ರಹ್ಮಾನಂದ ಗುರೂಜಿ ಗ್ರಾಮ ವಾಸ್ತವ್ಯ: ವಾಲ್ಮೀಕಿ ನಾಯಕರಿಂದ ಗೌರವ, ಸನ್ಮಾನ


ದೊರೆ ನ್ಯೂಸ್ ಕನ್ನಡ: ಚಿಕ್ಕಬಳ್ಳಾಪುರದ ವಾಲ್ಮೀಕಿ ಗುರುಕುಲ ಪೀಠದ ಗುರುಗಳಾದ ಬ್ರಹ್ಮಾನಂದ ಗುರೂಜಿ ರಾಯಚೂರು ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ‌. ನಿನ್ನೆ ಲಿಂಗಸುಗೂರು ತಾಲ್ಲೂಕಿನ ಆಲಘಟ್ಟದಲ್ಲಿ ಗ್ರಾಮವಾಸ್ತವ್ಯ ಮಾಡಿ ಸಮುದಾಯದ ಕಷ್ಟ ಸುಖದಲ್ಲಿ ಭಾಗಿಯಾಗಿದ್ದ ಸ್ವಾಮೀಜಿ ಇಂದು ಮಸ್ಕಿ ತಾಲೂಕಿನ ಕೋಟೆಕಲ್ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. 

ಬ್ರಹ್ಮಾನಂದ ಶ್ರೀಗಳು ಕೋಟೆಕಲ್ ಗ್ರಾಮದಲ್ಲಿ ವಾಸ್ತವ್ಯ ಹೂಡಿದ ಸುದ್ದಿ ತಿಳಿಯುತ್ತಿದ್ದಂತೆ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ವಾಲ್ಮೀಕಿ ನಾಯಕ ಸಮುದಾಯದ ಯುವಕರು ಕೋಟೆಕಲ್ ಗ್ರಾಮಕ್ಕೆ ತೆರಳಿ ಬ್ರಹ್ಮಾನಂದ ಶ್ರೀಗಳ ಆಶೀರ್ವಾದ ಪಡೆದರು. ಇದೇ ವೇಳೆ ಶ್ರೀಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಅಯ್ಯಪ್ಪ ನಾಯಕ ಯದ್ದಲದೊಡ್ಡಿ, ಅಯ್ಯಪ್ಪ ನಾಯಕ ವಾಟರ್ಮ್ಯಾನ್, ಶರಣಪ್ಪ ಕೊಂಡಾಲ್, ಯಂಕೋಬ ಯದ್ದಲದೊಡ್ಡಿ, ಅಯ್ಯಪ್ಪ ತಳವಾರ್, ಅಯ್ಯಣ್ಣ ನಾಯಕ ಪಾಮನಕಲ್ಲೂರು, ರಂಗಪ್ಪ ಅರಕೇರಿ, ಮರೇಪ್ಪ ತಳವಾರ್, ಹುಚ್ಚಪ್ಪ ನಾಯಕ ಕೋಟೆಕಲ್, ಅಂಜಿ ನಾಯಕ ಕೋಟೆಕಲ್ ಸೇರಿದಂತೆ ಪಾಮನಕಲ್ಲೂರು, ಕಾನ್ಯಾಳ್, ಕೋಟೆಕಲ್ ಗ್ರಾಮಸ್ಥರು ಇದ್ದರು.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

Friday, October 25, 2019

ಬಾಲ್ ಬ್ಯಾಡ್ಮಿಂಟನ್ ನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು 7ನೇ ಬಾರಿ ಚಾಂಪಿಯನ್

ಇದೇ 22ರಂದು ರಾಯಚೂರು ಜಿಲ್ಲೆ ಲಿಂಗಸುಗೂರಿನ ವಿ.ಸಿ.ಬಿ ಮಹಾವಿದ್ಯಾಲಯದಲ್ಲಿ ಜರುಗಿದ ಗುಲ್ಬರ್ಗಾ ವಿಶ್ವವಿದ್ಯಾಲಯದ ಅಂತರ್ ಮಹಾವಿದ್ಯಾಲಯಗಳ ಪುರುಷರ ಏಕವಲಯ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಲಿಂಗಸುಗೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ‌ಈ ಮೂಲಕ ಗುಲ್ಬರ್ಗಾ ವಿಶ್ವವಿದ್ಯಾಲಯದ ಚಾಂಪಿಯನ್ಸಿಪ್ ಅನ್ನು ಸತತವಾಗಿ 7ನೇ ಬಾರಿ ಸರಕಾರಿ ಪ್ರಥಮ ದರ್ಜೆ ಕಾಲೇಜು  ತನ್ನದಾಗಿಸಿಕೊಂಡಿದೆ. 
ಈ ತಂಡದಲ್ಲಿ ಅಮರೇಶ ಜಿ (ಕ್ಯಾಪ್ಟನ್), ರಾಘವೇಂದ್ರ, ನಬೀರಸುಲ್, ಸುರೇಶ ಆರ್, ಬಸವರಾಜ ಕೆ, ಸುರೇಶ ಎಸ್, ಬಸವರಾಜ ಎನ್ ಇದ್ದು ಈ ವಿದ್ಯಾರ್ಥಿಗಳು ಕಾಲೇಜಿಗೆ ಹಾಗೂ ರಾಯಚೂರು ಜಿಲ್ಲೆಗೆ ಕೀರ್ತಿತಂದಿದ್ದಾರೆಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಮಹಾಂತಗೌಡ ಪಾಟೀಲ್ ತಿಳಿಸಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಸಕರು ಹಾಗೂ ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಡಿ.ಎಸ್ ಹೂಲಗೇರಿ, ಪ್ರಾಚಾರ್ಯರಾದ ಡಾ.ಮಹಾಂತಗೌಡ ಪಾಟೀಲ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಾನಂದ ನರಹಟ್ಟಿ ಹಾಗೂ ಉಪನ್ಯಾಸಕರು, ಸಿಬ್ಬಂದಿವರ್ಗದವರು ಅಭಿನಂದಿಸಿದ್ದಾರೆ.

Monday, October 21, 2019

ಕಾಂಗ್ರೆಸ್ ಪಕ್ಷದ ರಾಯಚೂರು ಜಿಲ್ಲಾಧ್ಯಕ್ಷರಾಗಿ ಬಿ.ವಿ ನಾಯಕ ಆಯ್ಕೆ


ರಾಯಚೂರು: ಕಾಂಗ್ರೆಸ್ ಪಕ್ಷದ ರಾಯಚೂರು ಜಿಲ್ಲಾಧ್ಯಕ್ಷರಾಗಿ ಮಾಜಿ ಸಂಸದ ಬಿ.ವಿ ನಾಯಕ ಆಯ್ಕೆಯಾಗಿದ್ದಾರೆ. ಕರ್ನಾಟಕದ ಕಾಂಗ್ರೆಸ್  ಉಸ್ತುವಾರಿ ಕೆ.ಸಿ ವೇಣುಗೋಪಾಲ್, ರಾಯಚೂರು ಜಿಲ್ಲೆಯ ನೂತನ ಅಧ್ಯಕ್ಷರನ್ನಾಗಿ ಬಿ.ವಿ ನಾಯಕರನ್ನು ನೇಮಿಸಿ ಆದೇಶಿಸಿದ್ದಾರೆ.
ಬಿ.ವಿ ನಾಯಕರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಅವರ ಆಪ್ತರು, ಜಿಲ್ಲಾ ಮುಖಂಡರಿಗೆ, ಪಕ್ಷದ ಶಾಸಕರಿಗೆ, ಮಾಜಿ ಶಾಸಕರಿಗೆ,   ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ದಿನೇಶ್ ಗುಂಡೂರಾವ್, ವಿರೋಧ ಪಕ್ಷದ ನಾಯಕ  ಸಿದ್ದರಾಮಯ್ಯ, ಪಕ್ಷದ ಕಾರ್ಯಾಧ್ಯಕ್ಷರ ಈಶ್ವರ ಖಂಡ್ರೆ, ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ನಾಯಕ ರಾಹುಲ್ ಗಾಂಧಿ‌ ಸೇರಿದಂತೆ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

ಏಕವಲಯ ಪುರುಷರ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಗೆಲುವು


ಲಿಂಗಸುಗೂರು: ರಾಯಚೂರು ಜಿಲ್ಲೆ ಲಿಂಗಸುಗೂರಿನ ವಿಸಿಬಿ ಕಾಲೇಜಿನಲ್ಲಿ  'ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಹಾಗೂ ವಿಸಿಬಿ ಶಿಕ್ಷಣ ಸಂಸ್ಥೆಯ ಕಲಾ & ವಾಣಿಜ್ಯ ಪದವಿ  ಮಹಾವಿದ್ಯಾಲಯ ಲಿಂಗಸುಗೂರು ಸಂಯುಕ್ತಾಶ್ರಯದಲ್ಲಿ, ನಡೆದ ಅಂತರ ಮಹಾವಿದ್ಯಾಲಯಗಳ ಏಕವಲಯ ಪುರುಷರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯ ತಂಡದ ಆಯ್ಕೆಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಲಿಂಗಸುಗೂರಿನ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ.
ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನ ವಿದ್ಯಾರ್ಥಿಗಳು ರನ್ನರ್ - ಅಪ್ ಆಗಿದ್ದಾರೆ. ಸರಕಾರಿ ಪ್ರಥಮ ದರ್ಜೆ ಕಾಲೇಜು ಲಿಂಗಸುಗೂರು ಈಗಾಗಲೇ ಆರು ಬಾರಿ ಚಾಂಪಿಯನ್ಶಿಪ್, ಒಂದು ಬಾರಿ ರನ್ನರ್ ಅಪ್ ಆಗಿದ್ದು, ಕಾಲೇಜಿನ ಪ್ರಾಂಶುಪಾಲರು, ಕ್ರೀಡಾಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )


ಸಡಗರ ಸಂಭ್ರಮದ ವಾಲ್ಮೀಕಿ ಜಯಂತೋತ್ಸವಕ್ಕೆ ಸಾಕ್ಷಿಯಾಯ್ತು ಗೆಜ್ಜಲಗಟ್ಟಾ


 ಸಹೋದರ ಸಂಬಂಧ, ಮಾನವೀಯ ಸಂಬಂಧಗಳನ್ನು ತಿಳಿಸಿಕೊಡುವ ಕೃತಿ "ರಾಮಾಯಣ" ರಚಿಸಿದ ಮಹರ್ಷಿ ವಾಲ್ಮೀಕಿ ಜಯಂತೋತ್ಸವವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. ಪ್ರತಿವರ್ಷವೂ ಸೀಗೆ ಹುಣ್ಣಿಮೆಯ ದಿನದಿಂದ ಒಂದು ತಿಂಗಳುಗಳ ಕಾಲ ವಿಶ್ವದೆಲ್ಲೆಡೆ ಆಚರಿಸಲಾಗುವ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮ ವಿಶಿಷ್ಟ ಮತ್ತು ವಿಭಿನ್ನವಾಗಿರುತ್ತದೆ.
ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣದ ತತ್ವ ಆದರ್ಶಗಳನ್ನು ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಪ್ರಾಮುಖ್ಯತೆ ಪಡೆದುಕೊಂಡಿದೆ.
ಅ.13ರಂದು ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮ ಆಚರಿಸಲಾಗಿದ್ದು, ಇದಲ್ಲದೇ ವಾಲ್ಮೀಕಿ ನಾಯಕ ಸಮುದಾಯ ಒಂದು ತಿಂಗಳುಗಳ ಕಾಲ ರಾಜ್ಯದ ವಿವಿಧ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಆಚರಿಸುತ್ತದೆ. 

ಅದ್ರಂತೆ ಇಂದು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೆಜ್ಜಲಗಟ್ಟಾದಲ್ಲಿ ಸಡಗರ, ಸಂಭ್ರಮದಿಂದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮ ಆಚರಿಸಲಾಗಿದೆ. ಗ್ರಾಮದ ಮಹಿಳೆಯರು, ಮಕ್ಕಳು,  ವಿವಿಧ ಸಮುದಾಯದ ಮುಖಂಡರು ಸೇರಿದಂತೆ ನೂರಾರು ಜನರು ಜಯಂತೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇನ್ನೂ ಈ ಕಾರ್ಯಕ್ರಮದಲ್ಲಿ ತಾಲೂಕು ವಾಲ್ಮೀಕಿ ನಾಯಕ‌ ಸಂಘದ ಅಧ್ಯಕ್ಷ ನಂದೀಶ್ ನಾಯಕ, ಮುಖಂಡರಾದ ಮೌನೇಶ್ ನಾಯಕ, ರಾಜು ನಾಯಕ ಹಟ್ಟಿ, ಮುತ್ತಣ್ಣ ನಾಯಕ,  ಕಿರಣ್ ನಾಯಕ ಗೆಜ್ಜಲಗಟ್ಟಾ, ಗ್ರಾಮ ಪಂಚಾಯತಿ ಸದಸ್ಯ ಮಲ್ಲಯ್ಯ, ಲಕ್ಷ್ಮಣ ನಾಯಕ, ವೆಂಕಟೇಶ್ ನಾಯಕ, ಯಂಕಣ್ಣ, ರಮೇಶ್ ನಾಯಕ, ರಾಮಣ್ಣ, ಶಂಕರ್, ಮೌನೇಶ್, ಅಮರಪ್ಪ ದಳಪತಿ, ಲಚಮಪ್ಪ, ಅಯ್ಯಪ್ಪ, ಶಿವಾನಂದ ಸೇರಿದಂತೆ ಅನೇಕರಿದ್ದರು‌.
ವರದಿ: ಕಿರಣ್ ನಾಯಕ ಗೆಜ್ಜಲಗಟ್ಟಾ
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಅನಿಸಿಕೆ, ಲೇಖನಗಳು ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

Thursday, October 17, 2019

"ವಾಲ್ಮೀಕಿ ಯಾರು..?" ಪುಸ್ತಕ ವಿತರಣೆ: ಕ್ರಮಕ್ಕೆ ಡಿಸಿಎಂಗೆ ಮನವಿ


ಕಲಬುರಗಿ: ಕಳೆದ ಭಾನುವಾರ ಕಲಬುರಗಿ ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮದಲ್ಲಿ "ವಾಲ್ಮೀಕಿ ಯಾರು..?" ಎಂಬ ವಿವಾದಾತ್ಮಕ ಪುಸ್ತಕವನ್ನು ವೇದಿಕೆಯಲ್ಲಿದ್ದ ಗಣ್ಯರು, ಪ್ರತಿಭಾನ್ವಿತ ವಿದ್ಯಾರ್ಥಿಗಳು  ಸೇರಿದಂತೆ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜನಸಾಮಾನ್ಯರಿಗೂ ವಿತರಿಸಲಾಗಿತ್ತು.
ಸರ್ಕಾರದಿಂದ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಆಯೋಜಕರು ವಿವಾದಾತ್ಮಕ ಪುಸ್ತಕ ಹಂಚಿದ್ದು ವಾಲ್ಮೀಕಿ ನಾಯಕ ಸಮುದಾಯ ಸೇರಿದಂತೆ ಮಹರ್ಷಿ ವಾಲ್ಮೀಕಿಯವರ ಅನುಯಾಯಿಗಳಿಗೆ ಬೇಸರ ತರಿಸಿತ್ತು.  ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಆ ಸಂಬಂಧ ವಿಶೇಷ ಲೇಖನವು ಪ್ರಕಟಗೊಂಡಿತ್ತು. ಇದರಿಂದ ಎಚ್ಚೆತ್ತ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ವಿವಾದಾತ್ಮಕ ಪುಸ್ತಕ ವಿತರಿಸಿದ ಅಧಿಕಾರಿಗಳ ಮೇಲೆ ಕಠೀಣ ಕ್ರಮ ಕೈಗೊಳ್ಳುವಂತೆ ಡಿಸಿಎಂ & ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ   ಶರಣು ಸುಬೇದಾರ, ಉಪಾಧ್ಯಕ್ಷ ನಂದಕುಮಾರ, ಮುಖಂಡರಾದ ಅಶೋಕ ಶಿರಸಗಿ, ಅಮರೇಶ್ ನಾಯಕ ಗೋವಾ ಹೋಟೆಲ್, ಅರವಿಂದ ನಾಯಕ, ಬಂಟಿ ಸುರಪುರಕರ್ ಸೇರಿದಂತೆ ಅನೇಕರಿದ್ದರು.