ದೊರೆ ನ್ಯೂಸ್ ಕನ್ನಡ: ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಕ್ಯಾಂಪ್ ನ ಸರಕಾರಿ ಪ್ರೌಢ ಶಾಲೆಯಲ್ಲಿ ಇಂದು ರಾಷ್ಟ್ರೀಯ ಏಕತಾ ದಿನ ಆಚರಣೆ ಮಾಡಲಾಯಿತು.
ಮಾಜಿ ಉಪರಾಷ್ಟ್ರಪತಿ ಉಕ್ಕಿನ ಮನುಷ್ಯ ದಿ.ಸರದಾರ ವಲ್ಲಭಭಾಯಿ ಪಟೇಲರ 144ನೇ ವರ್ಷದ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿನವನ್ನು ರಾಷ್ಟ್ರದಾದ್ಯಂತ ಇಂದು ಆಚರಣೆ ಮಾಡಲಾಗಿದ್ದು, ಅದರಂತೆ ಇಲ್ಲಿ ಕೂಡ ಏಕತಾ ನಡಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯರಾದ ರಾಮನಗೌಡ ಪಾಟೀಲ್, ಶೃತಿ, ಬಸಮ್ಮ, ಜಯಶ್ರೀ, ಸಿದ್ದರಾಮಪ್ಪ, ಗೀತಾ ಪಾಂಡೆ, ಗೀತಾ ಅಲೆಗಾವಿ, ಗಂಗಾ ಮೇಟಿ ಸೇರಿದಂತೆ ಅನೇಕ ಶಿಕ್ಷಕ, ಶಿಕ್ಷಕಿಯರು, ವಿದ್ಯಾರ್ಥಿಗಳು, ಊರಿನ ಗಣ್ಯರು ಇದ್ದರು.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )
No comments:
Post a Comment