Tuesday, December 10, 2019

ಸರಕಾರಿ ಪ್ರಥಮ ದರ್ಜೆ ಕಾಲೇಜಿನ 'ಪವಿತ್ರಾ' ಗುವಿಕದ ವಾಲಿಬಾಲ್ ತಂಡಕ್ಕೆ ನಾಯಕಿ

ಗುಲ್ಬರ್ಗಾ ವಿಶ್ವವಿದ್ಯಾಲಯದ ಮಹಿಳೆಯರ ವಾಲಿಬಾಲ್ ತಂಡಕ್ಕೆ ರಾಯಚೂರು ಜಿಲ್ಲೆ ಲಿಂಗಸುಗೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಪವಿತ್ರಾ ತಂದೆ ಆದಪ್ಪ ಆಯ್ಕೆಯಾಗಿದ್ದಾಳೆ. ಈಕೆ ಸತತ ಮೂರು ವರ್ಷ ವಿಶ್ವವಿದ್ಯಾಲಯದ ತಂಡಕ್ಕೆ ಆಯ್ಕೆಯಾಗುವದರ ಜೊತೆಗೆ ಈ ವರ್ಷ ಆ ತಂಡದ ನಾಯಕಿ (ಕ್ಯಾಪ್ಟನ್)ಯಾಗಿದ್ದಾಳೆ.
ತಮಿಳುನಾಡಿನ ಚನೈನಲ್ಲಿರುವ ಎಸ್.ಆರ್.ಎಮ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯಗಳ ವಾಲಿಬಾಲ್ ಪಂದ್ಯಾವಳಿಯಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ತಂಡವನ್ನು ಪವಿತ್ರಾ ಪ್ರತಿನಿಧಿಸಲಿದ್ದಾಳೆ. ಈ ವಿದ್ಯಾರ್ಥಿನಿಯು ಕಾಲೇಜಿಗೆ ಹಾಗೂ ರಾಯಚೂರು ಜಿಲ್ಲೆಗೆ ಕೀರ್ತಿತಂದಿದ್ದಾಳೆ.
ಈಕೆಯ ಸಾಧನೆಯನ್ನು  ಶಾಸಕರು ಹಾಗೂ ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಡಿ.ಎಸ್ ಹೂಲಗೇರಿ, ಪ್ರಾಚಾರ್ಯರಾದ ಡಾ.ಮಹಾಂತಗೌಡ ಪಾಟೀಲ್, ದೈಹಿಕ ಶಿಕ್ಷಣ ನಿರ್ದೇಶಕರಾದ ಶಿವಾನಂದ ನರಹಟ್ಟಿ ಶ್ಲಾಘಿಸಿದ್ದಾರೆ. ಇನ್ನೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿವರ್ಗದವರು, ವಿದ್ಯಾರ್ಥಿಗಳು ಅಭಿನಂದಿಸಿ ಅಂತರ ವಿಶ್ವವಿದ್ಯಾಲಯಗಳ ಪದ್ಯಾವಳಿಯಲ್ಲಿ ಜಯಗಳಿಸಲೆಂದು ಶುಭಹಾರೈಸಿದ್ದಾರೆ.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

No comments:

Post a Comment