ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಛಲವಾದಿ ಮಹಾಸಭಾದ ಹೋಬಳಿ ಘಟಕವನ್ನು ರಚನೆ ಮಾಡಲಾಗಿದ್ದು, ಪಾಮನಕಲ್ಲೂರಿನ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಹೋಬಳಿ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಆರ್ ಅಮೀನಗಡ, ಉಪಾಧ್ಯಕ್ಷರಾಗಿ ರಾಜಕುಮಾರ ಪಾಮನಕಲ್ಲೂರು, ಸದಸ್ಯರಾಗಿ ಹುಲುಗಪ್ಪ ಚಿಲ್ಕರಾಗಿ, ಅಮರೇಶ್ ಸಿಎಂ, ಅಮರೇಶ ಎನ್.ಜಿ.ಒ, ಹುಸೇನಪ್ಪ ಇರಕಲ್, ಶಿವಪುತ್ರ ಯಕ್ಲ್ಸಪೂರ, ಹುಚ್ಚಪ್ಪ ಬಸ್ಸಾಪುರ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳನ್ನು ಛಲವಾದಿ ಸಮಾಜದ ಮುಖಂಡರು ಸನ್ಮಾನಿಸಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಮುಖಂಡರಾದ ನಾಗಲಿಂಗಪ್ಪ ಛಲವಾದಿ, ಮೌನೇಶ ಅಮೀನಗಡ, ಸುರೇಶ್ ಬಸ್ಸಾಪುರು, ಮಲ್ಲಪ್ಪ ಗೋನಾಳ ಸೇರಿದಂತೆ ಅನೇಕರು ಇದ್ದರು.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

No comments:
Post a Comment