ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಗುಡದೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಬಸವರಾಜ ಸ್ವಾಮಿ, ಉಪಾಧ್ಯಕ್ಷರಾಗಿ ಚನ್ನಪ್ಪ ಸಾಹುಕಾರ್ ಆಯ್ಕೆಯಾಗಿದ್ದಾರೆ.
ಗೋವಿಂದಪ್ಪ ನಾಯಕ ರಂಗಾಪೂರ, ಗೋನಾಳದ ಪ್ರಥಮ ದರ್ಜೆ ಗುತ್ತೆದಾರ ಚಿನ್ನನಗೌಡ, ಅಮರೇಶ ದುಗನೂರ ಹಸ್ಮಕಲ್ ರವರ ನೇತೃತ್ವದಲ್ಲಿ ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ನೂತನ ಅಧ್ಯಕ್ಷರು, ಉಪಾಧ್ಯಕ್ಷರಾಗಿ ಬಸವರಾಜ ಸ್ವಾಮಿ ಹಸ್ಮಕಲ್, ಚನ್ನಪ್ಪ ಸಾಹುಕಾರ್ ಆಯ್ಕೆಯಾಗಿರುವುದು ಸಂತಸ ತಂದಿದೆ. ಅವರನ್ನು ಅಭಿನಂದಿಸುತ್ತೇವೆಂದು ರಂಗಾಪೂರ ಗ್ರಾಮ ಪಂಚಾಯತಿ ಸದಸ್ಯೆ ಸುನೀತಾ ಗಂಡ ಬಸವರಾಜ ನಾಯಕ ಹಾಗೂ ಪತಿ ಬಸವರಾಜ ನಾಯಕ ಹರ್ಷ ವ್ಯಕ್ತಪಡಿಸಿದ್ದಾರೆ.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )
No comments:
Post a Comment