Thursday, January 9, 2020

ಬಿಜೆಪಿಗೆ ಶಾಕ್ ನೀಡಿದ ಶ್ರೀರಾಮುಲು ಅಭಿಮಾನಿಗಳು..!


ದೊರೆ ನ್ಯೂಸ್ ಕನ್ನಡ: ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ಇಂದು ನಡೆದ ಸಿಎಎ ಪರ ಬೈಕ್ ರ್ಯಾಲಿ, ಬೃಹತ್ ಬಹಿರಂಗ ಸಭೆ ಹಾಗೂ ಬಿಜೆಪಿ ತಾಲೂಕು ಘಟಕದ ನೂತನ ಕಾರ್ಯಾಲಯ ಉದ್ಘಾಟನೆ ಮತ್ತು ಮಾಜಿ (ಅನರ್ಹ) ಶಾಸಕ ಪ್ರತಾಪಗೌಡ ಪಾಟೀಲ್ ಸೇರಿ ಅನೇಕರು ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರಿಗೆ ಶ್ರೀರಾಮುಲು ಅಭಿಮಾನಿಗಳು ಶಾಕ್ ನೀಡಿದರು.
ಹೌದು, ಪಕ್ಷದ ಕಾರ್ಯಕ್ರಮದ ಬ್ಯಾನರ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಿಜೆಪಿಯ ಹಿರಿಯ ನಾಯಕರಾದ ಶ್ರೀರಾಮುಲುರವರ ಪೋಟೋ ಹಾಕದಿದ್ದ ಕಾರಣ ಶ್ರೀರಾಮುಲು ಅಭಿಮಾನಿಗಳು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಹಿರಂಗ ಸಭೆಯ ವೇಳೆಯಲ್ಲಿ ಅನೇಕ ಯುವಕರು ಕೊಪ್ಪಳ ಸಂಸದ ಸಂಗಣ್ಣ ಕರಡಿ, ಮಾಜಿ (ಅನರ್ಹ) ಶಾಸಕ ಪ್ರತಾಪಗೌಡ ಪಾಟೀಲ್, ಬಿಜೆಪಿ ನಾಯಕ ಬಸನಗೌಡ ತುರುವಿಹಾಳ, ಬಿಜೆಪಿ ಜಿಲ್ಲಾಧ್ಯಕ್ಷರು ಸೇರಿದಂತೆ ಅನೇಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )

No comments:

Post a Comment