Friday, June 19, 2020

ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ ಎರಡು ಕಿಡ್ನಿ ಕಳೆದುಕೊಂಡು ಅತಿಥಿ ಉಪನ್ಯಾಸಕ

(ತನ್ನ ಎರಡು ಕಿಡ್ನಿಯೂ ಇಲ್ಲ, ತನ್ನನ್ನು ಆರೈಕೆ ಮಾಡ್ತಿದ್ದ ಮಡದಿಯೂ ಇಲ್ಲ, ಚಿಕಿತ್ಸೆಗಾಗಿ ಮಾಡಿದ್ದ 15-20 ಲಕ್ಷ ರೂ. ಸಾಲ, ಮಕ್ಕಳ ಪಾಲನೆಗೆ ಸರ್ಕಾರ ನೆರವಾಗಬೇಕೆಂದು ವಿಡಿಯೋ ಮಾಡುವ ಮೂಲಕ ಸಿ‌‌.ಎಂ ಹಾಗೂ ಡಿ.ಸಿ.ಎಂ ಗಳಿಗೆ ಮನವಿ ಮಾಡಿದ್ದಾರೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅತಿಥಿ ಉಪನ್ಯಾಸಕ ಡಾ.ಅಮರೇಶ್ ಆಲ್ಕೋಡ್)
ರಾಯಚೂರು: ಕಳೆದ ಆರು ವರ್ಷಗಳಿಂದ ಜಿಲ್ಲೆಯ ಲಿಂಗಸುಗೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ವಿಷಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಸಲ್ಲಿಸುತ್ತಿದ್ದ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದ ಡಾ.ಅಮರೇಶ್ ತಂದೆ ಹನುಮಂತ ಆಲ್ಕೋಡ್ ಕಳೆದ ಮೂರು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ.
ಅವರು ವಾರಕ್ಕೆ ಎರಡು ಸಾರಿ ಡಯಾಲಿಸಸ್ ಮಾಡಿಸಿಕೊಳ್ಳುತ್ತಿದ್ದು, ಡಯಾಲಿಸಸ್ ಮತ್ತು ಕಿಡ್ನಿಗಳ ಚಿಕಿತ್ಸೆಯ ಸಲುವಾಗಿ ಇದುವರೆಗೂ ಸುಮಾರು 15-20 ಲಕ್ಷ ರೂ.ಗಳನ್ನು ಈಗಾಗಲೇ ಸಾಲಸೂಲ ಮಾಡಿ ಕರ್ಚು ಮಾಡಿಕೊಂಡಿದ್ದಾರೆ. ಅಲ್ಲದೇ ಕಳೆದ ತಿಂಗಳಷ್ಟೇ ಹೃದಯಾಘಾತದಿಂದ ಇವರ ಪತ್ನಿ ಕೂಡ ಮೃತಪಟ್ಟಿದ್ದಾರೆ. ಮನೆಯಲ್ಲಿ ಉಂಟಾದ ಆರ್ಥಿಕ ಪರಿಸ್ಥಿತಿಯಿಂದಾಗಿ ಹೆಂಡತಿಗೆ ಚಿಕಿತ್ಸೆ ಕೊಡಿಸಲಾಗದೆ ಡಾ.ಅಮರೇಶ್ ಆಲ್ಕೋಡ್ ಹೆಂಡತಿಯನ್ನು ಕಳೆದುಕೊಂಡಿದ್ದಾರೆ. 
ಇನ್ನೂ ತನ್ನ ಮಕ್ಕಳ ಪಾಲನೆಗಾಗಿ ಮತ್ತು ತನ್ನ ಮುಂದಿನ ಜೀವನಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ವಿಡಿಯೋವೊಂದನ್ನು ಮಾಡಿರುವ ಇವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ ನಾರಾಯಣರವರಿಗೆ ವಿಡಿಯೋ ಮೂಲಕ ತನ್ನ ಕುಟುಂಬದ ನೋವನ್ನು ತಿಳಿಸಿದ್ದಾರೆ. ಅಲ್ಲದೇ ನೆರವು ನೀಡುವಂತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇವರ ಆರೋಗ್ಯ ದೃಷ್ಟಿಯಿಂದ ಹಾಗೂ ಇವರ  ಮಕ್ಕಳ ಭವಿಷ್ಯದ ಸಲುವಾಗಿ ಆದರೂ ಸರ್ಕಾರ ಇವರ ನೆರವಿಗೆ ಮುಂದಾಗಲಿ. ಇವರಿಗೆ ಸರ್ಕಾರದ ವತಿಯಿಂದ ಒಳ್ಳೆಯ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿ ಎಂಬುದು ಈ ಭಾಗದ ಜನರ ಮತ್ತು ಇವರ ಕುಟುಂಬದ ಮನವಿಯಾಗಿದೆ. 
ಡಾ.ಅಮರೇಶ್ ಆಲ್ಕೋಡ್ ರವರ ನೋವಿಗೆ ಸ್ಪಂದಿಸುವ ಮನಸ್ಸುಗಳು, ಇವರ ಕುಟುಂಬಕ್ಕೆ ನೆರವಾಗುವ ಹೃದಯವಂತರು ಇವರ ದೂರವಾಣಿ ಸಂಖ್ಯೆ: 6364056438‌ & 8105559685 ಗೆ ಕರೆಮಾಡಿ ಧೈರ್ಯ ಹೇಳಿ, ಬ್ಯಾಂಕ್ ಖಾತೆಯ ವಿವರ: ಡಾ. ಅಮರೇಶ್ ಆಲ್ಕೋಡ್, ಎಸ್.ಬಿ.ಐ ಬ್ಯಾಂಕ್, ಸಿರವಾರ ಶಾಖೆ, ಖಾತೆ ಸಂಖ್ಯೆ 31090846274 ಐ.ಎಫ್.ಎಸ್.ಸಿ ಕೋಡ್: SBIN0011137 ಮೂಲಕ ಕೈಲಾದ ಸಹಾಯ ಮಾಡಬಹುದಾಗಿದೆ.

No comments:

Post a Comment