Sunday, August 16, 2020

ಪಾಮನಕಲ್ಲೂರು: ಎಸ್ಎಸ್ಎಲ್ಸಿ, ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ

ದೊರೆ ನ್ಯೂಸ್ ಕನ್ನಡ, ರಾಯಚೂರು(ಆ.15): 74ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ವಿವಿಧೆಡೆ ಧ್ವಜಾರೋಹಣ ಕಾರ್ಯಕ್ರಮಗಳು ನಡೆದಿವೆ. ಸರ್ಕಾರಿ ಕನ್ನಡ ಮಾಧ್ಯಮ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದ ಕೆಲ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಸರ್ಕಾರಿ ಕನ್ನಡ ಮಾಧ್ಯಮ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ: 

ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕಡೆಗಳಲ್ಲಿ ವ್ಯಾಸಂಗ ಮಾಡಿ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಪಡೆದ ಪವಿತ್ರ ತಂದೆ ಶಿವಗೇನಪ್ಪ ಚೌಡ್ಲಿ, ಸೋಫಿಯಾಬೇಗಂ ತಂದೆ ಮದರಸಾಬ್, ಬಸವರಾಜ್ ತಂದೆ ಸಂಜೀವಪ್ಪ, ಜಾನಕಿ ತಂದೆ ಯಂಕಪ್ಪ, ಪ್ರವೀಣ್ ಕುಮಾರ್ ತಂದೆ ಸಂಜೀವಪ್ಪ ಹಾಗೂ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಸಿದ್ದಣ್ಣ ತಂದೆ ಯಂಕಪ್ಪ, ಹನುಮಂತ ತಂದೆ ದುರುಗಪ್ಪ ಎಂಬ ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ಮುಖ್ಯೋಪಾಧ್ಯಾಯ ಮಹಾಮನಿಯಪ್ಪ, ದೈಹಿಕ ಶಿಕ್ಷಕ ಮುಸ್ತಾಕ್ ಅಹಮ್ಮದ್ ಗ್ರಾಮಸ್ಥರಾದ ದುರುಗಪ್ಪ ಗಂಟ್ಲಿ, ರಮೇಶ್ ಗಂಟ್ಲಿ, ಲಚಮಪ್ಪ ಕೊಂಡಾಲ್, ವಿಜಯಕುಮಾರ್ ಗುತ್ತೇದಾರ್, ಅಮರೇಶ್ ಕರಿವಾಳಪ್ಪ ಸೇರಿದಂತೆ ಅನೇಕರಿದ್ದರು‌.

ಗ್ರಾಮದ ನಾಡ ಕಛೇರಿ, ಗ್ರಾಮ ಪಂಚಾಯ್ತಿ, ರೈತ ಸಂಪರ್ಕ ಕೇಂದ್ರ, ಸರ್ಕಾರಿ ಪ್ರೌಡ ಶಾಲೆ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಅನೇಕ ಕಡೆಗಳಲ್ಲಿ ಸಂಬಂಧಿಸಿದವರ ನೇತೃತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.

ಚಿತ್ರ & ಸುದ್ದಿ: ಶ್ರೀನಿವಾಸ್ ಸಾನಬಾಳ್, ಪಾಮನಕಲ್ಲೂರು

-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: ( dorenewskannada@gmail.com ) ಹಾಗೂ ದೊರೆ ನ್ಯೂಸ್ ಕನ್ನಡ ವೆಬ್ ಸೈಟ್ (ಬ್ಲಾಗ್), ಫೇಸ್ಬುಕ್ ಖಾತೆ, ಫೇಸ್ಬುಕ್ ಪೇಜ್, ಫೇಸ್ಬುಕ್ ಗ್ರುಪ್, ಯೂಟ್ಯೂಬ್ ಚ್ಯಾನಲ್ ಗಳನ್ನು ಪ್ರೋತ್ಸಾಹಿಸುವ ಮೂಲಕ ನಮ್ಮ ಕಿರು ಪ್ರಯತ್ನಕ್ಕೆ ಸಹಕರಿಸಿ ಮಿತ್ರರೇ..

No comments:

Post a Comment