ರಾಯಚೂರು (ಡಿ.05): ಉಸ್ಕಿಹಾಳ ವಾಲ್ಮೀಕಿ ಗುರುಪೀಠದ ಗುರುಗಳಾದ ಆತ್ಮಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ, ಜಿಲ್ಲೆಯ ಮಸ್ಕಿ ತಾಲೂಕಿನ ಉಸ್ಕಿಹಾಳ ಗ್ರಾಮದ ವಾಲ್ಮೀಕಿ ಗುರುಪೀಠದಲ್ಲಿ ವಾಲ್ಮೀಕಿ ನಾಯಕ ಸಮಾಜದ ಚಿಂತನ – ಮಂಥನ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಆತ್ಮಾನಂದ ಸ್ವಾಮೀಜಿಗಳು, ವಾಲ್ಮೀಕಿ ನಾಯಕ ಸಮಾಜವನ್ನು ಬಲಿಷ್ಟಗೊಳಿಸುವ ನಿಟ್ಟಿನಲ್ಲಿ ಹಾಗೂ ಸಮಾಜವನ್ನು ಒಗ್ಗಟ್ಟಾಗಿಸಲು ಚಿಂತನ – ಮಂಥನ ಸಭೆಗಳು ಅವಶ್ಯಕವಾಗಿವೆ. ಇದೇ 29ರಂದು ಮಸ್ಕಿ ತಾಲೂಕಿನ ತಿಮ್ಮಾಪೂರದಲ್ಲಿ ಚಿಂತನ – ಮಂಥನ ಸಭೆ ನಡೆಸಲಾಗುತ್ತದೆ. ವಾಲ್ಮೀಕಿ ನಾಯಕ ಸಮಾಜದ ಯುವ ಜನತೆ ಸಭೆಗೆ ಆಗಮಿಸಬೇಕು. ಸಮಾಜದ ಏಳ್ಗೆಯಲ್ಲಿ ಯುವಕರ ಪಾತ್ರ ಮಹತ್ವದಾಗಿರುತ್ತದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಜಾಲಿ ಶೇಖರಗೌಡ ಬಳಗಾನೂರು, ಶೇಖರಗೌಡ ಕಾಟಗಲ್, ವಕೀಲರಾದ ಶಿವಕುಮಾರ ನಾಯಕ ರಾಯಚೂರು, ಗೋವಿಂದ ನಾಯಕ ರಾಯಚೂರು, ಮೌನೇಶ ನಾಯಕ ಪಂಚಮುಖಿ ಗಾಣದಾಳ, ಅಂಬಣ್ಣ ಡೋಣಮರಡಿ, ಉಸ್ಕಿಹಾಳದ ಆದಿತ್ಯ ನಾಯಕ, ಗ್ವಾಲಪ್ಪ ನಾಯಕ, ಮರಿಸ್ವಾಮಿ ನಾಯಕ, ಕನಕರಾಯ ಮಾಲೀಪಾಟೀಲ್, ಮೌನೇಶ್ ನಾಯಕ, ನರಸನಗೌಡ ಮಾಲೀಪಾಟೀಲ್ ಮ್ಯಾದರಹಾಳ, ವೆಂಕಟೇಶ ಕೋಳಬಾಳ, ಶಿವಪುತ್ರಪ್ಪ ಮಾರಲದಿನ್ನಿ, ಚಂದ್ರಶೇಖರ್ ಉದ್ಬಾಳ ಸೇರಿದಂತೆ ಅನೇಕರಿದ್ದರು.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು ಇದ್ದಲ್ಲಿ ಇಮೇಲ್ ಮಾಡಿ: ( dorenewskannada@gmail.com ) ಹಾಗೂ ದೊರೆ ನ್ಯೂಸ್ ಕನ್ನಡ ವೆಬ್ ಸೈಟ್ (ಬ್ಲಾಗ್), ಫೇಸ್ಬುಕ್ ಖಾತೆ, ಫೇಸ್ಬುಕ್ ಪೇಜ್, ಫೇಸ್ಬುಕ್ ಗ್ರುಪ್, ಯೂಟ್ಯೂಬ್ ಚ್ಯಾನಲ್ ಗಳನ್ನು ಪ್ರೋತ್ಸಾಹಿಸುವ ಮೂಲಕ ನಮ್ಮ ಕಿರು ಪ್ರಯತ್ನಕ್ಕೆ ಸಹಕರಿಸಿ ಮಿತ್ರರೇ..
No comments:
Post a Comment