Tuesday, January 26, 2021

ಪಾಮನಕಲ್ಲೂರು: ವಿವಿಧೆಡೆ ಧ್ವಜಾರೋಹಣ; ಅನೇಕರು ಭಾಗಿ



ದೊರೆ ನ್ಯೂಸ್ ಕನ್ನಡ, ರಾಯಚೂರು (ಜ.26): ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ 72ನೇ ಗಣರಾಜ್ಯೋತ್ಸವದ ಅಂಗವಾಗಿ ಸರ್ಕಾರಿ ಕನ್ನಡ ಮಾಧ್ಯಮ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಪ್ರೌಡ ಶಾಲೆ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ, ನಾಡ ಕಚೇರಿ, ಗ್ರಾಮ ಪಂಚಾಯತಿ ಕಾರ್ಯಲಯ, ರೈತ ಸಂಪರ್ಕ ಕೇಂದ್ರ ಸೇರಿದಂತೆ ಅನೇಕ ಕಡೆಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಆಡಳಿತ ಅಧಿಕಾರಿ ಹಾಗೂ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಶ್ರೀಶೈಲ ಭೋವಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಮರೇಶಪ್ಪ, ಸುರೇಶ್, ಪರಮಣ್ಣ, ಸೂಗಪ್ಪ, ನಾಗಲಿಂಗಪ್ಪ ಸೇರಿದಂತೆ ಅನೇಕರಿದ್ದರು‌. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಇದ್ದರು. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಯ್ಯಪ್ಪ ಕುರುಬರ, ಉಪಾಧ್ಯಕ್ಷೆ ಶಾರದಾ ಅಮರೇಶ್, ಸದಸ್ಯರಾದ ಹೂವಪ್ಪ, ಶಿವರಾಜ್, ದುರುಗಪ್ಪ, ಮುಖ್ಯ ಶಿಕ್ಷಕರಾದ ಗಣೇಶ್, ಶಿಕ್ಷಕರಾದ ಮಾಲತೇಶ್, ಶಶಿಕಲಾ, ಪರಿನಾಬಿ ಸೇರಿದಂತೆ ಅನೇಕರಿದ್ದರು.

-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: ( dorenewskannada@gmail.com ) ಹಾಗೂ ದೊರೆ ನ್ಯೂಸ್ ಕನ್ನಡ ವೆಬ್ ಸೈಟ್ (ಬ್ಲಾಗ್), ಫೇಸ್ಬುಕ್ ಖಾತೆ, ಫೇಸ್ಬುಕ್ ಪೇಜ್, ಫೇಸ್ಬುಕ್ ಗ್ರುಪ್, ಯೂಟ್ಯೂಬ್ ಚ್ಯಾನಲ್ ಗಳನ್ನು ಪ್ರೋತ್ಸಾಹಿಸುವ ಮೂಲಕ ನಮ್ಮ ಕಿರು ಪ್ರಯತ್ನಕ್ಕೆ ಸಹಕರಿಸಿ ಮಿತ್ರರೇ..

Thursday, January 21, 2021

ಪಾಮನಕಲ್ಲೂರು: ಅಂಬಿಗರ ಚೌಡಯ್ಯ ಜಯಂತಿ ಆಚರಣೆ: ವಿವಿಧ ಸಮುದಾಯಗಳ ಮುಖಂಡರು ಭಾಗಿ

 


ದೊರೆ ನ್ಯೂಸ್ ಕನ್ನಡ, ರಾಯಚೂರು (ಜ.21): ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತೋತ್ಸವ ಕಾರ್ಯಕ್ರಮವನ್ನು ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳನ್ನು ಉಚಿತವಾಗಿ ನೀಡುವ ಮೂಲಕ ವಿಶೇಷವಾಗಿ ಆಚರಿಸಲಾಯಿತು.

ಜಾತಿ, ಮತ, ಪಂಥಗಳ ಭೇದಭಾವ ತೋರೆದ ಗ್ರಾಮಸ್ಥರು ಗ್ರಾಮದ ಮೇನ್ ರೋಡ್ ಸರ್ಕಲ್ (ಪಾಮನಕಲ್ಲೂರು - ಹಟ್ಟಿ ರೋಡ್ ಸರ್ಕಲ್) ಬಳಿ ಇರುವ ನಿಜ ಶರಣ ಅಂಬಿಗರ ಚೌಡಯ್ಯರವರ ನಾಮಫಲಕಕ್ಕೆ ಪೂಜೆ ಸಲ್ಲಿಸಿದರು. ಈ ವೇಳೆ ಅಂಬಿಗ ಸಮಾಜದ ಮುಖಂಡರು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ವಿವಿಧ ಸ್ಫರ್ಧಾತ್ಮಕ ಪರೀಕ್ಷೆಯ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.

ಇದೇ ವೇಳೆ ಪ್ರತಿಯೊಬ್ಬ ಮಹಾತ್ಮರ ಜಯಂತೋತ್ಸವದ ಸಂದರ್ಭದಲ್ಲಿ ಪೂಜೆ ಸಲ್ಲಿಸುವಂತೆ ಗ್ರಾಮದ ಮೇನ್ ರೋಡ್ ಸರ್ಕಲ್ ನಲ್ಲಿರುವ ಒಳಬಳ್ಳಾರಿ ಚನ್ನಬಸವೇಶ್ವರ, ಮಹರ್ಷಿ ವಾಲ್ಮೀಕಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಕನಕದಾಸ, ಟಿಪ್ಪು ಸುಲ್ತಾನ್ ಸೇರಿದಂತೆ ಅನೇಕ ಮಹಾತ್ಮರ ನಾಮಫಲಕಗಳಿಗೆ ಪೂಜೆ ಸಲ್ಲಿಸಲಾಯಿತು. ಜಯಂತೋತ್ಸವ ಕಾರ್ಯಕ್ರಮದಲ್ಲಿ ಅಂಬಿಗ ಸಮಾಜದ ಮುಖಂಡರು, ಯುವಕರು, ವಿವಿಧ ಸಮುದಾಯಗಳ ಮುಖಂಡರು, ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಅನೇಕರಿದ್ದರು.

-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: ( dorenewskannada@gmail.com ) ಹಾಗೂ ದೊರೆ ನ್ಯೂಸ್ ಕನ್ನಡ ವೆಬ್ ಸೈಟ್ (ಬ್ಲಾಗ್), ಫೇಸ್ಬುಕ್ ಖಾತೆ, ಫೇಸ್ಬುಕ್ ಪೇಜ್, ಫೇಸ್ಬುಕ್ ಗ್ರುಪ್, ಯೂಟ್ಯೂಬ್ ಚ್ಯಾನಲ್ ಗಳನ್ನು ಪ್ರೋತ್ಸಾಹಿಸುವ ಮೂಲಕ ನಮ್ಮ ಕಿರು ಪ್ರಯತ್ನಕ್ಕೆ ಸಹಕರಿಸಿ ಮಿತ್ರರೇ..

Monday, January 11, 2021

ಪಾಮನಕಲ್ಲೂರು: ವಾರ್ಡ್ ನಂಬರ್ 1ರಲ್ಲಿ ನೀರಿನ ಸಮಸ್ಯೆ; ಪರಿಹಾರಕ್ಕೆ ಕರವೇ ಆಗ್ರಹ



ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ವಾರ್ಡ್ ನಂಬರ್: 1ರ ಎಸ್ಸಿ ಹೋಣಿ ಹತ್ತಿರ ಕಳೆದ ಅನೇಕ ತಿಂಗಳುಗಳಿಂದ ಬಳಕೆ ನೀರು, ಕುಡಿಯುವ ನೀರಿನ ಸಮಸ್ಯೆ ಇದ್ದು, ಸಮಸ್ಯೆ ಪರಿಹರಿಸುವ ಕೆಲಸವನ್ನು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಮಾಡುತ್ತಿಲ್ಲವೆಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಹೋಬಳಿ ಘಟಕದ ಅಧ್ಯಕ್ಷ ರಮೇಶ್ ಗಂಟ್ಲಿ, ಖಜಾಂಚಿ ಮಲ್ಲಪ್ಪ ಹಿರೇಮನಿ ಆರೋಪಿಸಿದ್ದಾರೆ.

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ, ಬಳಕೆ ನೀರಿನ ಸಮಸ್ಯೆ ಇವತ್ತು ನಿನ್ನೆಯದ್ದಲ್ಲ, ಕಳೆದ ಅನೇಕ ತಿಂಗಳುಗಳಿಂದ ಗ್ರಾಮಸ್ಥರು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕುರಿತು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅಮರೇಶಪ್ಪರವರಿಗೆ ಈಗಾಗಲೇ ಅನೇಕ ಭಾರಿ ತಿಳಿಸಿದ್ದೇವೆ. ಭೇಟಿಯಾದಾಗ, ಪೋನ್ ಮಾಡಿ ಹೇಳಿದಾಗೊಮ್ಮೆ ಸಮಸ್ಯೆ ಪರಿಹರಿಸುತ್ತೇವೆ ಎಂದು ಹೇಳುವ ಪಿಡಿಒ ಅಮರೇಶಪ್ಪರವರು ಇದುವರೆಗೂ ಗ್ರಾಮಸ್ಥರ ನೀರಿನ ಬವಣೆ ನೀಗಿಸಿಲ್ಲ. ಬರೀ ಮಾತಲ್ಲೇ ಮನೆ ಕಟ್ಟುವ ಕೆಲಸವನ್ನು ಪಿಡಿಒ ಮಾಡುತ್ತಿದ್ದಾರೆ.

ವಾರ್ಡ್ ನಂಬರ್ 1ರ ಎಸ್ಸಿ ಹೋಣಿ ಹತ್ತಿರ, ಗಡ್ಡೆ ಮೇಲಿನ ಮನೆಗಳು ಸೇರಿದಂತೆ ಅನೇಕ ಕಡೆಗಳಲ್ಲಿ ಸರಿಯಾಗಿ ನೀರು ಬರುತ್ತಿಲ್ಲ. ಟುಬಾಕಿ ದುರುಗಪ್ಪ ರವರ ಮನೆಯ ಹತ್ತಿರದಿಂದ ಪೂಜಪ್ಪರವರ ಮನೆಯವರಿಗೆ ಪೈಪ್ ಲೈನ್ ಮಾಡಬೇಕಾಗಿದ್ದು, ಈ ಹಿಂದೆಯೇ ಪೈಪ್ ಲೈನ್ ಮಾಡುವ ಸಲುವಾಗಿ ಗ್ರಾಮಸ್ಥರ ನೇತೃತ್ವದಲ್ಲಿ ಹಿಂದಿನ ಪಿಡಿಒ ಕೃಷ್ಣ ಸರ್ವೆ ಕಾರ್ಯ ನಡೆಸಿದ್ದರು. ಪಿಡಿಒ ಬದಲಾದರು ಪೈಪ್ ಲೈನ್ ವ್ಯವಸ್ಥೆ ಮಾಡಿಲ್ಲ ಎಂದು ಕರವೇ ಹೋಬಳಿ ಘಟಕದ ಅಧ್ಯಕ್ಷ ರಮೇಶ್ ಗಂಟ್ಲಿ, ಖಜಾಂಚಿ ಮಲ್ಲಪ್ಪ ಹಿರೇಮನಿ ಸೇರಿದಂತೆ ಕರವೇ ಮುಖಂಡರು ಗಂಭೀರ ಆರೋಪ ಮಾಡಿದ್ದಾರೆ.

Wednesday, January 6, 2021

ವಾಣಿಜ್ಯ ಶಾಸ್ತ್ರ ವಿಭಾಗ: ಶಾಂತಕುಮಾರ್ ಗೆ ಪಿಎಚ್ಡಿ



ರಾಯಚೂರು: ಗುಲಬುರ್ಗಾ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ರಾಯಚೂರು ಮೂಲದ ಶಾಂತಕುಮಾರ ಬಜಾರಪ್ಪ ಅವರಿಗೆ ಗುಲಬುರ್ಗಾ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ಪ್ರಕಟಿಸಿದೆ.

ಶಾಂತಕುಮಾರ್ ಅವರು, "ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರಾಕ್ಟೀಸಸ್ ಇನ್ ಸಿಮೆಂಟ್ ಇಂಡಸ್ಟ್ರಿ ಎ ಸ್ಟಡಿ ವಿಥ್ ರೆಫರೆನ್ಸ್ ಟು ರಾಜಶ್ರೀ ಸಿಮೆಂಟ್ ವರ್ಕ್ಸ್ ಮಳಖೇಡ್ ಕಲಬುರಗಿ" ಎಂಬ ಮಹಾಪ್ರಬಂಧ ಮಂಡಿಸಿದ್ದರು.

ಗುಲಬುರ್ಗಾ ವಿಶ್ವವಿದ್ಯಾಲಯ ಕಲಬುರಗಿಯ ಪ್ರೊ. ವಾಘಮಾರೆ ಶಿವಾಜೀ ಅವರು ಶಾಂತಕುಮಾರ್ ರವರಿಗೆ ಮಾರ್ಗದರ್ಶನ ಮಾಡಿದ್ದಾರೆ.

-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: ( dorenewskannada@gmail.com ) ಹಾಗೂ ದೊರೆ ನ್ಯೂಸ್ ಕನ್ನಡ ವೆಬ್ ಸೈಟ್ (ಬ್ಲಾಗ್), ಫೇಸ್ಬುಕ್ ಖಾತೆ, ಫೇಸ್ಬುಕ್ ಪೇಜ್, ಫೇಸ್ಬುಕ್ ಗ್ರುಪ್, ಯೂಟ್ಯೂಬ್ ಚ್ಯಾನಲ್ ಗಳನ್ನು ಪ್ರೋತ್ಸಾಹಿಸುವ ಮೂಲಕ ನಮ್ಮ ಕಿರು ಪ್ರಯತ್ನಕ್ಕೆ ಸಹಕರಿಸಿ ಮಿತ್ರರೇ..