Monday, February 14, 2022

ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್

ಸದನದಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮಾತನಾಡುತ್ತಿರುವುದು

 

ಬೀದರ್ (ಫೆ.14): ಇತ್ತೀಚೆಗೆ ನಿಧನರಾದ ಗಣ್ಯರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಬಂಡೆಪ್ಪ ಖಾಶೆಂಪುರ್ ರವರು ಸಂತಾಪ ವ್ಯಕ್ತಪಡಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ಮೊದಲ ದಿನದ ಕಲಾಪದಲ್ಲಿ ಪಾಲ್ಗೊಂಡು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮಂಡಿಸಿದ ಸಂತಾಪ ಸೂಚಕ ನಿರ್ಣಯದ ಮೇಲೆ ಮಾತನಾಡಿ ಸಂತಾಪ ವ್ಯಕ್ತಪಡಿಸಿದ ಅವರು, ಮಾಜಿ ಸಚಿವ ಡಾ. ಜೆ ಅಲೆಕ್ಸಾಂಡರ್, ಮಾಜಿ ಸ್ಪೀಕರ್ ಎಮ್.ಎನ್ ಸಜ್ಜನ್, ಮಾಜಿ ಶಾಸಕ ಹೆಚ್.ಬಿ ಪಾಟೀಲ್, ಶ್ರೇಷ್ಠ ಗಾಯಕಿ ಲತಾ ಮಂಗೇಶ್ಕರ್, ಸಾಹಿತಿ ಚಂದ್ರಶೇಖರ್ ಪಾಟೀಲ್ (ಚಂಪಾ), ಸಂತ ಇಬ್ರಾಹಿಂ ಸುತಾರ್, ನ್ಯಾಯಮೂರ್ತಿ ಕೆ.ಎಲ್ ಮಂಜುನಾಥ ರವರು ಇತ್ತಿಚ್ಛೆಗೆ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬ ವರ್ಗಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ಕರುಣಿಸಲಿ ಎಂದರು.

ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್

ಮಾಜಿ ಸಚಿವ ಅಲೆಕ್ಸಾಂಡರ್ ರವರು ಅಧಿಕಾರಿಯಾಗಿದ್ದಾಗಲೂ ಮತ್ತು  ರಾಜಕಾರಣಿಯಾಗಿ ಕೂಡ ಒಳ್ಳೆಯ ಕೆಲಸಗಳನ್ನು ಮಾಡಿದ್ದರು. ಮಾಜಿ ಶಾಸಕ ಎಮ್.ಎನ್ ಸಜ್ಜನ್ ರವರು ಶಾಸಕರಾಗಿ ಉತ್ತಮ ಕೆಲಸಗಳನ್ನು ಮಾಡಿದ್ದರು. ಅವರ ಹೆಸರಿನಂತೆಯೇ ಅವರು ಬಹಳಷ್ಟು ಸರಳ ಸಜ್ಜನ ವ್ಯಕ್ತಿಯಾಗಿದ್ದರು. ಮಾಜಿ ಸಚಿವ ಹೆಚ್.ಬಿ ಪಾಟೀಲ್ ರವರು ಕೂಡ ಬಹಳಷ್ಟು ಉತ್ತಮ ವ್ಯಕ್ತಿಯಾಗಿದ್ದರು.

ದೊರೆ ನ್ಯೂಸ್ ಕನ್ನಡ ಫೇಸ್ಬುಕ್ ನಲ್ಲೂ ಸುದ್ದಿ ನೋಡಿ

ಲತಾ ಮಂಗೇಶ್ಕರ್ ರವರ ಬಗ್ಗೆ ಎಷ್ಟು ಹೇಳಿದರು ಕೂಡ ಕಡಿಮೆ. ಗಾನಕೋಗಿಲೆ ಎನ್ನಿಸಿಕೊಂಡ ಅವರು ತಮ್ಮ 13ನೇ ವಯಸ್ಸಿನಲ್ಲಿಯೇ ಗಾಯನ ಸೇವೆ ಪ್ರಾರಂಭಿಸಿದ್ದರು. ಅವರು ನಮ್ಮ ರಾಷ್ಟ್ರದ ಹೆಮ್ಮೆಯ ಗಾಯಕಿಯಾಗಿದ್ದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಕೂಡ ಅಭಿಮಾನಿಗಳನ್ನು ಹೊಂದಿರುವ ಗಾಯಕಿ ಲತಾ ಮಂಗೇಶ್ಕರ್ ರವರಿಗೆ ಗೌರವ ಡಾಕ್ಟರೇಟ್ ಸೇರಿದಂತೆ ಅನೇಕ ಪ್ರಶಸ್ತಿಗಳು ದೊರತಿವೆ. ಭಾರತ ರತ್ನದಂತಹ ಶ್ರೇಷ್ಠ ಪ್ರಶಸ್ತಿ ಕೂಡ ಅವರಿಗೆ ಲಭಿಸಿದೆ. ಅವರು ಪ್ರತಿಯೊಂದು ಹಾಡುಗಳನ್ನು ಬಹಳಷ್ಟು ಶ್ರದ್ಧೆಯಿಂದ ಹಾಡಿದ್ದಾರೆ. ಅವರ ಹಾಡುಗಳು ಬಹಳಷ್ಟು ಅರ್ಥಪೂರ್ಣವಾಗಿವೆ. ಕನ್ನಡದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸಿನಿಮಾದಲ್ಲಿ ಅವರು ಎರಡು ಹಾಡುಗಳನ್ನು ಹಾಡಿದ್ದಾರೆ.

ಚಂದ್ರ ಶೇಖರ್ ಪಾಟೀಲ್ ರವರು ಚಂಪಾ ಎಂದೇ ಪ್ರಸಿದ್ದಿ ಗಳಿಸಿದ್ದರು. ಸಂಕ್ರಮಣ ಎಂಬ ಪತ್ರಿಕೆಯ ಮೂಲಕ ಬರವಣಿಗೆಗೆ ಪ್ರೋತ್ಸಾಹ ನೀಡುವ ಕೆಲಸವನ್ನು ಅವರು ಮಾಡಿದ್ದರು. ರಾಜ್ಯ, ರಾಷ್ಟ್ರಮಟ್ಟದ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದ ಶ್ರೇಷ್ಠ ಸಂತ ಇಬ್ರಾಹಿಂ ಸುತಾರರು ತಮ್ಮಲ್ಲಿನ ವಿಭಿನ್ನ ಕಲೆ, ಸಾಹಿತ್ಯದ ಮೂಲಕ ಸಮಾನತೆಗಾಗಿ ಹೋರಾಡಿದ್ದರು. ನ್ಯಾಯಮೂರ್ತಿ ಮಂಜುನಾಥ ರವರು ಹತ್ತು ಸಾವಿರಕ್ಕೂ ಹೆಚ್ಚಿನ ತಿರ್ಪುಗಳನ್ನು ನೀಡಿದ ಹೆಗ್ಗಳಿಕೆ ಹೊಂದಿದ್ದರು. ತಮ್ಮ ತಮ್ಮ ಕ್ಷೇತ್ರದಲ್ಲಿ ಅನೇಕ ಮಹತ್ವದ ಕಾರ್ಯಗಳನ್ನು ಮಾಡಿದ್ದ ಗಣ್ಯರ ನಿಧನದಿಂದ ರಾಜ್ಯ, ರಾಷ್ಟ್ರಕ್ಕೆ ದೊಡ್ಡಮಟ್ಟದ ನಷ್ಟವಾದಂತಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸಂತಾಪ ಸೂಚನೆಯಲ್ಲಿ ತಿಳಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರಿದರು.

Wednesday, February 9, 2022

ಇಜಾಬ್ ವಿವಾದ ರಾಜಕೀಯ ಪಿತೂರಿ: ಬಂಡೆಪ್ಪ ಖಾಶೆಂಪುರ್

 

https://fb.watch/b3IQdLXmLf/

ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಂಡೆಪ್ಪ ಖಾಶೆಂಪುರ್ ರವರು ಇಜಾಬ್ ವಿವಾದದ ಬಗ್ಗೆ ಬಹಳಷ್ಟು ಅರ್ಥಪೂರ್ಣವಾಗಿ ಮಾತನಾಡಿದ್ದಾರೆ.‌‌
#ಇಜಾಬ್ #ijab

ಮರಕುಂದಾ: ಬೆಳಕು ಯೋಜನೆ ಉದ್ಘಾಟಿಸಿ, ಜನಸ್ಪಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಂಡೆಪ್ಪ ಖಾಶೆಂಪುರ್

ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.


ಬೀದರ್ (ಫೆ.09): ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮರಕುಂದಾ ಗ್ರಾಮದ ಗ್ರಾಮ ಪಂಚಾಯತಿ ಕಛೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ, ಇಂಧನ ಇಲಾಖೆಯ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಪ್ರಾಯೋಜಕತ್ವದ ‘ಬೆಳಕು’ ಯೋಜನೆ ಹಾಗೂ ತಾಲೂಕು, ಹೋಬಳಿ, ಗ್ರಾಮಮಟ್ಟದ ಅಧಿಕಾರಿಗಳನ್ನೊಳಗೊಂಡ ಜನಸ್ಪಂದನಾ ಕಾರ್ಯಕ್ರಮವನ್ನು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೆಳಕು ಯೋಜನೆ ಉತ್ತಮವಾದ ಯೋಜನೆಯಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಯೋಜನೆಯ ಸಫಲತೆಗಾಗಿ ಅಧಿಕಾರಿಗಳು ಕೂಡ ಶ್ರಮವಹಿಸಬೇಕು. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು. ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಬೇಕು. ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸರ್ಕಾರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸಬೇಕೆಂದರು.

ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಗ್ರಾಮಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳನ್ನು ಕರಿಸಿ, ಪ್ರತಿಯೊಬ್ಬರ ಸಮಸ್ಯೆಗಳನ್ನು ಅವರ ಗಮನಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸಿಕೊಡುವುದು. ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವುದು ಜನಸ್ಪಂದನಾ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಗ್ರಾಮಗಳಲ್ಲಿ ವೃದ್ಧಾಪ್ಯ, ವಿಧವಾ ವೇತನ ಸೇರಿದಂತೆ ಅನೇಕ ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿಲ್ಲ. ಇನ್ನೂ ಅನೇಕ ವ್ಯಕ್ತಿಗಳಿಗೆ ಈ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲ. ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಸ್ಥಳೀಯ ಅಧಿಕಾರಿಗಳು ಆ ಕೆಲಸ ಮಾಡಬೇಕು. 

ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳುತ್ತಿಲ್ಲ. ನಮಗೆ ಕೆಲಸ ನೀಡುತ್ತಿಲ್ಲವೆಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಗ್ರಾಮಗಳಲ್ಲಿ ಡಂಗುರಾ ಸಾರಬೇಕು. ಗ್ರಾಮೀಣ ಭಾಗದ ಪ್ರತೊಯೊಬ್ಬರಿಗೂ ಸರ್ಕಾರದ ಯೋಜನೆಗಳು ತಲುಪಬೇಕೆಂದು ಅಧಿಕಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸೂಚಿಸಿದರು.

ಗ್ರಾಮದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕೆಲವು ಸಮಸ್ಯೆಗಳಿವೆ ಪರಿಹಾರ ಒದಗಿಸಿಕೊಡಬೇಕೆಂದು ಗ್ರಾಮಸ್ಥರು, ಶಿಕ್ಷಕರು ಮನವಿ ಮಾಡಿದರು. ಕೂಡಲೇ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುತ್ತೇವೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದರು. ಕೃಷಿ, ಆರೋಗ್ಯ, ಜೆಸ್ಕಾಂ, ತೋಟಗಾರಿಕೆ, ಅರಣ್ಯ, ಕುಡಿಯುವ ನೀರು ಮತ್ತು ನೈರ್ಮಲ್ಯ ಸೇರಿದಂತೆ ಅನೇಕ ಇಲಾಖೆಯ ಅಧಿಕಾರಿಗಳು ಇಲಾಖೆಯಲ್ಲಿನ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿದರು. 

ಜನಸ್ಪಂದನಾ ಕಾರ್ಯಕ್ರಮದಲ್ಲಿ ಅನೇಕ ಸಮಸ್ಯೆಗಳನ್ನು ಜನರು ನಮ್ಮ ಗಮನಕ್ಕೆ ತಂದಿದ್ದಾರೆ. ಕಂದಾಯ ಇಲಾಖೆ ಸೇರಿದಂತೆ ಪ್ರತಿಯೊಂದು ಇಲಾಖೆಯ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳುತ್ತೇವೆ. ಒಂದೇರಡು ವಾರದಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತೇವೆ. ಕೈಗೊಂಡ ಕ್ರಮಗಳ ಬಗ್ಗೆ ಶಾಸಕರಿಗೆ ಮಾಹಿತಿ ನೀಡುತ್ತೇವೆಂದು ಪ್ರೊಬೆಷನರಿ ಐಎಎಸ್ ಅಧಿಕಾರಿ ಕೀರ್ತನಾ ಹೆಚ್.ಎಸ್ ಹೇಳಿದರು. 

ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ನೋಟ್ ಮಾಡಿಕೊಂಡಿದ್ದಾರೆ. ಪ್ರತಿಯೊಂದು ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಕ್ರಮಕೈಗೊಳ್ಳುತ್ತೇವೆ. ಉದ್ಯೂಗ ಖಾತ್ರಿ ಸಮಸ್ಯೆಯನ್ನು ಕೂಡಲೇ ಪರಿಹರಿಸುತ್ತೇವೆಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಗದಿಗೆಪ್ಪ ಕುರಕುಟ್ಟೆ ತಿಳಿಸಿದರು.  

ಕಾರ್ಯಕ್ರಮದಲ್ಲಿ ಬೆಳಕು ಯೋಜನೆಯ ಹಕ್ಕುಪತ್ರ, ವಿವಿಧ ಪ್ರಮಾಣ ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ವಿದ್ಯಾರ್ಥಿಗಳಾದ ನರ್ಮದಾ, ಭಾಗ್ಯ ಜ್ಯೋತಿ ಮತ್ತು ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಆಶಾಕಾರ್ಯಕರ್ತೆ ಸ್ವಪ್ನ ಸ್ವಾಗತ ಗೀತೆ ಹಾಡಿದರು. ಪ್ರೊಬೆಷನರಿ ಐಎಎಸ್ ಅಧಿಕಾರಿ ಕೀರ್ತನಾ ಹೆಚ್.ಎಸ್, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಗದಿಗೆಪ್ಪ ಕುರಕುಟ್ಟೆ, ಜೆಸ್ಕಾಂ ಅಧಿಕಾರಿ ವೀರಭದ್ರಪ್ಪ ಸಾಲಿಮನೆ, ಬಿಇಒ ಸೂರ್ಯಕಾಂತ ಮದಾನೆ, ಗ್ರಾಮ ಪಂಚಾಯತಿ ಅಧ್ಯಕ್ಷೆ, ಮೇಹರುನಾ ಬೇಗಂ, ಉಪಾಧ್ಯಕ್ಷೆ ಶೇಕಮ್ಮಾ, ಪಿಡಿಒ ಶಶಿಕಲಾ, ದೂಳಪ್ಪ, ಸಂಗಾರೆಡ್ಡಿ, ಝಗ್ಗಿ ಅಹಮದ್ ಖಾನ್, ಚನ್ನಪ್ಪ ಚಿಪದಿ, ಇಕ್ಬಾಲ್, ಬಸು ಮೇತ್ರಿ, ಚನ್ನಪ್ಪ ಗಡ್ಡು, ವಿಠಲ್ ಮುತಾಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು. 


ಸರ್ಕಾರಿ ಶಾಲೆಗೆ ಭೇಟಿ: 

ಜನಸ್ಪಂದನಾ ಕಾರ್ಯಕ್ರಮದ ಬಳಿಕ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಭೇಟಿ ನೀಡಿದರು. ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರಾಜೆಕ್ಟರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.  ಈ ವೇಳೆ ಮಾತನಾಡಿದ ಅವರು, ಶಾಲೆಯಲ್ಲಿ ಸದಾಕಾಲವೂ ಮಕ್ಕಳು ಕ್ರಿಯಾಶೀಲರಾಗಿರುವಂತೆ ನೋಡಿಕೊಳ್ಳಬೇಕು. ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವಂತೆ ಗ್ರಾಮಸ್ಥರಿಗೆ ತಿಳಿ ಹೇಳಬೇಕೆಂದು ಶಿಕ್ಷಕರಿಗೆ ತಿಳಿಸಿದರು. ಬಿಇಒ ಸೂರ್ಯಕಾಂತ ಮದಾನೆ, ಅಕ್ಷರ ದಾಸೋಹ ಯೋಜನಾಧಿಕಾರಿ ಗೀತಾ, ಶಾಲೆಯ ಮುಖ್ಯೋಪಾಧ್ಯಾಯರಾದ ದಿಗಂಬರ್ ಸೇರಿದಂತೆ ಅನೇಕರಿದ್ದರು.

ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಉಪಸ್ಥಿತರಿದ್ದರು.


Tuesday, February 8, 2022

ಕೋಳಾರ (ಬಿ): ಗ್ರಾಮ ಸಂಚಾರ ನಡೆಸಿ ಸಮಸ್ಯೆ ಆಲಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್



ಬೀದರ್ (ಫೆ.07): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಳಾರ (ಬಿ) ಗ್ರಾಮದ ರುದ್ರಭೂಮಿ (ಸ್ಮಶಾನ ಭೂಮಿ)ಯ ಸಮಸ್ಯೆ ಪರಿಹಾರಕ್ಕಾಗಿ ಸಹಾಯಕ ಆಯುಕ್ತರು, ತಹಶೀಲ್ದಾರರು ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಸೋಮವಾರ ಆಗಮಿಸಿದ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ನೂತನವಾಗಿ ನಿರ್ಮಾಣವಾಗುತ್ತಿರುವ ಜೈಲ್ ಕಟ್ಟಡದ ಹತ್ತಿರವಿರುವ ವಿವಿಧ ಸಮುದಾಯಗಳ ಸ್ಮಶಾನ ಭೂಮಿಯ ಸಮಸ್ಯೆ ಪರಿಹರಿಸಿದರು. ಬಳಿಕ ಗ್ರಾಮ ಸಂಚಾರ ನಡೆಸಿ, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು.


ತಮ್ಮ ಕೋಟಾದಲ್ಲೇ ಮನೆ ನಿರ್ಮಿಸಿ ಕೊಡುವ ಭರವಸೆ:

ಕೋಳಾರ ಬಿ ಗ್ರಾಮದಲ್ಲಿ ಗ್ರಾಮ ಸಂಚಾರ ನಡೆಸುವ ವೇಳೆಯಲ್ಲಿ ರಸ್ತೆಯ ಪಕ್ಕದಲ್ಲೇ ಬೀಳುವ ಹಂತದಲ್ಲಿದ್ದ ಮನೆಯೊಂದನ್ನು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಗಮನಿಸಿ, ತಾವೇ ಖುದ್ದಾಗಿ ಆ ಮನೆಗೆ ಭೇಟಿ ನೀಡಿ ಮನೆಯಲ್ಲಿದ್ದವರನ್ನು ಮಾತನಾಡಿಸಿದರು.

ಅವರಿಗೆ ಬೇರೆ ಯಾವುದೇ ಮನೆ ಇಲ್ಲ. ತೀರ ಬಡವರು ಎಂಬುದು ಖಾತ್ರಿಯಾಗುತ್ತಿದ್ದಂತೆ ಅವರಿಗೆ ತಮ್ಮ ಕೋಟಾದಲ್ಲಿಯೇ ಮನೆ ನಿರ್ಮಿಸಿ ಕೊಡುವ ಭರವಸೆಯನ್ನು ಶಾಸಕರು ನೀಡಿದರು. ಶಾಸಕರ ಕ್ರಮಕ್ಕೆ ಅನೇಕರು ಸಂತಸ ವ್ಯಕ್ತಪಡಿಸಿದರು. ಬಡವರನ್ನು ಗುರುತಿಸಿ ಅವರಿಗೆ ಸೌಲಭ್ಯ ಕಲ್ಪಿಸಿಕೊಡುವ ಕೆಲಸವಾಗಬೇಕಾಗಿದೆ ಎಂದು ಶಾಸಕರು ಹೇಳಿದರು.

ಗ್ರಾಮದ ವಿವಿಧ ಓಣಿಗಳಿಗೆ ಭೇಟಿ ನೀಡಿ ಗ್ರಾಮಸ್ಥರನ್ನು ಮಾತನಾಡಿಸಿದ ಶಾಸಕರು, ಗ್ರಾಮದಲ್ಲಿನ ಸಮಸ್ಯೆಗಳನ್ನು ಆಲಿಸಿ, ಹಂತಹಂತವಾಗಿ ಪರಿಹಾರ ಒದಗಿಸಿಕೊಡುವ ಭರವಸೆ ನೀಡಿದರು. ಸ್ಥಳೀಯ ಮುಖಂಡರು, ಗ್ರಾಮ ಪಂಚಾಯತಿ ಅಧ್ಯಕ್ಷ, ಸದಸ್ಯರು, ಗ್ರಾಮ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವ ಕೆಲಸ ಮಾಡಬೇಕು. 

ತಮ್ಮಿಂದ ಪರಿಹಾರ ಒದಗಿಸಲಾಗದಂತ ಸಮಸ್ಯೆಗಳಿದ್ದಾಗ ಕೂಡಲೇ ನಮ್ಮ ಗಮನಕ್ಕೆ ತರಬೇಕು. ಸ್ಥಳೀಯರ, ಗ್ರಾಮಸ್ಥರ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸ್ಥಳದಲ್ಲಿದ್ದ ಗ್ರಾಮ ಪಂಚಾಯತಿ ಸದಸ್ಯರಿಗೆ ತಿಳಿಸಿದರು.

ರುದ್ರಭೂಮಿಯ ಸಮಸ್ಯೆ ಪರಿಹರಿಸುವ ವೇಳೆ ಬೀದರ್ ನ ಸಹಾಯಕ ಆಯುಕ್ತರಾದ ಮೊಹಮ್ಮದ್ ನಯೀಮ್ ಮೋಮಿನ್, ತಹಶೀಲ್ದಾರರಾದ ಅಣ್ಣರಾವ್ ಪಾಟೀಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಾಲ್ಮಣಿ, ಗ್ರಾಮ ಲೆಕ್ಕಾಧಿಕಾರಿ ರೇಣುಕಾ, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಮುಖಂಡರು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.