ಬೀದರ್ (ಮೇ.21): ವಿಧಾನ ಪರಿಷತ್ ನ ಹಂಗಾಮಿ ಸಭಾಪತಿಯಾಗಿ ನೇಮಕಗೊಂಡ ರಘುನಾಥ್ ರಾವ್ ಮಲ್ಕಾಪುರೆರವರನ್ನು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಸನ್ಮಾನಿಸಿ ಗೌರವಿಸಿದರು.
ಬೀದರ್
ನಗರದಲ್ಲಿರುವ ಹಂಗಾಮಿ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ರವರ ಮನೆಗೆ ಶನಿವಾರ ಭೇಟಿ ನೀಡಿದ ಶಾಸಕ
ಬಂಡೆಪ್ಪ ಖಾಶೆಂಪುರ್ ರವರು ರಘುನಾಥ್ ರಾವ್ ರವರನ್ನು ಸನ್ಮಾನಿಸಿ, ಗೌರವಿಸಿ ಅಭಿನಂದಿಸಿದರು. ಈ ವೇಳೆ
ಬೀದರ್ ಉತ್ತರ ಕ್ಷೇತ್ರದ ಶಾಸಕರಾದ ರಹಿಂಖಾನ್ ರವರು, ಮಹೇಶ್ ಚಿಂತಾಮಣಿರವರಿದ್ದರು.
No comments:
Post a Comment