Monday, August 29, 2022

ಹೆಣ್ಣುಮಕ್ಕಳಲ್ಲಿ ಉಳಿತಾಯ ಮಾಡುವ ಗುಣ ಮತ್ತು ಶಕ್ತಿ ಇದೆ: ಶಾಸಕ ಬಂಡೆಪ್ಪ ಖಾಶೆಂಪುರ್

ಹೆಣ್ಣುಮಕ್ಕಳಲ್ಲಿ ಉಳಿತಾಯ ಮಾಡುವ ಗುಣ ಮತ್ತು ಶಕ್ತಿ ಇದೆ: ಶಾಸಕ ಬಂಡೆಪ್ಪ ಖಾಶೆಂಪುರ್


ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮಾತನಾಡುತ್ತಿರುವುದು

ಬೀದರ್ (ಆ.29): ಹೆಣ್ಣುಮಕ್ಕಳಲ್ಲಿ ಉಳಿತಾಯ ಮಾಡುವ ಗುಣ ಮತ್ತು ಶಕ್ತಿ ಇದೆ. ತಾವು ಗಳಿಸುವ ಹಣವನ್ನು ದುಂದು ವೆಚ್ಚ ಮಾಡದೆ ಸಾಧ್ಯವಾದಷ್ಟು ಉಳಿತಾಯ ಮಾಡುತ್ತಾರೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮನ್ನಾಎಖೇಳ್ಳಿಯ ಶ್ರೀಮಹಾದೇವ ಮಂದಿರದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನಿಂದ ಸೋಮವಾರ ಹಮ್ಮಿಕೊಂಡಿದ್ದ 'ಶಿವ ಪಂಚಾಕ್ಷರಿ ಪಠಣ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ'  ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಂಡಸರು ಎಷ್ಟು ಹಣ ಕೊಟ್ಟರು ಖರ್ಚು ಮಾಡುತ್ತಾರೆ. ಗಂಡುಮಕ್ಕಳಲ್ಲಿ ಉಳಿತಾಯ ಮನೋಭಾವ ಕಡಿಮೆ ಇರುತ್ತದೆ ಎಂದರು.
ಧರ್ಮಸ್ಥಳ ಸಂಸ್ಥೆಯಿಂದ ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ಸಾಕಷ್ಟು ಒಳ್ಳೊಳ್ಳೆ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರಲ್ಲಿ ಸಂಘಟನೆ, ಉಳಿತಾಯ ಮನೋಭಾವ ಹೆಚ್ಚಾಗುತ್ತಿದೆ. ಕೆರೆ ಅಭಿವೃದ್ಧಿ, ಗ್ರಾಮ ವಿಕಾಸದಂತ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ಮಹಿಳೆಯರು ಸಂಸ್ಥೆಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಹೆಗ್ಗಡೆಯವರಿಗೆ ರಾಜ್ಯಸಭಾ ಸ್ಥಾನ ನೀಡಿರುವುದು ಹೆಮ್ಮೆಯ ವಿಷಯ:
ಶಿಕ್ಷಣ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿ ತಮ್ಮದೆಯಾದ ಯೋಜನೆಗಳ ಮೂಲಕ ಮಹತ್ವದ ಬದಲಾವಣೆ ತರುವ ಕೆಲಸ ಮಾಡುತ್ತಿರುವ ಧರ್ಮಸ್ಥಳ ಸಂಸ್ಥೆಯ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆರವರಿಗೆ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸ್ಥಾನ ನೀಡಿರುವುದು ಹೆಮ್ಮೆಯ ವಿಷಯವಾಗಿದೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ವಿಷಯದಲ್ಲಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಕಾಯಕ ಯೋಜನೆ ಜಾರಿಗೆ ತಂದಿದ್ದೆ:
ನಾನು ಸಹಕಾರ ಸಚಿವನ್ನಾಗಿದ್ದಾಗ ಗ್ರಾಮೀಣ ಭಾಗದ ಜನರ ಮತ್ತು ಸಹಕಾರ ಸಂಘಗಳ, ಸ್ವಸಹಾಯ ಸಂಘಗಳ ಒಳಿತಿಗಾಗಿ ಏನೆಲ್ಲಾ ಮಾಡಬಹುದು ಎಂಬ ಚಿಂತನೆ ನಡೆಸಿ ಅವತ್ತು ಕಾಯಕ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದೆ. ಅದು ಈಗಲೂ ಚಾಲನೆಯಲ್ಲಿದೆ. ಆ ಯೋಜನೆಯಲ್ಲಿ ಡಿಸಿಸಿ ಬ್ಯಾಂಕ್ ಗಳ ಮೂಲಕ ಐದು ಲಕ್ಷ ರೂ.ಗಳವರೆಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ. ಐದು ಲಕ್ಷ ರೂ.ಗಿಂತ ಹೆಚ್ಚಿಗೆ ಸಾಲ ತೆಗೆದುಕೊಂಡರೆ ಬಡ್ಡಿ ಇರುತ್ತೆ. ಅವತ್ತು ನಾನು ಚಾಲನೆ ನೀಡಿದ್ದ ಯೋಜನೆ ಈಗಲೂ ಜಾರಿಯಲ್ಲಿದೆ ಎಂದರು.
ಹಳ್ಳಿಗಳ ಅಭಿವೃದ್ಧಿಯಾದಾಗ ಮಾತ್ರವೇ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಜನರು ಸಹಕಾರ ಸಂಘಗಳ ಸದುಪಯೋಗ ಪಡೆದುಕೊಂಡು ಅಭಿವೃದ್ಧಿಯತ್ತ ಸಾಗಬೇಕಾಗಿದೆ. ಸ್ವಸಹಾಯ ಸಂಘಗಳಿಗೆ ಇನ್ನೂ ಹೆಚ್ಚಿನ ಆದ್ಯತೆ ನೀಡುವಂತೆ ನಾನು ಕೂಡ ಸರ್ಕಾರಕ್ಕೆ ಒತ್ತಾಯಿಸುವ ಕೆಲಸ ಮಾಡುತ್ತೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಮನ್ನಾಎಖೇಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗುಂಡಮ್ಮ ಸುಭಾಷ್ ನಾಟಿಕರ್, ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಪ್ರವೀಣ್, ಮಹಾದೇವ ಮಂದಿರ ಸಮಿತಿಯ ಅಧ್ಯಕ್ಷ ವಿಜಯಕುಮಾರ್ ಭೀಮಣ್ಣ ಹಳೀಕರ್, ಮನ್ನಾಎಖೇಳ್ಳಿ ಪೊಲೀಸ್ ಠಾಣೆ ಪಿಎಸ್ಐ ಸುದರ್ಶನರೆಡ್ಡಿ, ದತ್ತಾತ್ರೇಯ ರಾಸೂರ, ಸಂತೋಷ ಮಳಿಖೇಡ್, ಯೂಸಪ್ ಅಲಿ ಜಮಾದಾರ, ಶಿಲಾ ವಾಗ್ಮಾರಿ, ಸರಸ್ವತಿ, ಬಸವರಾಜ, ದೌಲಪ್ಪ ಹಡಲಗಿ, ರೇಣುಕಾ, ಯಶೋದಾ, ಮಂಜುಭಾಯಿ, ಸುಧಾರಾಣಿ, ಸಂಗೀತಾ, ವಿಜಯಲಕ್ಷ್ಮಿ, ರೇಖಾ, ವೇದಾವತಿ, ಸುವರ್ಣಾ ಸೇರಿದಂತೆ ಅನೇಕರಿದ್ದರು.
Bandeppa Khashempur/ಬಂಡೆಪ್ಪ ಖಾಶೆಂಪುರ್ Bandeppa Khashempur Youth Brigade -R #Bandeppakhashempur #bandeppa #khashempur #ಬಂಡೆಪ್ಪ #ಖಾಶೆಂಪುರ್ #ಬೀದರ್

Saturday, August 20, 2022

ಎಷ್ಟು ಸಲ ಅಧಿಕಾರಕ್ಕೆ ಬಂದಿದ್ದಿವಿ ಎಂಬುದಲ್ಲ, ಏನು ಮಾಡಿದ್ದಿವಿ ಎಂಬುದು ಮುಖ್ಯವಾಗುತ್ತದೆ: ಶಾಸಕ ಬಂಡೆಪ್ಪ ಖಾಶೆಂಪುರ್



ಬೀದರ್ (ಆ.20): ಸಾರ್ವಜನಿಕ ಜೀವನದಲ್ಲಿ ನಾವು ಎಷ್ಟು ಸಲ ಅಧಿಕಾರಕ್ಕೆ ಬಂದಿದ್ದಿವಿ ಎಂಬುದು ಮುಖ್ಯವಲ್ಲ. ಅಧಿಕಾರಕ್ಕೆ ಬಂದಾಗ ಏನು ಮಾಡಿದ್ದಿವಿ ಎಂಬುದು ಮುಖ್ಯವಾಗುತ್ತದೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೀದರ್ ಗಳ ಸಂಯುಕ್ತಾಶ್ರಯದಲ್ಲಿ ಬೀದರ್ ನಗರದ ಪೂಜ್ಯ ಡಾ. ಚನ್ನಬಸವ ಪಟ್ಟದ್ದೆವರು ರಂಗಮಂದಿರದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾರ್ವಜನಿಕ ಜೀವನದಲ್ಲಿ ನಾವು ಎಷ್ಟು ದಿನ ಅಧಿಕಾರದಲ್ಲಿ ಇರ್ತಿವಿ ಎಂಬುದು ಮುಖ್ಯವಾಗುವುದಿಲ್ಲ. ಏನು ಮಾಡಿದ್ದಿವಿ ಎಂಬುದು ಮುಖ್ಯವಾಗುತ್ತದೆ ಎಂದರು.

ಕೆಲವರು ನಾನು ಒಂದು ಬಾರಿ ಎಮ್ಎಲ್ಎ ಆದೇ, ಎರಡು ಬಾರಿ ಆದೆ, ಐದು ಬಾರಿ ಆದೆ ಅಂತ ಹೇಳ್ತಾರೆ. ಇನ್ನೂ ಕೆಲವರು ನಾನು ಒಂದು ಬಾರಿ ಸಿಎಂ ಆದೆ. ಎರಡು ಮೂರು ಬಾರಿ ಸಿಎಂ ಆದೆ ಅಂತ ಹೇಳುತ್ತಾರೆ. ಆದರೆ ಅಷ್ಟು ಸಲ ಅಧಿಕಾರ ಸಿಕ್ಕಾಗ ಅವರು ಏನೇನು ಮಾಡಿದ್ದಾರೆ ಎಂಬುದು ಬಹಳಷ್ಟು ಮುಖ್ಯವಾಗುತ್ತದೆ. 

ಸಾರ್ವಜನಿಕರ ಒಳಿತಿಗಾಗಿ ಒಳ್ಳೊಳ್ಳೆ ಕೆಲಸವನ್ನು ಮಾಡಬೇಕಾಗುತ್ತದೆ. ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ, ನಾನು ಮಂತ್ರಿಯಾಗಿದ್ದಾಗ ರೈತರ, ಬಡವರ ಪರವಾಗಿ ಕೆಲಸ ಮಾಡಿದ್ದೇವೆ. ನಾನು ಮಂತ್ರಿಯಾಗಿದ್ದಾಗ ಜನಸಾಮಾನ್ಯರ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

 

ಅರಸರು ಅನೇಕರನ್ನು ಗುರುತಿಸಿ ಅಧಿಕಾರಕ್ಕೆ ತಂದಿದ್ದರು:

ಡಿ ದೇವರಾಜ ಅರಸರು ಅಂದಿನ ದಿನಗಳಲ್ಲಿ ಅನೇಕರನ್ನು ಗುರುತಿಸಿ ಅಧಿಕಾರಕ್ಕೆ ತಂದಿದ್ದರು. ಡಿ. ದೇವರಾಜ ಅರಸರನ್ನು ಅನೇಕರು ನೆನಪಿಸಿಕೊಳ್ಳುತ್ತಾರೆ. ಮನೆಯಲ್ಲಿ ಕುಳಿತಿದ್ದ ನಮ್ಮನ್ನು ಅರಸರು ಗುರುತಿಸಿ ಎಮ್ಎಲ್ಎ, ಮಂತ್ರಿ ಮಾಡಿದ್ದಾರೆ ಎಂದು ಅನೇಕರು ಹೇಳುತ್ತಿರುತ್ತಾರೆ. ಅವರು ಅನೇಕರಿಗೆ ಮಾರ್ಗದರ್ಶನ ಮಾಡಿದ್ದಾರೆ. ಅಭಿವೃದ್ಧಿ ಪರವಾದ ಕೆಲಸಗಳನ್ನು ದೇವರಾಜ ಅರಸರು ಮಾಡಿದ್ದಾರೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಈ ಸಂದರ್ಭದಲ್ಲಿ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ರಹೀಮ್ ಖಾನ್, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರ್ ಬಾಬು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಮ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸದಾಶಿವ ಎಸ್ ಬಡಿಗೇರ್, ಹಿರಿಯ ಪತ್ರಕರ್ತ ಗಂಧರ್ವ ಸೇನಾ, ವಿಶೇಷ ಉಪನ್ಯಾಸಕ ಡಾ. ಬಸವರಾಜ ಬಲ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಮಹಿಳೆಯರು, ಮಕ್ಕಳು ಇದ್ದರು.

Monday, August 15, 2022

ಬೀದರ್ ನಗರದ ವಿವಿಧೆಡೆ ನಡೆದ ಧ್ವಜಾರೋಹಣ ಕಾರ್ಯಕ್ರಮಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಭಾಗಿ

ಕವಾಯತು ಮೈದಾನ ಬೀದರ್

ಬೀದರ್ (ಆ.15): ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವದ ನಿಮಿತ್ತವಾಗಿ ಬೀದರ್ ನಗರದ ತಮ್ಮ ನಿವಾಸದಲ್ಲಿ ಮಧ್ಯರಾತ್ರಿ ಹನ್ನೆರಡು ಗಂಟೆ ಎರಡು ನಿಮಿಷಕ್ಕೆ ಧ್ವಜಾರೋಹಣ ನಡೆಸಿದ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು, ಸೋಮವಾರ ಬೆಳಗ್ಗೆ ನಗರದ ಶ್ರೀಸಾಯಿ ಆದರ್ಶ ಶಿಕ್ಷಣ ಸಂಸ್ಥೆ, ಜೆಡಿಎಸ್ ಜಿಲ್ಲಾ ಕಛೇರಿ, ಭಗತ್ ಸಿಂಗ್ ವೃತ್ತ, ಪೊಲೀಸ್ ಕವಾಯತು ಮೈದಾನ ಸೇರಿದಂತೆ ವಿವಿಧೆಡೆ ನಡೆದ ಧ್ವಜಾರೋಹಣ ಕಾರ್ಯಕ್ರಮಗಳಲ್ಲಿ  ಪಾಲ್ಗೊಂಡರು.

ತಮ್ಮ ನಿವಾಸದಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿದ ಅವರು, ನಮ್ಮ ಪೂರ್ವಜರು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ. ಅವರನ್ನು ನಾವು ಎಷ್ಟು ಸ್ಮರಿಸಿದರು ಕೂಡ ಕಡಿಮೆ ಎನಿಸುತ್ತದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತೈದು ವರ್ಷಗಳು ಆಗ್ತಿರೋದು ಒಂದು ರೀತಿಯ ಹಬ್ಬದ ವಾತವರಣವಾಗಿದೆ ಎಂದರು.

ಸ್ವಾತಂತ್ರ್ಯ ದಿನಾಚರಣೆ ಎಂಬುದು ಯಾವುದೇ ಜಾತಿ, ಧರ್ಮಗಳಿಗೆ ಸೀಮಿತವಾಗಿಲ್ಲ. ನಾಡಿನೆಲ್ಲಡೇ ಎಲ್ಲರೂ ಆಚರಣೆ ಮಾಡಬೇಕಾಗಿರುವ ಹಬ್ಬವಾಗಿದೆ. ನಾವೆಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸಬೇಕಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಜೆಡಿಎಸ್ ಜಿಲ್ಲಾ ಕಛೇರಿ ಆವರಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ನಾವೆಲ್ಲರೂ ಅದೃಷ್ಟವಂತರಾಗಿದ್ದೇವೆ. ನಮ್ಮ ಹಿರಿಯರು, ಪೂರ್ವಜರು ಮಾಡಿದ ತ್ಯಾಗ, ಬಲಿದಾನದ ಫಲವಾಗಿ ನಾವು ಸ್ವಾತಂತ್ರ್ಯವಾಗಿ ಬದುಕು ಸಾಗಿಸುತ್ತಿದ್ದೇವೆ.  ನಾವೆಲ್ಲರೂ ಈಗ ಸ್ವಾತಂತ್ರ್ಯವಾಗಿ ಬದುಕುತ್ತಿದ್ದೇವೆ ಎಂದರೇ, ಅದು ನಮ್ಮ ಹಿರಿಯರ ತ್ಯಾಗದ ಫಲವಾಗಿದೆ ಎಂದರು.

ಸ್ವಾತಂತ್ರ್ಯ ಭಾರತದಲ್ಲಿ ಬದುಕುತ್ತಿರುವ ನಾವೆಲ್ಲರೂ ಜವಾಬ್ದಾರಿಯುತವಾಗಿ, ಮಾದರಿಯಾಗಿ ಬದುಕಬೇಕಾಗಿದೆ. ನಾಡಿನಲ್ಲಿರುವ ಬಡವರ, ಇಲ್ಲದವರ ಪರವಾಗಿ ಕೆಲಸ ಮಾಡಬೇಕಾಗಿದೆ. ನಾವೆಲ್ಲರೂ ಸೇರಿ ದೇಶದ, ನಾಡಿನ ಅಭಿವೃದ್ಧಿ ಮಾಡುವ ಕೆಲಸ ಮಾಡಬೇಕಾಗಿದೆ. ನಾಡಿನ ಒಳಿತಿಗಾಗಿ ನಾವೆಲ್ಲರೂ ಸೇರಿ ಕಾರ್ಯನಿರ್ವಹಿಸೋಣ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಕರೆ ನೀಡಿದರು.

ಬೀದರ್ ನಗರದ ಅವರ ನಿವಾಸದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ರವರ ಸಹೋದರರಾದ ರವಿ ಖಾಶೆಂಪುರ್, ರಾಜು ಖಾಶೆಂಪುರ್, ಸಂಜು ಖಾಶೆಂಪುರ್ ಮತ್ತು ಕುಟುಂಬಸ್ಥರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.

ಶ್ರೀಸಾಯಿ ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಮುಖರಾದ ಬಾಬುರಾವ್ ಮಲ್ಕಾಪೂರೆ, ರಾಜಶೇಖರ್ ಜವಳೆ, ಸಂಸ್ಥೆಯ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರಿದ್ದರು.

ಜೆಡಿಎಸ್ ಜಿಲ್ಲಾ ಕಛೇರಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲಪೂರ್, ಸುದರ್ಶನ್, ವಿನಾಯಕ, ಸೋಮನಾಥ, ಅಶೋಕಕುಮಾರ್ ಕರಂಜೆ, ಶಿವರಾಜ್, ಬೊಮ್ಮಗೊಂಡ ಚಿಟ್ಟವಾಡಿ, ನಬಿ ಖುರೇಷಿ, ರೇವಣಸಿದ್ದಪ್ಪ, ಲಲಿತಾ, ಸಂಗೀತಾ, ಐಲಿನ್ ಜಾನ್ ಮಠಪತಿ, ಅಶೋಕ್ ಸೇರಿದಂತೆ ಅನೇಕರಿದ್ದರು.

ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು, ಎಸ್.ಪಿ, ಶಾಸಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರಿದ್ದರು.

 

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತೋತ್ಸವ: 

ಬೀದರ್ ನಗರದ ಶ್ರೀ ಸಾಯಿ ಆದರ್ಶ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತೋತ್ಸವ ಕಾರ್ಯಕ್ರಮಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಬಾಬುರಾವ್ ಮಲ್ಕಾಪೂರೆ, ರಾಜಶೇಖರ ಜವಳೆ, ಬೊಮ್ಮಗೊಂಡ ಚಿಟ್ಟವಾಡಿ ಸೇರಿದಂತೆ ಅನೇಕರಿದ್ದರು. ಇದೇ ವೇಳೆ ನಗರದ ಬೊಮ್ಮಗೊಂಡೇಶ್ವರ ವೃತ್ತದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಜಯಂತೋತ್ಸವ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಪಾಲ್ಗೊಂಡರು.


Wednesday, August 10, 2022

ಕೂಡಲೇ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಲು ಮುಖ್ಯಮಂತ್ರಿಗಳನ್ನು ಒತ್ತಾಯಿಸುವೆ: ಶಾಸಕ ಬಂಡೆಪ್ಪ ಖಾಶೆಂಪುರ್



ಬೀದರ್ (ಆ.10): ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಕಳೆದುಕೊಂಡಿರುವ ರೈತರಿಗೆ ಮೊದಲನೇ ಕಂತಿನಲ್ಲಿ ಕೂಡಲೇ ಎಕರೆಗೆ 25 ಸಾವಿರ ರೂ. ಬೆಳೆ ಹಾನಿ ಪರಿಹಾರ ಒದಗಿಸಿಕೊಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಹಾನಿ ಸಂಭವಿಸಿದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕೋಳಾರ ಬಿ ಮತ್ತು ಆಣದೂರಿನ ಜಮೀನುಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಹುತೇಕ ರೈತರು ಬೆಳೆ ಕಳೆದುಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಜಮೀನುಗಳಲ್ಲಿ ನೀರು ನಿಂತು ಬೆಳೆ ಹಾನಿ ಸಂಭವಿಸಿದೆ. ಬೆಳೆ ಕಳೆದುಕೊಂಡಿರುವ ರೈತರಿಗೆ ಕೂಡಲೇ ಪರಿಹಾರ ಒದಗಿಸಿಕೊಡುವ ಕೆಲಸವಾಗಬೇಕಾಗಿದೆ ಎಂದರು.
ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ನಾಶವಾಗಿವೆ. ಸಾಮಾನ್ಯ ಪ್ರದೇಶದಲ್ಲಿ ಕೂಡ ಬೆಳೆ ಹಾನಿ ಸಂಭವಿಸಿದೆ. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 53 ಸಾವಿರ ಎಕ್ಟರ್ ಪ್ರದೇಶದಲ್ಲಿ ಮುಂಗಾರು ಬಿತ್ತನೆ ಮಾಡಲಾಗಿತ್ತು. ಬಿತ್ತನೆ ಮಾಡಿದ ಬಹುತೇಕ ಬೆಳೆ ಸಂಪೂರ್ಣವಾಗಿ ಹಾನಿಗಿಡಾಗಿವೆ. ಬೆಳೆ ಕಳೆದುಕೊಂಡ ರೈತರಿಗೆ ಮೊದಲನೇ ಕಂತಿನಲ್ಲಿ ಎಕರೆಗೆ ಕನಿಷ್ಠ 25 ಸಾವಿರ ರೂ. ಪರಿಹಾರ ಒದಗಿಸಿಕೊಡುವ ಕೆಲಸ ಸರ್ಕಾರ ಮಾಡಬೇಕು. ಆ ಮೂಲಕ ರೈತರಿಗೆ ನೆರವಾಗಬೇಕು ಎಂದರು.

ಎರಡು ಮೂರು ದಿನಗಳಲ್ಲಿ ವರದಿ ನೀಡಬೇಕು:
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಂಭವಿಸಿದ ಬೆಳೆ ಹಾನಿಯ ಸಮೀಕ್ಷೆಯನ್ನು ಕೃಷಿ ಮತ್ತು ಕಂದಾಯ ಇಲಾಖೆಯಿಂದ ಜಂಟಿಯಾಗಿ ನಡೆಸಬೇಕು. ಎರಡು ಮೂರು ದಿನಗಳಲ್ಲಿಯೇ ಬೆಳೆ ಹಾನಿಯ ವರದಿಯನ್ನು ನೀಡಬೇಕು ಎಂದು ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸೂಚಿಸಿದರು.

ಮುಖ್ಯಮಂತ್ರಿಗಳೊಂದಿಗೆ ಮಾತನಾಡುವೆ:
ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆ ನಡೆಸಿ ವರದಿ ನೀಡಿದ ತಕ್ಷಣವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರನ್ನು ಭೇಟಿಯಾಗಿ ಮಾತನಾಡಿ, ನಮ್ಮ ಕ್ಷೇತ್ರದಲ್ಲಿ ಮತ್ತು ಜಿಲ್ಲೆಯಲ್ಲಿ ಸಂಭವಿಸಿರುವ ಬೆಳೆ ಹಾನಿಯ ಬಗ್ಗೆ ಮಾಹಿತಿ ನೀಡುತ್ತೇನೆ. ಕೂಡಲೇ ಪರಿಹಾರ ಒದಗಿಸಿಕೊಡುವಂತೆ ಒತ್ತಾಯಿಸುತ್ತೇನೆ ಎಂದರು.

ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ:
ಬೆಳೆ ಹಾನಿಗೆ ಸಂಬಂಧಿಸಿದಂತೆ ನಾನು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಕೂಡಲೇ ಪರಿಹಾರ ಒದಗಿಸಿಕೊಡುವಂತೆ ಅಧಿಕಾರಿಗಳಿಗೂ  ಸೂಚಿಸಿದ್ದೇನೆ. ಕೃಷಿ ಇಲಾಕೆ, ಕಂದಾಯ ಇಲಾಖೆ ಮತ್ತು ಬೆಳೆ ವಿಮಾ ಕಂಪನಿಯವರೂ ಈ ಭಾಗದಲ್ಲಿ ಸಂಭವಿಸಿದ ಬೆಳೆ ಹಾನಿಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು.
ರಸ್ತೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಸಂತ್ರಸ್ತರಿಗೆ ಹದಿನೈದು ದಿನಗಳಲ್ಲಿ ಪರಿಹಾರ ನೀಡುತ್ತಾರೆ. ರೈತರಿಗೆ ಸಮಸ್ಯೆಯಾದರೆ ಯಾಕೇ ಹದಿನೈದು ದಿನಗಳಲ್ಲಿ ಪರಿಹಾರ ನೀಡಲಾಗುತ್ತಿಲ್ಲ. ಸರ್ಕಾರ ರೈತರ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಯಾಕೆ. ನಾನು ಈ ಬಗ್ಗೆ  ಅಧಿವೇಶನದಲ್ಲಿ ಕೂಡ ಪ್ರಶ್ನೆ ಮಾಡಿದ್ದೇನೆ. ರೈತರ ಪರವಾಗಿ ನಾವು ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಪರವಾಗಿ ಕೆಲಸ ಮಾಡುತ್ತೇವೆ. ರೈತ ಸಾಲಗಾರ ಆಗಬಾರದು. ಆ ರೀತಿಯ ಯೋಜನೆಗಳನ್ನು ನಾವು ಜಾರಿಗೆ ತರುವ ಕೆಲಸ ಮಾಡುತ್ತೇವೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತನಾಡುವೆ:
ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಕಾಲುವೆ ನಿರ್ಮಾಣ ಮಾಡದೇ ಇರುವುದರಿಂದ ಅಕ್ಕಪಕ್ಕದ ರೈತರ ಜಮೀನುಗಳಲ್ಲಿ ನೀರು ನಿಲ್ಲುತ್ತಿವೆ. ಇದರಿಂದ ರೈತರು ಬೆಳೆ ಕಳೆದುಕೊಳ್ಳುತ್ತಿದ್ದೇವೆ. ರಸ್ತೆ ಪಕ್ಕದಲ್ಲಿ ಕಾಲುವೆಗಳನ್ನು ನಿರ್ಮಾಣ ಮಾಡಿಸಿಕೊಡಬೇಕೆಂದು ರೈತರು ಶಾಸಕ ಬಂಡೆಪ್ಪ ಖಾಶೆಂಪುರ್ ರವರಿಗೆ ಮನವಿ ಮಾಡಿದರು. ಕೂಡಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತನಾಡಿ, ಸಮಸ್ಯೆ ಪರಿಹರಿಸುವಂತೆ ತಿಳಿಸುತ್ತೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಬೀದರ್ ಸಹಾಯಕ ಕೃಷಿ ನಿರ್ದೇಶಕ ದೂಳಪ್ಪ ಹೊಸಳ್ಳಿ, ಕಮಠಾಣಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಸುನೀಲ್, ಕಂದಾಯ ನಿರೀಕ್ಷಕ ಜೈಭೀಮ್, ಗ್ರಾಮ ಲೆಕ್ಕಾಧಿಕಾರಿ ರೇಣುಕಾ, ಗ್ರಾಮ ಪಂಚಾಯತಿ ಸದಸ್ಯರಾದ ಖಾಶಿನಾಥ್ ಮೇತ್ರೆ, ಶ್ರೀಮಂತ್ ಸಂಗಪ್ಪ, ಗೌತಮ್, ರೈತರಾದ ಸಿದ್ದರಾಮಪ್ಪ ಕೊಂಗನಕೋಟೆ, ಮಹೇಶ ನಾಗಣ್ಣ, ಮಲ್ಲಿಕಾರ್ಜುನ ಚಂದನಕೇರಿ, ಬಸಪ್ಪ ಕುಂಬಾರವಾಡ, ಮಾರುತಿ ಮೇತ್ರೆ, ಸಂತೋಷ ಬಚ್ಚಾ, ಪ್ರಭಾಸ್ ಹದಿನಾಳೆ, ರೇವಣಪ್ಪ ಕಂದಗಾವ್, ಗಾಳೆಪ್ಪಗೌಡ, ಶರಣಪ್ಪ ಈರಪ್ಪ, ಗಾಳೇಪ್ಪ ಹನುಮಂತಪ್ಪ, ಶಿವಶಂಕರ, ರೇವಣಪ್ಪ, ಅಶೋಕ ಸೇರಿದಂತೆ ಅನೇಕರಿದ್ದರು.
Bandeppa Khashempur/ಬಂಡೆಪ್ಪ ಖಾಶೆಂಪುರ್ Bandeppa Khashempur Youth Brigade -R
#Bandeppakhashempur #bandeppa #khashempur #ಬಂಡೆಪ್ಪ #ಖಾಶೆಂಪುರ್ #ಬೀದರ್_ದಕ್ಷಿಣ_ಶಾಸಕರು #bidar_south_mla

Tuesday, August 9, 2022

ಮೊಹರಂ ಭಾವೈಕ್ಯತೆಯ ಸಂದೇಶ ಸಾರುವ ಹಬ್ಬವಾಗಿದೆ: ಶಾಸಕ ಬಂಡೆಪ್ಪ ಖಾಶೆಂಪುರ್



ಬೀದರ್ (ಆ.09): ಜಾತಿ, ಧರ್ಮದ ಭೇದಭಾವ ತೊರೆದು ಹಿಂದೂ, ಮುಸ್ಲಿಮರೆಲ್ಲರೂ ಸೇರಿ ಸಡಗರ ಸಂಭ್ರಮದಿಂದ ಆಚರಿಸುವ ಮೊಹರಂ ಹಬ್ಬ ಭಾವೈಕ್ಯತೆಯ ಸಂದೇಶ ಸಾರುವ ಹಬ್ಬವಾಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದ ಮೊಹರಂ ಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪಿರ್ (ಅಲಾಯಿ ದೇವರ) ದರ್ಶನ ಪಡೆದು ಬಳಿಕ ಮಾತನಾಡಿದ ಅವರು, ಮೊಹರಂ ವಿಶೇಷವಾದ ಹಬ್ಬವಾಗಿದೆ. ಈ ಹಬ್ಬದಲ್ಲಿ ಹಿಂದೂ, ಮುಸ್ಲಿಂ ಎನ್ನದೆ ಎಲ್ಲರೂ ಒಗ್ಗಟ್ಟಾಗಿ ಪಾಲ್ಗೊಳ್ಳುತ್ತಾರೆ. ಹಿಂದೂಗಳ ಮನೆಯಲ್ಲಿ ಕೂಡ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿರುತ್ತದೆ ಎಂದರು.

ಹಾಲಳ್ಳಿ - ಖಾಶೆಂಪುರ್ ಗ್ರಾಮಗಳ ಮೊಹರಂಗೆ ಇತಿಹಾಸವಿದೆ:
ಹಾಲಳ್ಳಿ - ಖಾಶೆಂಪುರ್ ಗ್ರಾಮಗಳ ಮೊಹರಂ ಹಬ್ಬಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಈ ಎರಡು ಊರುಗಳ ಜನರು ನೂರಾರು ವರ್ಷಗಳಿಂದ ಒಟ್ಟಾಗಿ ಮೊಹರಂ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ.
ಬೇರೆ ಬೇರೆ ಕಡೆಗಳಲ್ಲಿ ಆ ಧರ್ಮ ಈ ಧರ್ಮ ಎಂದು ದಿನನಿತ್ಯ ಬಡೆದಾಡುವ ಘಟನೆಗಳನ್ನು ನಾವು ಮಾಧ್ಯಮಗಳಲ್ಲಿ ಕಾಣುತ್ತೇವೆ. ಆದರೇ ನಮ್ಮಲ್ಲಿ ಯಾವುದೇ ಜಾತಿ, ಮತದ ಭೇದಭಾವವಿಲ್ಲ. ಇಲ್ಲಿ ಎಲ್ಲರೂ ಸೇರಿ ಒಗ್ಗಟ್ಟಾಗಿ ಏಕತೆ, ಭಾವೈಕ್ಯತೆಯಿಂದ ಮೊಹರಂ ಆಚರಣೆ ಮಾಡುತ್ತಾರೆ.  ಇಲ್ಲಿ ಮುಸ್ಲಿಂ ಸಮುದಾಯದ ಮನೆಗಳು ಕಡಿಮೆಯಿವೆಯಾದರು, ಯಾವುದೇ ರೀತಿಯ ಕೊರತೆಯಾಗದಂತೆ ಎಲ್ಲರೂ ಸೇರಿ ಸಡಗರ ಸಂಭ್ರಮದಿಂದ ಮೊಹರಂ ಹಬ್ಬ ಆಚರಣೆ ಮಾಡುತ್ತಾರೆ.
ಹಳ್ಳಿಗಳಲ್ಲಿ ಪ್ರೀತಿ, ವಿಶ್ವಾಸ, ಆತ್ಮೀಯತೆ, ಭಾವೈಕ್ಯತೆ ಎದ್ದು ಕಾಣುತ್ತದೆ. ಇಲ್ಲಿ ಯಾವುದೇ ಜಾತಿ ಧರ್ಮದ ಭಾವನೆಗಳು ಕಾಣುವುದಿಲ್ಲ. ಮೊಹರಂ ಹಬ್ಬದಲ್ಲಿ ಪ್ರತಿಯೊಬ್ಬ ಹಿಂದೂಗಳು ಕೂಡ ಪಾಲ್ಗೊಳ್ಳುತ್ತಾರೆ. ಎಲ್ಲಾ ಜನಾಂಗದವರು ಸೇರಿ ಮೊಹರಂ ಆಚರಣೆ ಮಾಡುತ್ತಾರೆ. ಇದು ಭಾರತ ದೇಶದ ಅಸಲಿ ಸಂಸ್ಕ್ರತಿ ಅಂತ ನಾನು ಹೇಳುತ್ತೇನೆ. ಹಾಲಳ್ಳಿ ಮತ್ತು ಖಾಶೆಂಪುರ್ ಪಿ ಗ್ರಾಮದ ನಡುವಿನ ಸಂಬಂಧ ನೂರಾರು ವರ್ಷಗಳ ಸಂಬಂಧವಾಗಿದೆ. ಇದನ್ನು ಹೀಗೆ ಮುಂದುವರೆಸುಕೊಂಡು ಹೋಗಬೇಕಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಬಂಡೆಪ್ಪ ಖಾಶೆಂಪುರ್ ರವರು ನಮ್ಮ ಹಾಲಳ್ಳಿ ಗ್ರಾಮದ ಭವಾನಿ ದೇವಸ್ಥಾನಕ್ಕೆ ವೈಯಕ್ತಿಕವಾಗಿ ಐವತ್ತು ಸಾವಿರ ರೂ. ಕೊಡುತ್ತೇನೆ ಎಂದು ಹೇಳಿದ್ದಾರೆ. ನಮ್ಮೂರು ಅವರ ಕ್ಷೇತ್ರಕ್ಕೆ ಸಂಬಂಧ ಪಡದಿದ್ದರು ಕೂಡ ನಮ್ಮೂರಿನ ದೇವಸ್ಥಾನಕ್ಕೆ ಧನಸಹಾಯ ಮಾಡುತ್ತಿರುವ ಅವರಿಗೆ ನಾವು ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಹಾಲಳ್ಳಿ ಗ್ರಾಮದ ಯುವಕರು ಹೇಳಿದರು.

ಜನರೊಂದಿಗೆ ಅಲಾಯಿ ಆಡಿದ ಶಾಸಕ ಬಂಡೆಪ್ಪ ಖಾಶೆಂಪುರ್:
ಖಾಶೆಂಪುರ್ ಪಿ ಗ್ರಾಮದ ಮಸೀದಿ (ಅಲಾಯಿ ದೇವರನ್ನು ಕೂಡಿಸುವ ಸ್ಥಳ)ಕ್ಕೆ ಭೇಟಿ ನೀಡಿ, ಅಲಾಯಿ ದೇವರು (ಪಿರ್) ದರ್ಶನ ಪಡೆದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಇದೇ ವೇಳೆ ಮಸೀದಿಯ ಆವರಣದಲ್ಲಿ ಜನರೊಟ್ಟಿಗೆ ಅಲಾಯಿ ಆಡಿದರು. ಮೊಹರಂ ಪದಗಳ ತಾಳಕ್ಕೆ ತಕ್ಕಂತೆ ಶಾಸಕರೊಂದಿಗೆ ಹೆಜ್ಜೆಯಾಕಿದ ಗ್ರಾಮಸ್ಥರು ಸಂತಸದಿಂದ ಕುಣಿದು ಕುಪ್ಪಳಿಸಿ, ಶಾಸಕ ಬಂಡೆಪ್ಪ ಖಾಶೆಂಪುರ್ ರವರನ್ನು ಸನ್ಮಾನಿಸಿ ಗೌರವಿಸಿದರು. ಹಾಲಳ್ಳಿ, ಖಾಶೆಂಪುರ್ ಪಿ ಗ್ರಾಮಗಳ ಗ್ರಾಮಸ್ಥರು, ಹಿಂದೂ, ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ ಅನೇಕರಿದ್ದರು.

ಮರಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ, ಪೂಜೆ:
ಖಾಶೆಂಪುರ್ ಪಿ ಗ್ರಾಮಕ್ಕೆ ಭೇಟಿ ನೀಡಿ ಮೊಹರಂ ಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುಂಚೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಗ್ರಾಮದ ಮರಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ಕ್ಷೇತ್ರದ, ನಾಡಿನ ಜನರ ಒಳಿತಿಗಾಗಿ ಪೂಜೆ ಸಲ್ಲಿಸಿದರು. ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.
Bandeppa Khashempur/ಬಂಡೆಪ್ಪ ಖಾಶೆಂಪುರ್ Bandeppa Khashempur Youth Brigade -R #bandeppa_khashempur #bidar_south_mla #bandeppa #khashempur #ಬಂಡೆಪ್ಪ_ಖಾಶೆಂಪುರ್ #ಬಂಡೆಪ್ಪ #ಖಾಶೆಂಪುರ್

Saturday, August 6, 2022

ಸ್ತ್ರೀ ಶಕ್ತಿ ಸಂಘಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲಿ: ಶಾಸಕ ಬಂಡೆಪ್ಪ ಖಾಶೆಂಪುರ್



ಬೀದರ್ (ಆ.06): ಸ್ತ್ರೀ ಶಕ್ತಿ ಸಂಘಗಳು, ಮಹಿಳಾ ಸ್ವಸಹಾಯ ಸಂಘಗಳು ಸರ್ಕಾರದಿಂದ ದೊರೆಯುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವ ಮೂಲಕ ಅಭಿವೃದ್ಧಿ ಸಾಧಿಸಬಹುದಾಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಜಿಲ್ಲಾ ಪಂಚಾಯತಿ ಬೀದರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್, ತಾಲೂಕು ಪಂಚಾಯತಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಬೀದರ್ ಮತ್ತು ಹುಮನಾಬಾದ್ ಗಳ ಸಂಯುಕ್ತಾಶ್ರಯದಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಶನಿವಾರ ನಡೆದ 'ಅಮೃತ ಯೋಜನೆಯಡಿ ಸ್ತ್ರೀ ಶಕ್ತಿ ಸಂಘಗಳಿಗೆ ಬೀಜಧನ ಚೆಕ್ ವಿತರಣಾ ಕಾರ್ಯಕ್ರಮ'ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ತ್ರೀ ಶಕ್ತಿ ಸಂಘಗಳು, ಸರ್ಕಾರದಿಂದ ದೊರೆಯುವ ಸಾಲಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಸಣ್ಣಪುಟ್ಟ ಕಾರ್ಖಾನೆ, ಕೈಗಾರಿಕೆಗಳನ್ನು ಆರಂಭಿಸಬೇಕು ಎಂದರು.

ಮಹಿಳೆಯರು ಸ್ತ್ರೀ ಶಕ್ತಿ ಸಂಘಗಳನ್ನು, ಮಹಿಳಾ ಸ್ವಸಹಾಯ ಸಂಘಗಳನ್ನು ಸ್ಥಾಪಿಸಬೇಕು. ಆ ಮೂಲಕ ಎಲ್ಲರೂ ಒಗ್ಗಟ್ಟಾಗಿ ಉಳಿತಾಯ ಯೋಜನೆಗಳನ್ನು ಆರಂಭಿಸಬೇಕು. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು, ಸಾಲಸೌಲಭ್ಯಗಳನ್ನು ಪಡೆದುಕೊಳ್ಳಬೇಕು.  ಆ ಮೂಲಕ ಸಣ್ಣಪುಟ್ಟ ಉದ್ಯಮಗಳನ್ನು ಆರಂಭಿಸಿ ಅಭಿವೃದ್ಧಿ ಸಾಧಿಸಬೇಕು. ಮಹಿಳೆಯರು ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಸ್ತ್ರೀ ಶಕ್ತಿ ಸಂಘಗಳಿಗೆ ಸರ್ಕಾರ ನೀಡುವ ಸಾಲಸೌಲಭ್ಯಗಳನ್ನು ವೈಯಕ್ತಿಕ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳಬಾರದು. ಸಾಮೂಹಿಕವಾಗಿ ಸಂಘದಲ್ಲಿರುವ ಎಲ್ಲರೂ ಸೇರಿಕೊಂಡು ಸಣ್ಣಪುಟ್ಟ ಉದ್ಯಮ ಆರಂಭಿಸಬೇಕು ಆ ಮೂಲಕ ಅಭಿವೃದ್ಧಿ ಸಾಧಿಸಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಕರೆ ನೀಡಿದರು.


ಸ್ತ್ರೀ ಶಕ್ತಿ ಸಂಘಗಳಿಗೆ 25 ಲಕ್ಷ ರೂ. ಮೌಲ್ಯದ ಚೆಕ್ ವಿತರಣೆ:

ಒಂದು ಸಂಘಕ್ಕೆ ಒಂದು ಲಕ್ಷ ರೂ.ಗಳಂತೆ ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬೀದರ್ ತಾಲೂಕಿನ 14 ಸ್ತ್ರೀ ಶಕ್ತಿ ಸಂಘಗಳಿಗೆ ಮತ್ತು ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹುಮನಾಬಾದ್ ತಾಲೂಕಿನ 11 ಸ್ತ್ರೀ ಶಕ್ತಿ ಸಂಘಗಳಿಗೆ ತಲಾ ಒಂದು ಲಕ್ಷ ರೂ.ನಂತೆ 25 ಸ್ತ್ರೀ ಶಕ್ತಿ ಸಂಘಗಳಿಗೆ 25 ಲಕ್ಷ ರೂ.ಗಳ ಚೆಕ್ ವಿತರಿಸಲಾಯಿತು.

ಇದೇ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಸ್ತ್ರೀ ಶಕ್ತಿ ಸಂಘಗಳಿಗೆ ತಲಾ ಒಂದು ಲಕ್ಷ ರೂ.ನಂತೆ ಚೆಕ್ ವಿತರಣೆ ಮಾಡಲಾಗುತ್ತಿದೆ. ಸಂಘಗಳು ತಮಗೆ ನೀಡಿದ ಒಂದು ಲಕ್ಷ ರೂ. ಚೆಕ್ ಅನ್ನು ಸದುಪಯೋಗ ಪಡೆದುಕೊಳ್ಳಬೇಕು. ಆ ಹಣದಿಂದ ಸಣ್ಣಪುಟ್ಟ ಕೈಗಾರಿಕೆಗಳನ್ನು, ಉದ್ಯಮಗಳನ್ನು ಸ್ಥಾಪಿಸಿಕೊಂಡು ಸಾಮೂಹಿಕವಾಗಿ ಅಭಿವೃದ್ಧಿ ಸಾಧಿಸಬೇಕು. ನೀಡಿರುವ ಹಣವನ್ನು ವೈಯಕ್ತಿಕ ಖರ್ಚಿಗಾಗಿ ಬಳಸಿಕೊಳ್ಳಬಾರದು ಎಂದು ಸಂಘಗಳಿಗೆ ತಿಳಿಸಿದರು.

ವಿವಿಧ ಸ್ತ್ರೀ ಶಕ್ತಿ ಸಂಘಗಳ ಸದಸ್ಯರು ಮಾತನಾಡಿ, ನಾವು ಉದ್ಯಮಗಳನ್ನು ಆರಂಭಿಸುವ ಯೋಚನೆಯಲ್ಲಿದ್ದೇವೆ. ಸರ್ಕಾರದಿಂದ ಈಗ ನೀಡಿರುವ ಒಂದು ಲಕ್ಷ ರೂ. ಹಣ  ಸಾಕಾಗುವುದಿಲ್ಲ. ಇನ್ನೂ ಹೆಚ್ಚಿನ ಸಹಾಯಧನ, ಸಾಲಸೌಲಭ್ಯ ಒದಗಿಸಿಕೊಡಬೇಕು. ಬಡ್ಡಿರಹಿತವಾಗಿ ಹೆಚ್ಚಿನ ಸಾಲ ನೀಡಬೇಕು ಎಂದು ಮನವಿ ಮಾಡಿದರು.


ಅಭಿವೃದ್ಧಿ ಸಾಧಿಸಿದರೆ ಐವತ್ತು ಸಾವಿರ ರೂ. ವೈಯಕ್ತಿಕ ನೆರವು:

ಸರ್ಕಾರದಿಂದ ಈಗ ನೀಡಲಾಗಿರುವ ಸಹಾಯಧನವನ್ನು ಸದುಪಯೋಗ ಪಡೆದುಕೊಂಡು, ಮುಂಬರುವ ಕೆಲ ತಿಂಗಳಲ್ಲಿ ಅಭಿವೃದ್ಧಿ ಸಾಧಿಸುವ ಸ್ತ್ರೀ ಶಕ್ತಿ ಸಂಘಗಳಿಗೆ ನಾನು ವೈಯಕ್ತಿಕವಾಗಿ ಐವತ್ತು ಸಾವಿರ ರೂ. ನೆರವು ನೀಡಲು ಸಿದ್ದನಿದ್ದೇನೆ. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಷ್ಟು ಸ್ತ್ರೀ ಶಕ್ತಿ ಸಂಘಗಳು ಅಭಿವೃದ್ಧಿ ಸಾಧಿಸುತ್ತವೆ ಅಷ್ಟು ಸಂಘಗಳಿಗೆ ಐವತ್ತು ಸಾವಿರ ರೂ. ವೈಯಕ್ತಿಕ ಧನಸಹಾಯ ಮಾಡುತ್ತೇನೆ. ಮಹಿಳಾ ಸಂಘಗಳನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ತುಂಬಿದ ಸಭೆಯಲ್ಲಿ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಬೀದರ್ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ರವೀಂದ್ರ ರತ್ನಾಕರ್, ಬೀದರ್ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕ್ ಪಾಟೀಲ್, ಹುಮನಾಬಾದ್ ಸಿಡಿಪಿಒ ಶಿವಪ್ರಕಾಶ್ ಹಿರೇಮಠ, ಬೀದರ್ ಸಿಡಿಪಿಒ ಮಹಾಂತೇಶ್ ಬಜೇಂತ್ರಿ, ಮಹಿಳಾ ಸ್ವಸಹಾಯ ಸಂಘ, ಸ್ತ್ರೀ ಸಂಘಗಳ ಮುಖಂಡರು, ಸದಸ್ಯರು ಸೇರಿದಂತೆ ಅನೇಕರಿದ್ದರು.

#bandeppa_khashempur #bidar_south_mla #bidar #news #updates