ಹೆಣ್ಣುಮಕ್ಕಳಲ್ಲಿ ಉಳಿತಾಯ ಮಾಡುವ ಗುಣ ಮತ್ತು ಶಕ್ತಿ ಇದೆ: ಶಾಸಕ ಬಂಡೆಪ್ಪ ಖಾಶೆಂಪುರ್
![]() |
ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮಾತನಾಡುತ್ತಿರುವುದು |
"DORE NEWS KANNADA ದೊರೆ ನ್ಯೂಸ್ ಕನ್ನಡ " ಇದು ಕನ್ನಡ ವೆಬ್ ಸೈಟ್ ಆಗಿದ್ದು, ದೇಶದ ಮೂಲೆಮೂಲೆಯಲ್ಲಿನ ನಿಖರ ಸುದ್ದಿಗಳನ್ನು ನಿಮ್ಮ ಮುಂದಿಡುವ ಅಂತರ್ಜಾಲ ತಾಣವಾಗಿದೆ.
ಹೆಣ್ಣುಮಕ್ಕಳಲ್ಲಿ ಉಳಿತಾಯ ಮಾಡುವ ಗುಣ ಮತ್ತು ಶಕ್ತಿ ಇದೆ: ಶಾಸಕ ಬಂಡೆಪ್ಪ ಖಾಶೆಂಪುರ್
![]() |
ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮಾತನಾಡುತ್ತಿರುವುದು |
ಬೀದರ್ (ಆ.20): ಸಾರ್ವಜನಿಕ ಜೀವನದಲ್ಲಿ ನಾವು ಎಷ್ಟು ಸಲ ಅಧಿಕಾರಕ್ಕೆ ಬಂದಿದ್ದಿವಿ ಎಂಬುದು ಮುಖ್ಯವಲ್ಲ. ಅಧಿಕಾರಕ್ಕೆ ಬಂದಾಗ ಏನು ಮಾಡಿದ್ದಿವಿ ಎಂಬುದು ಮುಖ್ಯವಾಗುತ್ತದೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೀದರ್ ಗಳ ಸಂಯುಕ್ತಾಶ್ರಯದಲ್ಲಿ ಬೀದರ್ ನಗರದ ಪೂಜ್ಯ ಡಾ. ಚನ್ನಬಸವ ಪಟ್ಟದ್ದೆವರು ರಂಗಮಂದಿರದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾರ್ವಜನಿಕ ಜೀವನದಲ್ಲಿ ನಾವು ಎಷ್ಟು ದಿನ ಅಧಿಕಾರದಲ್ಲಿ ಇರ್ತಿವಿ ಎಂಬುದು ಮುಖ್ಯವಾಗುವುದಿಲ್ಲ. ಏನು ಮಾಡಿದ್ದಿವಿ ಎಂಬುದು ಮುಖ್ಯವಾಗುತ್ತದೆ ಎಂದರು.
ಕೆಲವರು ನಾನು ಒಂದು ಬಾರಿ ಎಮ್ಎಲ್ಎ ಆದೇ, ಎರಡು ಬಾರಿ ಆದೆ, ಐದು ಬಾರಿ ಆದೆ ಅಂತ ಹೇಳ್ತಾರೆ. ಇನ್ನೂ ಕೆಲವರು ನಾನು ಒಂದು ಬಾರಿ ಸಿಎಂ ಆದೆ. ಎರಡು ಮೂರು ಬಾರಿ ಸಿಎಂ ಆದೆ ಅಂತ ಹೇಳುತ್ತಾರೆ. ಆದರೆ ಅಷ್ಟು ಸಲ ಅಧಿಕಾರ ಸಿಕ್ಕಾಗ ಅವರು ಏನೇನು ಮಾಡಿದ್ದಾರೆ ಎಂಬುದು ಬಹಳಷ್ಟು ಮುಖ್ಯವಾಗುತ್ತದೆ.
ಸಾರ್ವಜನಿಕರ ಒಳಿತಿಗಾಗಿ ಒಳ್ಳೊಳ್ಳೆ ಕೆಲಸವನ್ನು ಮಾಡಬೇಕಾಗುತ್ತದೆ. ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ, ನಾನು ಮಂತ್ರಿಯಾಗಿದ್ದಾಗ ರೈತರ, ಬಡವರ ಪರವಾಗಿ ಕೆಲಸ ಮಾಡಿದ್ದೇವೆ. ನಾನು ಮಂತ್ರಿಯಾಗಿದ್ದಾಗ ಜನಸಾಮಾನ್ಯರ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಅರಸರು ಅನೇಕರನ್ನು ಗುರುತಿಸಿ ಅಧಿಕಾರಕ್ಕೆ ತಂದಿದ್ದರು:
ಡಿ ದೇವರಾಜ ಅರಸರು ಅಂದಿನ ದಿನಗಳಲ್ಲಿ ಅನೇಕರನ್ನು ಗುರುತಿಸಿ ಅಧಿಕಾರಕ್ಕೆ ತಂದಿದ್ದರು. ಡಿ. ದೇವರಾಜ ಅರಸರನ್ನು ಅನೇಕರು ನೆನಪಿಸಿಕೊಳ್ಳುತ್ತಾರೆ. ಮನೆಯಲ್ಲಿ ಕುಳಿತಿದ್ದ ನಮ್ಮನ್ನು ಅರಸರು ಗುರುತಿಸಿ ಎಮ್ಎಲ್ಎ, ಮಂತ್ರಿ ಮಾಡಿದ್ದಾರೆ ಎಂದು ಅನೇಕರು ಹೇಳುತ್ತಿರುತ್ತಾರೆ. ಅವರು ಅನೇಕರಿಗೆ ಮಾರ್ಗದರ್ಶನ ಮಾಡಿದ್ದಾರೆ. ಅಭಿವೃದ್ಧಿ ಪರವಾದ ಕೆಲಸಗಳನ್ನು ದೇವರಾಜ ಅರಸರು ಮಾಡಿದ್ದಾರೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ರಹೀಮ್ ಖಾನ್, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರ್ ಬಾಬು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಮ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸದಾಶಿವ ಎಸ್ ಬಡಿಗೇರ್, ಹಿರಿಯ ಪತ್ರಕರ್ತ ಗಂಧರ್ವ ಸೇನಾ, ವಿಶೇಷ ಉಪನ್ಯಾಸಕ ಡಾ. ಬಸವರಾಜ ಬಲ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಮಹಿಳೆಯರು, ಮಕ್ಕಳು ಇದ್ದರು.
![]() |
ಕವಾಯತು ಮೈದಾನ ಬೀದರ್ |
ಬೀದರ್
(ಆ.15):
ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವದ ನಿಮಿತ್ತವಾಗಿ ಬೀದರ್ ನಗರದ ತಮ್ಮ ನಿವಾಸದಲ್ಲಿ
ಮಧ್ಯರಾತ್ರಿ ಹನ್ನೆರಡು ಗಂಟೆ ಎರಡು ನಿಮಿಷಕ್ಕೆ ಧ್ವಜಾರೋಹಣ ನಡೆಸಿದ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ
ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ
ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು, ಸೋಮವಾರ ಬೆಳಗ್ಗೆ ನಗರದ ಶ್ರೀಸಾಯಿ ಆದರ್ಶ ಶಿಕ್ಷಣ
ಸಂಸ್ಥೆ, ಜೆಡಿಎಸ್ ಜಿಲ್ಲಾ ಕಛೇರಿ, ಭಗತ್ ಸಿಂಗ್ ವೃತ್ತ, ಪೊಲೀಸ್ ಕವಾಯತು ಮೈದಾನ ಸೇರಿದಂತೆ
ವಿವಿಧೆಡೆ ನಡೆದ ಧ್ವಜಾರೋಹಣ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.
ತಮ್ಮ ನಿವಾಸದಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿದ
ಅವರು, ನಮ್ಮ ಪೂರ್ವಜರು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತಮ್ಮನ್ನು ತಾವು
ಸಮರ್ಪಿಸಿಕೊಂಡಿದ್ದಾರೆ. ಅವರನ್ನು ನಾವು ಎಷ್ಟು ಸ್ಮರಿಸಿದರು ಕೂಡ ಕಡಿಮೆ ಎನಿಸುತ್ತದೆ.
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತೈದು ವರ್ಷಗಳು ಆಗ್ತಿರೋದು ಒಂದು ರೀತಿಯ ಹಬ್ಬದ
ವಾತವರಣವಾಗಿದೆ ಎಂದರು.
ಸ್ವಾತಂತ್ರ್ಯ ದಿನಾಚರಣೆ ಎಂಬುದು ಯಾವುದೇ ಜಾತಿ,
ಧರ್ಮಗಳಿಗೆ ಸೀಮಿತವಾಗಿಲ್ಲ. ನಾಡಿನೆಲ್ಲಡೇ ಎಲ್ಲರೂ ಆಚರಣೆ ಮಾಡಬೇಕಾಗಿರುವ ಹಬ್ಬವಾಗಿದೆ.
ನಾವೆಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸಬೇಕಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು
ಹೇಳಿದರು.
ಜೆಡಿಎಸ್ ಜಿಲ್ಲಾ ಕಛೇರಿ ಆವರಣದಲ್ಲಿ ನಡೆದ
ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ನಾವೆಲ್ಲರೂ ಅದೃಷ್ಟವಂತರಾಗಿದ್ದೇವೆ. ನಮ್ಮ
ಹಿರಿಯರು, ಪೂರ್ವಜರು ಮಾಡಿದ ತ್ಯಾಗ, ಬಲಿದಾನದ ಫಲವಾಗಿ ನಾವು ಸ್ವಾತಂತ್ರ್ಯವಾಗಿ ಬದುಕು
ಸಾಗಿಸುತ್ತಿದ್ದೇವೆ. ನಾವೆಲ್ಲರೂ ಈಗ ಸ್ವಾತಂತ್ರ್ಯವಾಗಿ ಬದುಕುತ್ತಿದ್ದೇವೆ ಎಂದರೇ, ಅದು
ನಮ್ಮ ಹಿರಿಯರ ತ್ಯಾಗದ ಫಲವಾಗಿದೆ ಎಂದರು.
ಸ್ವಾತಂತ್ರ್ಯ ಭಾರತದಲ್ಲಿ ಬದುಕುತ್ತಿರುವ
ನಾವೆಲ್ಲರೂ ಜವಾಬ್ದಾರಿಯುತವಾಗಿ, ಮಾದರಿಯಾಗಿ ಬದುಕಬೇಕಾಗಿದೆ. ನಾಡಿನಲ್ಲಿರುವ ಬಡವರ, ಇಲ್ಲದವರ
ಪರವಾಗಿ ಕೆಲಸ ಮಾಡಬೇಕಾಗಿದೆ. ನಾವೆಲ್ಲರೂ ಸೇರಿ ದೇಶದ, ನಾಡಿನ ಅಭಿವೃದ್ಧಿ ಮಾಡುವ ಕೆಲಸ
ಮಾಡಬೇಕಾಗಿದೆ. ನಾಡಿನ ಒಳಿತಿಗಾಗಿ ನಾವೆಲ್ಲರೂ ಸೇರಿ ಕಾರ್ಯನಿರ್ವಹಿಸೋಣ ಎಂದು ಶಾಸಕ ಬಂಡೆಪ್ಪ
ಖಾಶೆಂಪುರ್ ರವರು ಕರೆ ನೀಡಿದರು.
ಬೀದರ್ ನಗರದ ಅವರ ನಿವಾಸದಲ್ಲಿ ನಡೆದ ಧ್ವಜಾರೋಹಣ
ಕಾರ್ಯಕ್ರಮದಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ರವರ ಸಹೋದರರಾದ ರವಿ ಖಾಶೆಂಪುರ್, ರಾಜು
ಖಾಶೆಂಪುರ್, ಸಂಜು ಖಾಶೆಂಪುರ್ ಮತ್ತು ಕುಟುಂಬಸ್ಥರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.
ಶ್ರೀಸಾಯಿ ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ನಡೆದ
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಮುಖರಾದ ಬಾಬುರಾವ್ ಮಲ್ಕಾಪೂರೆ, ರಾಜಶೇಖರ್ ಜವಳೆ, ಸಂಸ್ಥೆಯ
ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರಿದ್ದರು.
ಜೆಡಿಎಸ್ ಜಿಲ್ಲಾ ಕಛೇರಿಯಲ್ಲಿ ನಡೆದ ಧ್ವಜಾರೋಹಣ
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲಪೂರ್, ಸುದರ್ಶನ್, ವಿನಾಯಕ, ಸೋಮನಾಥ,
ಅಶೋಕಕುಮಾರ್ ಕರಂಜೆ, ಶಿವರಾಜ್, ಬೊಮ್ಮಗೊಂಡ ಚಿಟ್ಟವಾಡಿ, ನಬಿ ಖುರೇಷಿ, ರೇವಣಸಿದ್ದಪ್ಪ,
ಲಲಿತಾ, ಸಂಗೀತಾ, ಐಲಿನ್ ಜಾನ್ ಮಠಪತಿ, ಅಶೋಕ್ ಸೇರಿದಂತೆ ಅನೇಕರಿದ್ದರು.
ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಧ್ವಜಾರೋಹಣ
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು, ಎಸ್.ಪಿ, ಶಾಸಕರು, ವಿವಿಧ ಇಲಾಖೆಗಳ ಅಧಿಕಾರಿಗಳು,
ಮುಖಂಡರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರಿದ್ದರು.
ಕ್ರಾಂತಿವೀರ
ಸಂಗೊಳ್ಳಿ ರಾಯಣ್ಣ ಜಯಂತೋತ್ಸವ:
ಬೀದರ್ ನಗರದ ಶ್ರೀ ಸಾಯಿ ಆದರ್ಶ ಶಿಕ್ಷಣ
ಸಂಸ್ಥೆಯ ಮುಂಭಾಗದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಮಾಲಾರ್ಪಣೆ ಮಾಡುವ
ಮೂಲಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತೋತ್ಸವ ಕಾರ್ಯಕ್ರಮಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್
ರವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಾಬುರಾವ್
ಮಲ್ಕಾಪೂರೆ, ರಾಜಶೇಖರ ಜವಳೆ, ಬೊಮ್ಮಗೊಂಡ ಚಿಟ್ಟವಾಡಿ ಸೇರಿದಂತೆ ಅನೇಕರಿದ್ದರು. ಇದೇ ವೇಳೆ
ನಗರದ ಬೊಮ್ಮಗೊಂಡೇಶ್ವರ ವೃತ್ತದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಜಯಂತೋತ್ಸವ ಕಾರ್ಯಕ್ರಮ
ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಪಾಲ್ಗೊಂಡರು.
ಬೀದರ್ (ಆ.06): ಸ್ತ್ರೀ ಶಕ್ತಿ ಸಂಘಗಳು, ಮಹಿಳಾ ಸ್ವಸಹಾಯ ಸಂಘಗಳು ಸರ್ಕಾರದಿಂದ ದೊರೆಯುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವ ಮೂಲಕ ಅಭಿವೃದ್ಧಿ ಸಾಧಿಸಬಹುದಾಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಜಿಲ್ಲಾ ಪಂಚಾಯತಿ ಬೀದರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್, ತಾಲೂಕು ಪಂಚಾಯತಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಬೀದರ್ ಮತ್ತು ಹುಮನಾಬಾದ್ ಗಳ ಸಂಯುಕ್ತಾಶ್ರಯದಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಶನಿವಾರ ನಡೆದ 'ಅಮೃತ ಯೋಜನೆಯಡಿ ಸ್ತ್ರೀ ಶಕ್ತಿ ಸಂಘಗಳಿಗೆ ಬೀಜಧನ ಚೆಕ್ ವಿತರಣಾ ಕಾರ್ಯಕ್ರಮ'ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ತ್ರೀ ಶಕ್ತಿ ಸಂಘಗಳು, ಸರ್ಕಾರದಿಂದ ದೊರೆಯುವ ಸಾಲಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಸಣ್ಣಪುಟ್ಟ ಕಾರ್ಖಾನೆ, ಕೈಗಾರಿಕೆಗಳನ್ನು ಆರಂಭಿಸಬೇಕು ಎಂದರು.
ಮಹಿಳೆಯರು ಸ್ತ್ರೀ ಶಕ್ತಿ ಸಂಘಗಳನ್ನು, ಮಹಿಳಾ ಸ್ವಸಹಾಯ ಸಂಘಗಳನ್ನು ಸ್ಥಾಪಿಸಬೇಕು. ಆ ಮೂಲಕ ಎಲ್ಲರೂ ಒಗ್ಗಟ್ಟಾಗಿ ಉಳಿತಾಯ ಯೋಜನೆಗಳನ್ನು ಆರಂಭಿಸಬೇಕು. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು, ಸಾಲಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಆ ಮೂಲಕ ಸಣ್ಣಪುಟ್ಟ ಉದ್ಯಮಗಳನ್ನು ಆರಂಭಿಸಿ ಅಭಿವೃದ್ಧಿ ಸಾಧಿಸಬೇಕು. ಮಹಿಳೆಯರು ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಸ್ತ್ರೀ ಶಕ್ತಿ ಸಂಘಗಳಿಗೆ ಸರ್ಕಾರ ನೀಡುವ ಸಾಲಸೌಲಭ್ಯಗಳನ್ನು ವೈಯಕ್ತಿಕ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳಬಾರದು. ಸಾಮೂಹಿಕವಾಗಿ ಸಂಘದಲ್ಲಿರುವ ಎಲ್ಲರೂ ಸೇರಿಕೊಂಡು ಸಣ್ಣಪುಟ್ಟ ಉದ್ಯಮ ಆರಂಭಿಸಬೇಕು ಆ ಮೂಲಕ ಅಭಿವೃದ್ಧಿ ಸಾಧಿಸಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಕರೆ ನೀಡಿದರು.
ಸ್ತ್ರೀ ಶಕ್ತಿ ಸಂಘಗಳಿಗೆ 25 ಲಕ್ಷ ರೂ. ಮೌಲ್ಯದ ಚೆಕ್ ವಿತರಣೆ:
ಒಂದು ಸಂಘಕ್ಕೆ ಒಂದು ಲಕ್ಷ ರೂ.ಗಳಂತೆ ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬೀದರ್ ತಾಲೂಕಿನ 14 ಸ್ತ್ರೀ ಶಕ್ತಿ ಸಂಘಗಳಿಗೆ ಮತ್ತು ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹುಮನಾಬಾದ್ ತಾಲೂಕಿನ 11 ಸ್ತ್ರೀ ಶಕ್ತಿ ಸಂಘಗಳಿಗೆ ತಲಾ ಒಂದು ಲಕ್ಷ ರೂ.ನಂತೆ 25 ಸ್ತ್ರೀ ಶಕ್ತಿ ಸಂಘಗಳಿಗೆ 25 ಲಕ್ಷ ರೂ.ಗಳ ಚೆಕ್ ವಿತರಿಸಲಾಯಿತು.
ಇದೇ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಸ್ತ್ರೀ ಶಕ್ತಿ ಸಂಘಗಳಿಗೆ ತಲಾ ಒಂದು ಲಕ್ಷ ರೂ.ನಂತೆ ಚೆಕ್ ವಿತರಣೆ ಮಾಡಲಾಗುತ್ತಿದೆ. ಸಂಘಗಳು ತಮಗೆ ನೀಡಿದ ಒಂದು ಲಕ್ಷ ರೂ. ಚೆಕ್ ಅನ್ನು ಸದುಪಯೋಗ ಪಡೆದುಕೊಳ್ಳಬೇಕು. ಆ ಹಣದಿಂದ ಸಣ್ಣಪುಟ್ಟ ಕೈಗಾರಿಕೆಗಳನ್ನು, ಉದ್ಯಮಗಳನ್ನು ಸ್ಥಾಪಿಸಿಕೊಂಡು ಸಾಮೂಹಿಕವಾಗಿ ಅಭಿವೃದ್ಧಿ ಸಾಧಿಸಬೇಕು. ನೀಡಿರುವ ಹಣವನ್ನು ವೈಯಕ್ತಿಕ ಖರ್ಚಿಗಾಗಿ ಬಳಸಿಕೊಳ್ಳಬಾರದು ಎಂದು ಸಂಘಗಳಿಗೆ ತಿಳಿಸಿದರು.
ವಿವಿಧ ಸ್ತ್ರೀ ಶಕ್ತಿ ಸಂಘಗಳ ಸದಸ್ಯರು ಮಾತನಾಡಿ, ನಾವು ಉದ್ಯಮಗಳನ್ನು ಆರಂಭಿಸುವ ಯೋಚನೆಯಲ್ಲಿದ್ದೇವೆ. ಸರ್ಕಾರದಿಂದ ಈಗ ನೀಡಿರುವ ಒಂದು ಲಕ್ಷ ರೂ. ಹಣ ಸಾಕಾಗುವುದಿಲ್ಲ. ಇನ್ನೂ ಹೆಚ್ಚಿನ ಸಹಾಯಧನ, ಸಾಲಸೌಲಭ್ಯ ಒದಗಿಸಿಕೊಡಬೇಕು. ಬಡ್ಡಿರಹಿತವಾಗಿ ಹೆಚ್ಚಿನ ಸಾಲ ನೀಡಬೇಕು ಎಂದು ಮನವಿ ಮಾಡಿದರು.
ಅಭಿವೃದ್ಧಿ ಸಾಧಿಸಿದರೆ ಐವತ್ತು ಸಾವಿರ ರೂ. ವೈಯಕ್ತಿಕ ನೆರವು:
ಸರ್ಕಾರದಿಂದ ಈಗ ನೀಡಲಾಗಿರುವ ಸಹಾಯಧನವನ್ನು ಸದುಪಯೋಗ ಪಡೆದುಕೊಂಡು, ಮುಂಬರುವ ಕೆಲ ತಿಂಗಳಲ್ಲಿ ಅಭಿವೃದ್ಧಿ ಸಾಧಿಸುವ ಸ್ತ್ರೀ ಶಕ್ತಿ ಸಂಘಗಳಿಗೆ ನಾನು ವೈಯಕ್ತಿಕವಾಗಿ ಐವತ್ತು ಸಾವಿರ ರೂ. ನೆರವು ನೀಡಲು ಸಿದ್ದನಿದ್ದೇನೆ. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಷ್ಟು ಸ್ತ್ರೀ ಶಕ್ತಿ ಸಂಘಗಳು ಅಭಿವೃದ್ಧಿ ಸಾಧಿಸುತ್ತವೆ ಅಷ್ಟು ಸಂಘಗಳಿಗೆ ಐವತ್ತು ಸಾವಿರ ರೂ. ವೈಯಕ್ತಿಕ ಧನಸಹಾಯ ಮಾಡುತ್ತೇನೆ. ಮಹಿಳಾ ಸಂಘಗಳನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ತುಂಬಿದ ಸಭೆಯಲ್ಲಿ ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಬೀದರ್ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ರವೀಂದ್ರ ರತ್ನಾಕರ್, ಬೀದರ್ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕ್ ಪಾಟೀಲ್, ಹುಮನಾಬಾದ್ ಸಿಡಿಪಿಒ ಶಿವಪ್ರಕಾಶ್ ಹಿರೇಮಠ, ಬೀದರ್ ಸಿಡಿಪಿಒ ಮಹಾಂತೇಶ್ ಬಜೇಂತ್ರಿ, ಮಹಿಳಾ ಸ್ವಸಹಾಯ ಸಂಘ, ಸ್ತ್ರೀ ಸಂಘಗಳ ಮುಖಂಡರು, ಸದಸ್ಯರು ಸೇರಿದಂತೆ ಅನೇಕರಿದ್ದರು.
#bandeppa_khashempur #bidar_south_mla #bidar #news #updates