Monday, November 28, 2022

ಖಾಶೆಂಪುರ್: ಸದ್ಗುರು ಸಚ್ಚಿದಾನಂದ ಸ್ವಾಮೀಜಿ ಮೂರ್ತಿ ಪ್ರತಿಷ್ಠಾಪನೆ; ಶಾಸಕ ಬಂಡೆಪ್ಪ ಖಾಶೆಂಪುರ್ ಭಾಗಿ


ಬೀದರ್ (ನ.28): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದಲ್ಲಿ ಸೋಮವಾರ ನಡೆದ ಶ್ರೀ ಸದ್ಗುರು ಸಚ್ಚಿದಾನಂದ ಸ್ವಾಮೀಜಿ (ಚಿದಾನಂದ ಸ್ವಾಮೀಜಿ) ರವರ ನೂತನ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಪಾಲ್ಗೊಂಡರು.
ಇದೇ ವೇಳೆ ಗ್ರಾಮದ ಪ್ರಮುಖರೊಂದಿಗೆ ದೇವಸ್ಥಾನದ ಆವರಣದಲ್ಲಿ ಸಭೆ ನಡೆಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಇದೇ ಡಿಸೆಂಬರ್ 04 ರಿಂದ 08ನೇ ತಾರೀಖಿನವರೆಗೆ ನಡೆಯಲಿರುವ ಶ್ರೀ ಸದ್ಗುರು ಸಚ್ಚಿದಾನಂದ ಸ್ವಾಮೀಜಿ ಜಾತ್ರಾ ಮಹೋತ್ಸವದ ಬಗ್ಗೆ ಚರ್ಚೆ ನಡೆಸಿ, ದೇವಸ್ಥಾನದ ಕಟ್ಟಡ ಕಾಮಗಾರಿ, ಜಾತ್ರಾ ಮಹೋತ್ಸವದ ಸಿದ್ದತೆಯ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕಮಠಾಣಾ ಗವಿಮಠದ ಶ್ರೀ ಶ್ರೀ ಶ್ರೀ ಷ.ಬ್ರ  108 ಸದ್ಗುರು ರಾಚೋಟೇಶ್ವರ ಶಿವಾಚಾರ್ಯ ಮಹಾರಾಜರು, ಇಟಗಾ ಮಠದ ಶ್ರೀ ಶರಣಯ್ಯ ಸ್ವಾಮಿ ಅರ್ಚಕರು, ಶ್ರೀ ಸದ್ಗುರು ಸಚ್ಚಿದಾನಂದ ಸ್ವಾಮೀಜಿ ದೇವಸ್ಥಾನದ ಅರ್ಚಕರಾದ ಶ್ರೀ ಶಿವಾನಂದ ಸ್ವಾಮೀಜಿರವರು, ಮಂಜುನಾಥ ಶಾಸ್ತ್ರಿ, ಧನಂಜಯ ಶಾಸ್ತ್ರಿ, ವಿಜಯಕುಮಾರ್ ಶಾಸ್ತ್ರಿ, ಚಿದಾನಂದ ಸ್ವಾಮಿ, ಬಸಯ್ಯಸ್ವಾಮಿ, ಸಿದ್ದಯ್ಯ ಸ್ವಾಮಿ, ಚಿದಾನಂದ ಸ್ವಾಮಿ, ಪ್ರಮುಖರಾದ ವಿಶ್ವನಾಥ ಬಾಲೆಬಾಯಿ, ಶರಣಪ್ಪ ಖಾಶೆಂಪುರ್, ಶಿವಪ್ಪ ಪೊಲೀಸ್ ಪಾಟೀಲ್, ರಾಜಕುಮಾರ ಪೊಲೀಸ್ ಪಾಟೀಲ್, ಭಜರಂಗ ತಮ್ಗೊಂಡ, ಆನಂದ ತಮ್ಗೊಂಡ, ಬಕ್ಕಪ್ಪ ಸುತಾರ್, ದೂಳಪ್ಪ ಪಟಣ್, ನರಸಪ್ಪ ಬಸ್ಗೊಂಡ, ಬಾಬು ಗುಮಾಸ್ತಿ, ಸತೀಶ್ ಗುಮಾಸ್ತಿ, ಮಂಜುನಾಥ ಬಾಲೆಬಾಯಿ, ಶಿವರಾಜ್ ಹಳ್ಳೊಳ್ಳಿ, ಬಸವರಾಜ ಬಂತಿಗಿ, ರಮೇಶ ಬಾಲೆಬಾಯಿ ಸೇರಿದಂತೆ ಅನೇಕರಿದ್ದರು.
Bandeppa Khashempur/ಬಂಡೆಪ್ಪ ಖಾಶೆಂಪುರ್ Bandeppa Khashempur Youth Brigade -R Bandeppa Kashempur ಬಂಡೆಪ್ಪ ಖಾಶೆಂಪುರ್ ಅಭಿಮಾನಿಗಳ ಬಳಗ #ಬಂಡೆಪ್ಪ #ಖಾಶೆಂಪುರ್ #ಬೀದರ್ #ದಕ್ಷಿಣ #ಶಾಸಕ #Bandeppa #Khashempur #Bidar #South #MLA

Sunday, November 27, 2022

ಬೀದರ್ ಕನ್ನಡ ಶ್ರೇಷ್ಠ ಮತ್ತು ವಿಶೇಷ ಕನ್ನಡವಾಗಿದೆ: ಶಾಸಕ ಬಂಡೆಪ್ಪ ಖಾಶೆಂಪುರ್


ಬೀದರ್ (ನ.27): ಬೀದರ್ ಕನ್ನಡ ಶ್ರೇಷ್ಠವಾದ ಕನ್ನಡವಾಗಿದೆ. ಪಕ್ಕದಲ್ಲೇ ತೆಲಂಗಾಣ, ಮಹಾರಾಷ್ಟ್ರ ರಾಜ್ಯವಿದ್ದು, ತೆಲಗು, ಮರಾಠಿಗಳ ನಡುವೆ ಕೂಡ ಬೀದರ್ ನಲ್ಲಿರುವ ನಾವು ನಮ್ಮ ತನವನ್ನು ಬಿಟ್ಟುಕೊಡದೆ ನಮ್ಮ ಭಾಷೆಯನ್ನು ಉಳಿಸಿ, ಬೆಳಸಿಕೊಂಡು ಸಾಗುತ್ತಿದ್ದೇವೆಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನ, ಗಂಗನಪಳ್ಳಿ ಪರಿವಾರ, ಸಿಕಿಂದ್ರಾಪೂರ ಪರಿವಾರ ಬೀದರ್ ಗಳ ಸಂಯುಕ್ತಾಶ್ರಯದಲ್ಲಿ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೆವರು ರಂಗಮಂದಿರದಲ್ಲಿ ಭಾನುವಾರ ನಡೆದ ಶಿಕ್ಷಕ - ಸಾಹಿತಿ ಡಾ. ಸಂಜುಕುಮಾರ ಅತಿವಾಳೆ ಸಂಪಾದಿಸಿರುವ ಭಾವಗಂಗೆ ಕೃತಿ ಲೋಕಾರ್ಪಣೆ ಹಾಗೂ ಸಾಹಿತಿ - ಕಲಾವಿದರ ಸಂಗಮ ಸಾಂಸ್ಕೃತಿಕ ಮತ್ತು ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೀದರ್ ಭಾಷೆಯೇ ದೊಡ್ಡ ಸಾಹಿತ್ಯವಾಗಿದೆ. ಇಲ್ಲಿನ ಕನ್ನಡ ವಿಶೇಷ ಕನ್ನಡವಾಗಿದೆ ಎಂದರು.

ಬೀದರ್ ಭಾಗದ ಕನ್ನಡ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಅಭಿಯಾನ ಶುರು ಮಾಡಬೇಕಾಗಿದೆ. ನಮ್ಮ ಕನ್ನಡ ಭಾಷೆಯ ಉಳಿವಿಗಾಗಿ ದೊಡ್ಡಮಟ್ಟದ ಅಭಿಯಾನ ಮಾಡಬೇಕಾಗಿದೆ. ನಾವು ಬೆಂಗಳೂರಿನಂತ ಮಹಾನಗರಗಳ ಕಡೆಗೆ ಹೋಗುತ್ತಿದ್ದೇವೆ. ಆ ಮೂಲಕ ಬೀದರ್ ಭಾಷೆಯನ್ನು ಮರೆಯಿತ್ತಿದ್ದೇವೆ. ಬೀದರ್ ಕನ್ನಡ ದೊಡ್ಡ ಸಾಹಿತ್ಯವಾಗಿದೆ. ಅದನ್ನು ಉಳಿಸಿಕೊಂಡು ಸಾಗಬೇಕಾಗಿದೆ.

ಕನ್ನಡ ಸಾಹಿತ್ಯ, ಕನ್ನಡ ಭಾಷೆ ಉಳಿಸಿದ ಶ್ರೇಯಸ್ಸು ಯಾರಿಗಾದರೂ ಸಿಗುತ್ತದೆ ಎಂದರೇ ಅದು ಬೀದರ್ ನವರಿಗೆ ಸಲ್ಲುತ್ತದೆ. ಸಾಹಿತ್ಯದ ಜೊತೆ ಜೊತೆಗೆ ಬೀದರ್ ಭಾಷೆ ಉಳಿಸುವುದು ಸಹ ನಮ್ಮೆಲ್ಲರ ದೊಡ್ಡಮಟ್ಟದ ಕರ್ತವ್ಯವಾಗಿದೆ. ಭಾಷೆ ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೆಲಸ ಮಾಡೋಣ. ಸಾಹಿತಿಗಳು ಬೀದರ್ ಭಾಷೆ ಉಳಿಸುವ ಕೆಲಸ ಮಾಡಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ವಿಧಾನ ಪರಿಷತ್ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆರವರು ಮಾತನಾಡಿ, ಸಾಹಿತಿ ಗಂಗನಪಳ್ಳಿರವರು ಸಾಹಿತ್ಯಕ್ಕಾಗಿ ಬಹಳಷ್ಟು ಶ್ರಮಿಸಿದ್ದಾರೆ. ಅವರು ಕನ್ನಡ ಸಾಹಿತ್ಯಕ್ಕೆ ದೊಡ್ಡಮಟ್ಟದ ಕೊಡುಗೆ ನೀಡಿದ್ದಾರೆ. ಅವರು ಐವತ್ತು ವರ್ಷಗಳಿಂದ ಸಾಹಿತ್ಯ ಸೇವೆಯಲ್ಲಿ ತೊಡಗಿದ್ದಾರೆ. ಅವರ ಸಾಹಿತ್ಯದ ಸೇವೆ ಇವತ್ತು ಪುಸ್ತಕ ರೂಪದಲ್ಲಿ ಹೊರಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಒಬ್ಬ ಹಿರಿಯ ಜೀವಿಯ ಸಾಹಿತ್ಯ ಸೇವೆಯನ್ನು ಗುರುತಿಸುವ ನಿಟ್ಟಿನಲ್ಲಿ ಎಂಬತ್ತೇರಡು ಜನ ಸಾಹಿತಿಗಳು ಮುನ್ನುಡಿ, ಇನ್ನೂಡಿ ಬರೆದಿರುವ ಈ ಪುಸ್ತಕವನ್ನು ಎಲ್ಲರೂ ಖರೀದಿಸಿ ಓದಬೇಕು. ಆ ಮೂಲಕ ಸಾಹಿತಿಗಳಿಗೆ ಶಕ್ತಿ ತುಂಬಬೇಕೆಂದು ವಿಧಾನ ಪರಿಷತ್ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆರವರು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಗಂದಗೆ, ಭಾವಗಂಗೆ ಕೃತಿಯ ಸಂಪಾದಕ ಸಂಜೀವಕುಮಾರ್ ಅತಿವಾಳೆರವರು ಸೇರಿದಂತೆ ಅನೇಕರು ಮಾತನಾಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ್ ಹೊಸಮನಿ, ಹಿರಿಯ ಸಾಹಿತಿ ಎಂ.ಜಿ ಗಂಗನಪಳ್ಳಿ, ಡಾ. ರಾಜಶೇಖರ ಜಮದಂಡಿ, ಪ್ರೊ. ಸಿದ್ರಾಮಪ್ಪ ಮಾಸಿಮಾಡೆ, ಗುರಮ್ಮ ಸಿದ್ದಾರೆಡ್ಡಿ, ಪುಣ್ಯವತಿ ವಿಸಾಜಿ, ಅಮೃತರಾವ್ ಚಿಮಕೋಡೆ, ಸುರೇಶ ಚನ್ನಶೆಟ್ಟಿ, ಕವಿತಾ ಸ್ವಾಮಿ, ಡಾ. ಶಾಮರಾವ್ ನೆಲವಾಡೆ, ರೇಣುಕಾ ಮಳ್ಳಿ, ಲಕ್ಷ್ಮಣ ಮೇತ್ರೆ ಸೇರಿದಂತೆ ಅನೇಕರಿದ್ದರು.

ವಿವಿಧ ಪಕ್ಷ ತೊರೆದು ಶಾಸಕ ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಜೆಡಿಎಸ್ ಸೇರಿದ ಕಾರ್ಯಕರ್ತರು


ಬೀದರ್ (ನ.27): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗದಲ ಗ್ರಾಮದ ವಿವಿಧ ಪಕ್ಷಗಳ ಕಾರ್ಯಕರ್ತರು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. 

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಭಾನುವಾರ ಬೆಳಗ್ಗೆ ಜೆಡಿಎಸ್ ಶಾಲು ಹೊದಿಸುವ ಮೂಲಕ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು‌.

ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು,  ಜೆಡಿಎಸ್ ಪಕ್ಷ ರೈತರ, ಬಡವರ, ಶ್ರಮಿಕರ ಪರವಾಗಿರುವ ಪಕ್ಷವಾಗಿದೆ. ತಾವು ಬೇರೆ ಪಕ್ಷದಿಂದ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತಸದ ವಿಷಯವಾಗಿದೆ. ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ದರಾಗಿ, ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ನೂತನ ಕಾರ್ಯಕರ್ತರಿಗೆ ಕರೆ ನೀಡಿದರು.

ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಶಕ್ತಿ ತುಂಬಬೇಕಾಗಿದೆ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ತರಬೇಕಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೆಲಸ ಮಾಡಬೇಕು. ಜೆಡಿಎಸ್ ಪಕ್ಷ ಅಧಿಕಾರದಲ್ಲಿದ್ದಾಗ ನಾಡಿನ ಒಳಿತಿಗಾಗಿ ಜಾರಿಗೊಳಿಸಿದ ಯೋಜನೆಗಳ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸಬೇಕು. ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಏನೆಲ್ಲಾ ಕೆಲಸಗಳನ್ನು ಮಾಡುತ್ತೇವೆ ಎಂಬುದನ್ನು ಸಹ ಮನೆಮನೆಗೂ ಮುಟ್ಟಿಸುವ ಕೆಲಸ ಮಾಡಬೇಕು.

ತಳ ಹಂತದಿಂದ ಪಕ್ಷ ಸಂಘಟನೆ ಮಾಡಬೇಕು. ಮನೆಮನೆಗೂ ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳ ಬಗ್ಗೆ, ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳಿಸಿ ಹೇಳಬೇಕು. ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರೂ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕಾಗಿದೆ. ಎಲ್ಲರೂ ಸೇರಿ ಪಕ್ಷವನ್ನು ಬಲಿಷ್ಠಗೊಳಿಸೋಣ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಈ ಸಂದರ್ಭದಲ್ಲಿ ಬಗದಲ್ ನ ನೂತನ ಜೆಡಿಎಸ್ ಕಾರ್ಯಕರ್ತರಾದ ಪ್ರಕಾಶ, ಸಿಮನ್, ವಿಲ್ಸನ್, ಶ್ರೀಮಂತ್, ರಮೇಶ್, ಸಾಲೋಮನ್, ಜೀವನ್, ಸುನೀಲ್, ರಾಜು, ಪ್ರಕಾಶ (ದುಬೈ), ಸುನೀಲ್ ಸಿರ್ಸಿ, ಸಂಜುಕುಮಾರ್, ಓಂಕಾರ, ರಾಹುಲ್, ರತನ್ ಪ್ರಕಾಶ್, ಪ್ರಲಾದ್, ಗುಂಡಪ್ಪಾ, ವಿಜಯಕುಮಾರ್, ಸಂತೋಷ್, ಆಕಾಶ್, ನೌನಾಥ್, ಪ್ರಕಾಶ್, ಶ್ರೀಮಂತ, ತುಕ್ಕರಾಮ್, ಮಚೇಂದ್ರ, ಧನರಾಜ್, ಬಸವರಾಜ ಸೇರಿದಂತೆ ಅನೇಕರಿದ್ದರು.

Monday, November 21, 2022

ಮಹಾತ್ಮರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗೋಣ: ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ (ನ.21): ಮಹಾತ್ಮರ ಇತಿಹಾಸ ತಿಳಿದುಕೊಳ್ಳುವ ಮೂಲಕ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ. ಮಹಾತ್ಮರ ತತ್ವಾದರ್ಶಗಳನ್ನು ಪಾಲಿಸೋಣ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಬೀದರ್ ಜಿಲ್ಲೆಯ ಚಿಟ್ಟಗುಪ್ಪಾ ಪಟ್ಟಣದ ಶ್ರೀಬೊಮ್ಮಗೊಂಡೇಶ್ವರ ಚೌಕ್ ಹತ್ತಿರ ಸೋಮವಾರ ನಡೆದ ದಾಸ ಶ್ರೇಷ್ಠ ಭಕ್ತ ಶ್ರೀ ಕನಕದಾಸರ 535ನೇ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಮಹಾತ್ಮರ ಜೀವನ ಚರಿತ್ರೆ, ಇತಿಹಾಸವನ್ನು ಓದಿ ತಿಳಿದುಕೊಳ್ಳುವ ಮೂಲಕ ನಮ್ಮ ಜೀವನದಲ್ಲಿ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಸಾಗಬೇಕಾಗಿದೆ ಎಂದರು.
ಮಹಾತ್ಮರ ಇತಿಹಾಸ ನೆನಪಿನಲ್ಲಿ ಇಟ್ಟುಕೊಳ್ಳುವ ಔಷದಿ ಇದ್ದರೆ ಒಳ್ಳೆಯದಾಗುತ್ತಿತ್ತು. ನಾವು ಮಹಾತ್ಮರ ಇತಿಹಾಸವನ್ನು ಒಂದು ಕಿವಿಯಿಂದ ಕೇಳಿ ಇನ್ನೊಂದು ಕಿವಿಯಿಂದ ಹೊರಬಿಡುತ್ತಿದ್ದೇವೆ. ಇತಿಹಾಸ ನೆನಪಿನಲ್ಲಿ ಇರುವಂತೆ ಮಾಡುವ ಯಾವುದಾದರೊಂದು ಔಷಧಿ ಕಂಡು ಹಿಡಿಯಬೇಕಾಗಿದೆ.
ಬುದ್ಧ, ಬಸವ, ಅಂಬೇಡ್ಕರ್, ಕನಕದಾಸ, ಅಂಬಿಗರ ಚೌಡಯ್ಯರವರು ಮನುಷ್ಯರಾಗಿ ಹುಟ್ಟಿ ಮಹಾತ್ಮರಾಗಿದ್ದಾರೆ‌. ಅವರೆಲ್ಲರೂ ಒಂದೇ ಜನ್ಮದಲ್ಲಿ ಹೆಸರು ಮಾಡಿದ್ದಾರೆ. ಅವರ ಇತಿಹಾಸ ನಾವು ಓದುತ್ತಿದ್ದೇವೆ. ನಾವು ಮಹಾತ್ಮರ ಮೂರ್ತಿಗಳನ್ನು ನಿರ್ಮಾಣ ಮಾಡಿ ಜಯಂತಿ ಹೆಸರಲ್ಲಿ ಕುಣಿದುಕುಪ್ಪಳಿಸುವ ಕೆಲಸ ಮಾಡುತ್ತಿದ್ದೇವೆ. ಆದರೆ ಅವರ ತತ್ವ ಸಿದ್ದಾಂತಗಳನ್ನು ಮರೆತುಬಿಡುತ್ತಿದ್ದೇವೆ‌ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಬೇಸರ ವ್ಯಕ್ತಪಡಿಸಿದರು.

ಚಿಟ್ಟಗುಪ್ಪಾ ಮಾದರಿ ತಾಲೂಕು ಮಾಡಲು ಪ್ರಯತ್ನಿಸುತ್ತೇವೆ:
ಇತ್ತೀಚೆಗೆ ಚಿಟ್ಟಗುಪ್ಪಾ ಹೊಸ ತಾಲೂಕು ಆಗಿದೆ. ನಾವು ಹೊಸ ತಾಲೂಕಿನ ಅಭಿವೃದ್ಧಿಗೆ ವಿಶೇಷ ಗಮನಹರಿಸಬೇಕಾಗಿದೆ. ಚಿಟ್ಟಗುಪ್ಪಾ ತಾಲೂಕಿನ ಬಹುತೇಕ ಹಳ್ಳಿಗಳು ನನ್ನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ. ಇನ್ನೂ ಅನೇಕ ಹಳ್ಳಿಗಳು ರಾಜಶೇಖರ ಪಾಟೀಲ್ ರವರ ಹುಮನಾಬಾದ್ ವಿಧಾನಸಭಾ ಕ್ಷೇತ್ರಕ್ಕೆ ಬರುತ್ತವೆ. ರಾಜಶೇಖರ ಪಾಟೀಲ್ ರವರು ಮತ್ತು ನಾನು ಇಬ್ಬರು ಸೇರಿ ಮಾದರಿ ತಾಲೂಕು ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇವೆ. ಈ ವಿಷಯದ ಕುರಿತು ಅವರೊಂದಿಗೆ ಜಂಟಿ ಸಭೆ ನಡೆಸುತ್ತೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕಾಗಿನೆಲೆ ಗುರುಪೀಠ ತಿಂತಣಿಯ ಪರಮಪೂಜ್ಯ ಶ್ರೀ ಚಿಕ್ಕಲಿಂಗ ಬೀರದೇವರು, ಪರಮಪೂಜ್ಯರಾದ ರಾಜಪ್ಪ ಮುತ್ಯ ಕರಕನಳ್ಳಿ, ಶ್ರೀ ಮಲ್ಲಯ್ಯ ಮುತ್ಯ, ಮಚೇಂದ್ರ ಮುತ್ಯರವರು ವಹಿಸಿದ್ದರು. ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಾಜಶೇಖರ ಬಿ ಪಾಟೀಲ್, ಉಪನ್ಯಾಸಕ ಡಾ. ಶರಣಪ್ಪ ಎಸ್ ಮಲಗೊಂಡ, ಪ್ರಮುಖರಾದ ಅಮೃತರಾವ್ ಚಿಮಕೋಡೆ, ಮಾಲಾಶ್ರೀ ಶಾಮರಾವ್ ಬುತಾಳೆ, ಸೌಭಾಗ್ಯವತಿ ಅಶೋಕಸ್ವಾಮಿ, ಬಸವರಾಜ ಮಾಳಗೆ, ಸಂತೋಷ ಜೋಳದಪಕೆ, ಶರಣಪ್ಪ ದಸ್ತಗೊಂಡ, ಭೀರಪ್ಪ ಕೊಂಡಬಲ್, ರಾಮಚಂದ್ರ ಒಳಕಿಂಡಿ, ಪಂಡಿತ್ ಕಲ್ಯಾಣಿ, ಶರತ್ ನಾರಣಪೇಟಕರ್, ಪ್ರಲಾದ್ ಪೂಜಾರಿ, ಬಸವರಾಜ ಮೊಳ್ಕೇರಾ, ಸತೀಶ್ ರಾಂಪೂರೆ, ಶಿವರಾಜ ಚಿನ್ಕೇರಾ, ಮಲ್ಲಪ್ಪ ಮನ್ನಾಎಖೇಳ್ಳಿ, ಅಶೋಕ ಚಳ್ಕಾಪೂರೆ, ಅಶೋಕ ಕಂಡಗೊಂಡ, ಅಶೋಕ ಸೊಂಡೆ, ಸಚಿನ್ ಕಲ್ಲೂರ, ಗುಂಡಪ್ಪ, ಪದ್ಮಾವತಿ ಪಾಟೀಲ್, ರೇಖಾ ಬಾಚಾ, ಮನೋಜ್, ದಿಲೀಪ್, ವಿಶಾಲ್ ಬೋರಾಳೆ, ಅನಿಲ್ ಕುಮಾರ್ ಸೇರಿದಂತೆ ಅನೇಕರಿದ್ದರು.
Bandeppa Khashempur/ಬಂಡೆಪ್ಪ ಖಾಶೆಂಪುರ್ Bandeppa Khashempur Youth Brigade -R Bandeppa Kashempur #Bandeppa #Khashempur #ಬಂಡೆಪ್ಪ #ಖಾಶೆಂಪುರ್

Thursday, November 10, 2022

ಚಾಂಗಲೇರಾ ಪುಣ್ಯಕ್ಷೇತ್ರವಾಗಿದೆ, ವೀರಭದ್ರೇಶ್ವರ ಮಹಿಮೆ ಅಪಾರವಾಗಿದೆ: ಶಾಸಕ ಬಂಡೆಪ್ಪ ಖಾಶೆಂಪುರ್

ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ (ನ.10): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಸುಕ್ಷೇತ್ರ ಚಾಂಗಲೇರಾ ಪುಣ್ಯಕ್ಷೇತ್ರವಾಗಿದೆ. ಇಲ್ಲಿರುವ ವೀರಭದ್ರೇಶ್ವರ ದೇವರ ಮಹಿಮೆ ಅಪಾರವಾಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಸುಕ್ಷೇತ್ರ ಚಾಂಗಲೇರಾ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದ ಶ್ರೀ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕ ಮಾತ್ರವಲ್ಲದೇ ಪಕ್ಕದ ರಾಜ್ಯಗಳಾದ ಆಂದ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ರಾಷ್ಟ್ರದ ವಿವಿಧೆಡೆಯಿಂದ ಲಕ್ಷಾಂತರ ಜನ ಭಕ್ತರು ವೀರಭದ್ರೇಶ್ವರ ದೇವರ ಸನ್ನಿಧಿಗೆ ಬರುತ್ತಾರೆ ಎಂದರೇ ಅದು ವೀರಭದ್ರೇಶ್ವರ ದೇವರ ಮಹಿಮೆಯಿಂದ ಸಾಧ್ಯವಾಗಿದೆ ಎಂದರು.
ಪುರಾಣ, ಪ್ರವಚನಗಳನ್ನು ನಾವೆಲ್ಲರೂ ಸಮಯ ಸಿಕ್ಕಾಗಲೆಲ್ಲ ಕೇಳುತ್ತಿರಬೇಕು. ಯಾಕೆಂದರೆ, ಯಾವ ಗುರುಗಳ ಮಾತು ಯಾವ ಸಮಯದಲ್ಲಿ ಯಾರ ಮನಸ್ಸು ಪರಿವರ್ತನೆ ಮಾಡುತ್ತೋ, ಯಾರ ವ್ಯಕ್ತಿತ್ವ ಸುಧಾರಣೆಗೆ ಕಾರಣವಾಗುತ್ತೊ ಗೋತ್ತಾಗುವುದಿಲ್ಲ. ಅಂತ ಶಕ್ತಿ ಪುರಾಣ, ಪ್ರವಚನಗಳಲ್ಲಿದೆ. ಈ ಭಾಗದಲ್ಲಿ ವೀರಭದ್ರೇಶ್ವರ ದೇವರ ಉದ್ಭವ ಲಿಂಗವಿದೆ. ಇದೊಂದು ಪುಣ್ಯ ಕ್ಷೇತ್ರವಾಗಿದೆ. ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ, ರಥೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದಿದ್ದಾರೆ ಎಂದರೆ ಅದು ವೀರಭದ್ರಶ್ವರ ಶಕ್ತಿಯಿಂದ ಸಾಧ್ಯವಾಗಿದೆ.
ಈ ಪುಣ್ಯಕ್ಷೇತ್ರದ ಅಭಿವೃದ್ಧಿಗಾಗಿ ಐದು ಕೋಟಿ ರೂ. ಅನುದಾನ ಒದಗಿಸಿಕೊಡುತ್ತೇನೆ ಎಂದು ನಾನು ಈ ಹಿಂದೆ ಹೇಳಿದ್ದೆ. ಈಗಾಗಲೇ ಸುಮಾರು ಮೂರುವರೆ ಕೋಟಿ. ರೂ. ಒದಗಿಸಿಕೊಟ್ಟಿದ್ದೇನೆ. ಇನ್ನೂ ಸುಮಾರು ಒಂದುವರೆ ಕೋಟಿ ರೂ. ಒದಗಿಸಿಕೊಡುವ ಕೆಲಸ ಮಾಡುತ್ತೇನೆ. ನಾವೆಲ್ಲರೂ ಸೇರಿ ಈ ರೀತಿಯ ಪುಣ್ಯಕ್ಷೇತ್ರಗಳ ಅಭಿವೃದ್ಧಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡೋಣ.
ಸಮಾಧಾನ, ನೆಮ್ಮದಿ, ಸಂತೃಪ್ತಿ ಸಿಗುತ್ತದೆ ಎಂದು ಜನರು ದೇವಸ್ಥಾನಗಳಿಗೆ ಬರುತ್ತಾರೆ. ದೇವರು ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಾನೆ ಎಂಬುದು ಭಕ್ತರ ಆಶಯವಾಗಿರುತ್ತದೆ. ನಾವು ನಾಡಿಗಾಗಿ, ನಾಡಿನ ಬಡಜನರ ಪರವಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಾಗಿದೆ. ಜಾತಿ, ಮತ ಬೇಧ ಭಾವ ಮರೆತು, ನಮಗೆ ಸಿಕ್ಕಿರುವ ಅಧಿಕಾರವನ್ನು ಸದುಪಯೋಗ ಪಡೆಸಿಕೊಂಡು ನಾಡಿನ ಒಳಿತಿಗಾಗಿ ಕೆಲಸ ಮಾಡಬೇಕು. ಅಧಿಕಾರವನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳಬಾರದು‌ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು‌.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತಡೋಳಾ ಕಟ್ಟಿಮಠ ಸಂಸ್ಥಾನ ಮೇಹಕರ್ ಮಠದ ಪರಮಪೂಜ್ಯ ಶ್ರೀ ರಾಜೇಶ್ವರ ಶಿವಾಚಾರ್ಯರು, ಹುಮಾನಾಬಾದ್  ಹಿರೇಮಠ ಸಂಸ್ಥಾನದ ಪರಮಪೂಜ್ಯ ಶ್ರೀ ರೇಣುಕಾ ಗಂಗಾಧರ ಶಿವಾಚಾರ್ಯರು, ಬಸವಕಲ್ಯಾಣದ ತ್ರಿಪುರಾಂತ ಗವಿಮಠದ ಪರಮಪೂಜ್ಯ ಶ್ರೀ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ವಹಿಸಿದ್ದರು. ದೇವಸ್ಥಾನದ ಆಡಳಿತ ಅಧಿಕಾರಿ ಅನಂತ ಕುಲಕರ್ಣಿ, ಕೆಇಬಿ ಎಇಇ ಅನಿಲ್ ಕುಮಾರ್ ಪಾಟೀಲ್, ಸಂತೋಷ ರಾಸೂರ, ಸಂಜುಕುಮಾರ್ ಜುನ್ನಾ, ಕೃಷ್ಣ ಪಾಂಚಾಳ, ಶೈಲೇಂದ್ರ ಕವಡಿ, ಮಲ್ಲಪ್ಪ ಮನ್ನಾಎಖೇಳ್ಳಿ, ರಾಜಶೇಖರ ದಾನ, ನೀಲಕಂಠ, ಮಲ್ಲಪ್ಪ, ಸೇರಿದಂತೆ ಅನೇಕರಿದ್ದರು.
#ಬಂಡೆಪ್ಪ #ಖಾಶೆಂಪುರ್ #Bandeppa #Khashempur Bandeppa Khashempur/ಬಂಡೆಪ್ಪ ಖಾಶೆಂಪುರ್ Bandeppa Kashempur Bandeppa Khashempur/ಬಂಡೆಪ್ಪ ಖಾಶೆಂಪುರ್ Bandeppa Khashempur Public Leader Bandeppa Kashempur

Sunday, November 6, 2022

ಬೇಮಳಖೇಡ ಅಪಘಾತ ಪ್ರಕರಣ: ಉಡಮನಳ್ಳಿಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ವೈಯಕ್ತಿಕ ಧನಸಹಾಯ ಮಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್

ಉಡಮನಳ್ಳಿ ಗ್ರಾಮದಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ (ನ.06): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇಮಳಖೇಡದ ಸರ್ಕಾರಿ ಪ್ರೌಢ ಶಾಲೆಯ ಬಳಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಉಡಮನಳ್ಳಿಯ ಆರು ಜನ ಮಹಿಳಾ ಕಾರ್ಮಿಕರ ಮನೆಗಳಿಗೆ ಮತ್ತು ಕಾಡವಾದದ ಒಬ್ಬ ಮಹಿಳಾ ಕಾರ್ಮಿಕರ ಮನೆಗೆ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಭೇಟಿ ನೀಡಿ, ಮೃತ ಮಹಿಳಾ ಕಾರ್ಮಿಕರ ಕುಟುಂಬದವರಿಗೆ ಸಾಂತ್ವನ ಹೇಳಿ, ವೈಯಕ್ತಿಕ ಧನಸಹಾಯ ಮಾಡಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಡಮನಳ್ಳಿ ಗ್ರಾಮಕ್ಕೆ ಭಾನುವಾರ ಬೆಳಗ್ಗೆ ಭೇಟಿ ನೀಡಿದ ಶಾಸಕರು, ಮೃತರ ಮನೆಗಳಿಗೆ ಭೇಟಿ ನೀಡುವ ಮುಂಚೆ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಅವರು, ಹಳ್ಳಿಯ ಜನರು ಯಾವ ಕಾರಣಕ್ಕಾಗಿ ಬೇರೆ ಬೇರೆ ಊರುಗಳಿಗೆ ಕೆಲಸಗಳಿಗೆ ಹೋಗ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು ಎಂಬ ಕಾರಣಕ್ಕಾಗಿ ಪಂಚಾಯತಿಗೆ ಬಂದಿದ್ದೇನೆ ಎಂದರು.
ಬೇಮಳಖೇಡದ ಬಳಿ ಸಂಭವಿಸಿದ ಅಪಘಾತ ನನಗೆ ನೋವುಂಟು ಮಾಡಿದೆ. ನನ್ನ ಕ್ಷೇತ್ರದ ಏಳು ಜನರು ಈ ಘಟನೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕಾಗಿದೆ. ಗ್ರಾಮ ಪಂಚಾಯತಿಯಿಂದ ನೀಡುವ ನರೇಗಾ ಕೆಲಸದ ದಿನಗಳನ್ನು ಹೆಚ್ಚಿಸುವ ಕೆಲಸ ಆಗಬೇಕಾಗಿದೆ. ನರೇಗಾ ಕೆಲಸದ ದಿನಗಳನ್ನು ಹೆಚ್ಚಿಸುವಂತೆ ನಾನು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದರು.

ನಡೆಯಬಾರದಿದ್ದ ಘಟನೆ ನಡೆದಿದೆ:
ಬೇಮಳಖೇಡದ ಬಳಿ ನಡೆಯಬಾರದಿದ್ದ ಘಟನೆ ನಡೆದು ಹೋಗಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನಾನು ಸಾಧ್ಯವಾದಷ್ಟು ವೈಯಕ್ತಿಕ ಧನಸಹಾಯ ಮಾಡಿದ್ದೇನೆ. ಸರ್ಕಾರದಿಂದ ಪರಿಹಾರ ಒದಗಿಸಿಕೊಡುವ ಕೆಲಸ ಮಾಡುತ್ತೇನೆ. ಗಾಯಾಳುಗಳಿಗೂ ವೈಯಕ್ತಿಕ ಧನಸಹಾಯ ಮಾಡುತ್ತೇನೆ.
ಮೃತರ ಕುಟುಂಬಕ್ಕೆ ಮತ್ತು ಗಾಯಾಳುಗಳ ಕುಟುಂಬಕ್ಕೆ ಸರ್ಕಾರದಿಂದ ಯಾವ್ಯಾವ ರೀತಿಯ ಸೌಲಭ್ಯ ಒದಗಿಸಿಕೊಡಲು ಸಾಧ್ಯವಾಗುತ್ತದೆಯೋ ಆ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡುತ್ತೇನೆ. ಶಾಸಕನಾಗಿ ನಾನು ಏನೆಲ್ಲಾ ಸಹಾಯ ಮಾಡಲು ಸಾಧ್ಯವೋ ಎಲ್ಲಾ ರೀತಿಯ ಸಹಾಯ ಮಾಡುತ್ತೇನೆ.
ಮೃತರ ಕುಟುಂಬದಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಾನು ವೈಯಕ್ತಿಕ ಸಹಾಯ ಮಾಡುತ್ತೇನೆ. ಸರ್ಕಾರದಿಂದ ಕೂಡ ಸೌಲಭ್ಯಗಳನ್ನು ಒದಗಿಸಿಕೊಡುವ ಕೆಲಸ ಮಾಡುತ್ತೇನೆ. ಎಲ್ಲರೂ ಸೇರಿ ಆ ಕುಟುಂಬಗಳಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಾಗುತ್ತದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಜಮೀನಿಗೆ 24 ತಾಸು ಕರೆಂಟ್:
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಜಮೀನುಗಳಿಗೆ 24 ಗಂಟೆ ವಿದ್ಯುತ್ ಒದಗಿಸಿಕೊಡುವ ಕೆಲಸ ಮಾಡುತ್ತೇವೆ. ಪಕ್ಕದ ರಾಜ್ಯದಲ್ಲಿ ದಿನಪೂರ್ತಿ ರೈತರ ಜಮೀನುಗಳಿಗೆ ವಿದ್ಯುತ್ ನೀಡ್ತಿದ್ದಾರೆ. ನಾವು ಯಾಕ್ ನೀಡಬಾರದು ಎಂಬುದು ನನ್ನ ಯೋಚನೆಯಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದರು.

ಮೃತರ ಮನೆಗಳಿಗೆ ಭೇಟಿ ವೈಯಕ್ತಿಕ ಧನಸಹಾಯ, ಸಾಂತ್ವನ:
ಬೇಮಳಖೇಡದ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಉಡಮನಳ್ಳಿ ಗ್ರಾಮದ ಮಹಿಳಾ ಕಾರ್ಮಿಕರಾದ ಗುಂಡಮ್ಮಾ, ರುಕ್ಕಮ್ಮಾ, ಮಂಜುಳಾ, ಜಗದೇವಿ, ಈಶ್ವರಮ್ಮಾ, ಪಾರ್ವತಿ, ಪ್ರಭಾವತಿರವರ ಮನೆಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿ, ವೈಯಕ್ತಿಕ ಧನಸಹಾಯ ಮಾಡಿದರು. ಅಲ್ಲಿಯೇ ಇದ್ದ ಇತ್ತೀಚೆಗೆ ಅಪಘಾತದಲ್ಲಿ ಗಾಯಗೊಂಡು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದ ಸುನೀಲ್ ಎಂಬ ಯುವಕನ ಮನೆಗೆ ಕೂಡ ಭೇಟಿ ನೀಡಿ, ಯುವಕನಿಗೆ ಬ್ರಿಮ್ಸ್ ನಲ್ಲಿಯೇ ಚಿಕಿತ್ಸೆ ವ್ಯವಸ್ಥೆ ಮಾಡಿಸಿಕೊಡುವ ಭರವಸೆಯನ್ನು ಶಾಸಕರು ನೀಡಿದರು. ಬಳಿಕ ಕಾಡವಾದಕ್ಕೆ ಭೇಟಿ ನೀಡಿ, ಬೇಮಳಖೇಡದ ಅಪಘಾತದಲ್ಲಿ ಮೃತಪಟ್ಟಿದ್ದ ಮಹಿಳೆಯ ಗಂಡನ ಮನೆಯವರನ್ನು ಭೇಟಿಯಾಗಿ ಸಾಂತ್ವನ ಹೇಳಿ ವೈಯಕ್ತಿಕ ಧನಸಹಾಯ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಂತೋಷ ಎನ್ ಚೌಕಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ್ ಚಾಂಗಲೇರಾ, ಮುಖಂಡರಾದ ಸಂತೋಷ ರಾಸೂರ, ಮಲ್ಲಪ್ಪಾ ಮನ್ನಾಎಖೇಳ್ಳಿ, ಬಾಬುರಾವ್ ಬೈರೆ, ಗುಂಡಪ್ಪ ಬಂಡಿಕಾರ್, ಸುಧಾಕರ್ ನಿಂಗ್ ನಾಯಕ, ರವಿ, ಶ್ರೀಮಂತ, ರಿಯಾಜ್, ವಿನೋದ್, ಅಶೋಕರೆಡ್ಡಿ ಗಾಳಿ, ಶಿವಕುಮಾರ್, ಅಶೋಕ್ ವಡ್ಡರ್, ಮಾರುತಿ ನಾಟೀಕರ್, ಗುಂಡಪ್ಪ ಕುರುಮಣ್ಣನವರ್, ಅಮೃತ್ ಕುರಕೋಟಿ, ನರಸಿಂಗ್ ಬಂಟ್, ಬೀಮ್ಶಾ ಐನಳ್ಳಿ, ಅನಿಲ್, ಸಂತೋಷ, ಸೂರ್ಯಕಾಂತ್ ದಂಡಿ ಸೇರಿದಂತೆ ಅನೇಕರಿದ್ದರು.

+++++++++++++++++++

ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಮಹಿಳೆಯರ ಆರೋಗ್ಯ ವಿಚಾರಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ (ನ.06): ಬೇಮಳಖೇಡದ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಉಡಮನಳ್ಳಿಯ ಮಹಿಳಾ ಕೂಲಿ ಕಾರ್ಮಿಕರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ ವೈಯಕ್ತಿಕ ಧನಸಹಾಯ ಮಾಡಿದ ಬಳಿಕ, ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಬೀದರ್ ನಗರದ ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಅಪಘಾತದಲ್ಲಿ ಗಾಯಗೊಂಡು ಬ್ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಕೂಲಿ ಕಾರ್ಮಿಕರಾದ ಮೀನಾಕ್ಷಿ, ಜಯಶೀಲಾ, ಗೋದಾವರಿ, ಶಕುಂತಲಾ, ಶುಬ್ಬಮ್ಮ, ಪಾರ್ವತಿ, ಸರಸ್ವತಿ, ಮಾರತಮ್ಮ, ಬೆಬಿ ಎಂಬುವವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ಧೈರ್ಯದಿಂದ ಇರುವಂತೆ ತಿಳಿಸಿದರು.
ಇದೇ ವೇಳೆ ಗಾಯಾಳುಗಳ ಕುಟುಂಬದವರಿಗೆ ವೈಯಕ್ತಿಕ ಧನಸಹಾಯ ಮಾಡಿ, ಸರ್ಕಾರದಿಂದ ಉಚಿತ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕಾಗಿದೆ. ಗಾಯಾಳುಗಳು ಕನಿಷ್ಠ ಮೂರು ನಾಲ್ಕು ತಿಂಗಳ ಕಾಲ ವಿಶ್ರಾಂತಿ ಪಡೆಯಬೇಕಾಗಿರುವುದರಿಂದ ಸರ್ಕಾರ ಗಾಯಾಳುಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಬೇಮಳಖೇಡದ ಅಪಘಾತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆಯ ಜೊತೆಗೆ ಸರ್ಕಾರದಿಂದ ಆರ್ಥಿಕ ನೆರವು ನೀಡುವಂತೆ ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ನಂತರ ಬ್ರಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ವತಿಯಿಂದ ನಡೆಯುತ್ತಿರುವ ಬ್ರಿಮ್ಸ್ ಸ್ವಚ್ಚತಾ ಕರ್ಮಿಗಳ ಅಹೋರಾತ್ರಿ ನಿರಂತರ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಡಿಹೆಚ್ಒ ರತೀಕಾಂತ್ ಸ್ವಾಮಿ, ಶಿವಕುಮಾರ್ ಶೆಟ್ಕರ್, ಡಾ. ಅಂತಪ್ಪ, ಸುರೇಶ ಹಿಪ್ಪಳಗಾವ್, ಡಾ. ಮೇಟಾರೆ, ಸಂತೋಷ ರಾಸೂರ, ಸಂತೋಷ ಎನ್ ಚೌಕಿ, ಮಲ್ಲಪ್ಪ ಮನ್ನಾಎಖೇಳ್ಳಿ, ಅಭಿ ಕಾಳೆ, ಅನಿಲ್ ಬೇಮಳಖೇಡ ಸೇರಿದಂತೆ ಅನೇಕರಿದ್ದರು. ಬಳಿಕ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ನಗರದ ವಾಲಿಶ್ರೀ ಆಸ್ಪತ್ರೆಗೆ ಭೇಟಿ ನೀಡಿ, ಬೇಮಳಖೇಡ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕನ ಆರೋಗ್ಯ ವಿಚಾರಿಸಿ, ವೈಯಕ್ತಿಕ ಧನಸಹಾಯ ಮಾಡಿದರು.
Bandeppa Khashempur/ಬಂಡೆಪ್ಪ ಖಾಶೆಂಪುರ್ Bandeppa Khashempur Youth Brigade -R Bandeppa Kashempur #bandeppa #khashempur #bidar #south #MLA #ಬಂಡೆಪ್ಪ #ಖಾಶೆಂಪುರ್ #ಬೀದರ್ #ದಕ್ಷಿಣ #ಕ್ಷೇತ್ರ #ಶಾಸಕ 

Saturday, November 5, 2022

ಬೇಮಳಖೇಡ ಅಪಘಾತ ಪ್ರಕರಣ: ಪರಿಹಾರಕ್ಕಾಗಿ ಸಿಎಂಗೆ ಪತ್ರ ಬರೆದ ಶಾಸಕ ಬಂಡೆಪ್ಪ ಖಾಶೆಂಪುರ್

ಸಿಎಂ ಬೊಮ್ಮಾಯಿಗೆ ಶಾಸಕ ಖಾಶೆಂಪುರ್ ಪತ್ರ

ಬೀದರ್ (ನ.05): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಮಳಖೇಡದ ಸರ್ಕಾರಿ ಪ್ರೌಢ ಶಾಲೆ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಆಟೋ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಮೃತಪಟ್ಟ ಮಹಿಳೆಯರ ಕುಟುಂಬಗಳಿಗೆ ತಲಾ 10 ಲಕ್ಷ ರೂ., ಗಾಯಗೊಂಡ ಮಹಿಳೆಯರ ಕುಟುಂಬಗಳಿಗೆ ತಲಾ 05 ಲಕ್ಷ ರೂ. ಪರಿಹಾರ ಒದಗಿಸಿಕೊಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರನ್ನು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದ್ದಾರೆ.
ಶಾಸಕ ಬಂಡೆಪ್ಪ ಖಾಶೆಂಪುರ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಶನಿವಾರ ಪತ್ರ ಬರೆದಿರುವ ಅವರು, 'ನ. 04ರ ಸಂಜೆ ನನ್ನ ಮತಕ್ಷೇತ್ರದ ಬೇಮಳಖೇಡದ ಸರ್ಕಾರಿ ಪ್ರೌಢ ಶಾಲೆಯ ಬಳಿ ಆಟೋ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಉಡಮನಳ್ಳಿಯ ಹದಿನೇಳು ಜನ ಕೂಲಿ ಕಾರ್ಮಿಕರ ಪೈಕಿ ಏಳು ಜನರು ಮೃತಪಟ್ಟಿರುತ್ತಾರೆ. ಹಾಗೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಮತ್ತು ಇನ್ನುಳಿದ ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸದರಿ ಅಪಘಾತಕ್ಕೆ ಒಳಗಾದ ನನ್ನ ಮತಕ್ಷೇತ್ರದ ಉಡಮನಳ್ಳಿಯ ಬಡ ಕುಟುಂಬದ ಕೂಲಿ ಕಾರ್ಮಿಕರು, ಕೂಲಿ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದ ಇವರುಗಳು ಕುಟುಂಬ ಆದಾರ ಸ್ಥಂಭವಾಗಿದ್ದರು. ಅಪಘಾತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡ ಕುಟುಂಬದ ನಿರ್ವಹಣೆ ತುಂಬಾ ತೊಂದರಿಯಾಗಿರುತ್ತದೆ.
ಆದುದರಿಂದ, ನ. 04ರ ಸಂಜೆ ಬೇಮಳಖೇಡದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ಏಳು ಜನರಿಗೆ ತಲಾ 10 ಲಕ್ಷ ರೂ. ಪರಿಹಾರವನ್ನು ಹಾಗೂ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿರುವ ಇಬ್ಬರು ಹಾಗೂ ಗಂಭೀರವಾಗಿ ಗಾಯಗೊಂಡ ಎಂಟು ಜನರಿಗೆ ಉತ್ತಮವಾದ ಉಚಿತ ಚಿಕಿತ್ಸೆ ನೀಡಿ ಅವರಿಗೆ ತಲಾ 05 ಲಕ್ಷ ರೂ. ಪರಿಹಾರವನ್ನು ನೀಡುವಂತೆ ತಮ್ಮಲ್ಲಿ ಕೋರುತ್ತೇನೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಬರೆದಿರುವ ಪತ್ರದಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದ್ದಾರೆ.

ಬೇಮಳಖೇಡದ ಬಳಿ ನಡೆದ ಘಟನೆ ದುಃಖ ತರಿಸಿದೆ: ಶಾಸಕ ಬಂಡೆಪ್ಪ ಖಾಶೆಂಪುರ್
ನನ್ನ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಮಳಖೇಡದ ಸರ್ಕಾರಿ ಪ್ರೌಢ ಶಾಲೆಯ ಬಳಿ ನಡೆದಿರುವ ಅಪಘಾತದಿಂದ ನನಗೆ ನೋವಾಗಿದೆ. ಘಟನೆಯಲ್ಲಿ ಉಡಮನಳ್ಳಿಯ ಏಳು ಜನ ಬಡ ಮಹಿಳಾ ಕಾರ್ಮಿಕರು ಮೃತಪಟ್ಟಿರುವ ಸುದ್ದಿ ಕೇಳಿ ನನಗೆ ದುಃಖವಾಗಿದೆ. ಘಟನೆ ಸಂಬಂಧ ನಾನು ಈಗಾಗಲೇ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಕಛೇರಿಯೊಂದಿಗೆ ನಾನು ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಘಟನೆ ಸಂಬಂಧ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿರುವುದಾಗಿ ಮುಖ್ಯಮಂತ್ರಿ ಕಛೇರಿಯವರು ಮಾಹಿತಿ ನೀಡಿದ್ದಾರೆ. ಅಲ್ಲದೇ ಸಚಿವರ ನೇತೃತ್ವದಲ್ಲಿ ಮೃತರ ಕುಟುಂಬಗಳನ್ನು  ಭೇಟಿಯಾಗಿ ಪರಿಹಾರ ಒದಗಿಸಿಕೊಡುವ ಭರವಸೆಯನ್ನು ಸಹ ನೀಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಮಹಿಳೆಯರ ಮನೆಗಳಿಗೆ ನಾನು ನ.06ರಂದು ಭಾನುವಾರ ಬೆಳ್ಳಗೆ ಭೇಟಿ ನೀಡಿ ಸಾಂತ್ವಾನ ಹೇಳುತ್ತೇನೆ. ಬಳಿಕ ಬೀದರ್ ನಗರದ ಬ್ರಿಮ್ಸ್ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಾಳುಗಳಿಗೆ ದೈರ್ಯ ಹೇಳುತ್ತೇನೆ. ನನ್ನ ಕ್ಷೇತ್ರದಲ್ಲಿ ನಡೆದಿರುವ ಕಹಿ ಘಟನೆಯಿಂದ ನನಗೆ ನೋವಾಗಿದೆ. ಕ್ಷೇತ್ರದ ಜನತೆಯೊಂದಿಗೆ ನಾನಿದ್ದೇನೆ ದುರಂತದಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಸಾಧ್ಯವಾದಷ್ಟು ಸಹಾಯ ಮಾಡುತ್ತೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದ್ದಾರೆ.
Bandeppa Khashempur/ಬಂಡೆಪ್ಪ ಖಾಶೆಂಪುರ್ Bandeppa Kashempur #bandeppa #khashemur #ಬಂಡೆಪ್ಪ #ಖಾಶೆಂಪುರ್ Bandeppa Khashempur/ಬಂಡೆಪ್ಪ ಖಾಶೆಂಪುರ್ Bandeppa Khashempur Public Leader Bandeppa Kashempur

ಅಪಘಾತದ ಸುದ್ದಿ ಕೇಳಿ ದುಃಖವಾಗುತ್ತಿದೆ: ಶಾಸಕ ಬಂಡೆಪ್ಪ ಖಾಶೆಂಪುರ್

 

ಬೀದರ್ (ನ.04): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಮಳಖೇಡದ ಬಳಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಉಡಮನಳ್ಳಿಗೆ ಹೋಗುತ್ತಿದ್ದ ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ ಏಳು ಜನ ಕೂಲಿ ಕಾರ್ಮಿಕರು ಮೃತಪಟ್ಟಿದ್ದು, 08 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೇಳಿ ದುಃಖವಾಗುತ್ತಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ದುಃಖ ವ್ಯಕ್ತಪಡಿಸಿದ್ದಾರೆ.
ಬೇಮಳಖೇಡದ ಬಳಿ ಲಾರಿ ಮತ್ತು ಆಟೋ ನಡುವೆ ಶುಕ್ರವಾರ ಸಂಭವಿಸಿದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್ ಗಳಲ್ಲಿ ಪೋಸ್ಟ್ ಮಾಡಿರುವ ಅವರು, 'ನನ್ನ ವಿಧಾನಸಭಾ ಕ್ಷೇತ್ರವಾದ ಬೀದರ್ ದಕ್ಷಿಣ ಕ್ಷೇತ್ರದ ಬೇಮಳಖೇಡದ ಬಳಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಉಡಮನಳ್ಳಿಗೆ ಹೋಗುತ್ತಿದ್ದ ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ ಏಳು ಜನ ಕೂಲಿ ಕಾರ್ಮಿಕರು ಮೃತಪಟ್ಟಿದ್ದು, 08 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೇಳಿ ದುಃಖವಾಗುತ್ತಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಈ ಘಟನೆ ಕುರಿತು ನಾನು ಈಗಾಗಲೇ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದೇನೆ. ಆದಷ್ಟು ಬೇಗ ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಮತ್ತು ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ಒದಗಿಸಿ ಕೊಡಬೇಕು ಎಂದು ಒತ್ತಾಯಿಸಿದ್ದೇನೆ' ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Bandeppa Khashempur/ಬಂಡೆಪ್ಪ ಖಾಶೆಂಪುರ್ Bandeppa Khashempur Youth Brigade -R Bandeppa Kashempur Basavaraj Bommai Fans Club Basavaraj Bommai