Friday, December 30, 2022

ಕಪಲಾಪೂರ (ಎ): ವಿಶ್ವಗುರು ಬಸವಣ್ಣ, ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೆವರ ಮೂರ್ತಿ ಅನಾವರಣಗೊಳಿಸಿದ ಗಣ್ಯರು

 


ಕಪಲಾಪೂರ (ಎ): ವಿಶ್ವಗುರು ಬಸವಣ್ಣ, ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೆವರ ಮೂರ್ತಿ ಅನಾವರಣಗೊಳಿಸಿದ ಗಣ್ಯರು

ಬೀದರ್ (ಡಿ.30): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಪಲಾಪೂರ (ಎ) ಗ್ರಾಮದಲ್ಲಿ ನಿರ್ಮಿಸಲಾದ ವಿಶ್ವಗುರು ಬಸವಣ್ಣನವರ ಮತ್ತು ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೆವರುರವರ ಮೂರ್ತಿಗಳನ್ನು ಕೇಂದ್ರ ರಾಜ್ಯ ರಸಗೊಬ್ಬರ ಸಚಿವರಾದ ಭಗವಂತ ಖೂಬಾ, ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಸೇರಿದಂತೆ ಅನೇಕ ಗಣ್ಯರ ಮತ್ತು ಪರಮಪೂಜ್ಯರ ನೇತೃತ್ವದಲ್ಲಿ ಶುಕ್ರವಾರ ಅನಾವರಣ ಮಾಡಲಾಯಿತು.


ಮೂರ್ತಿ ಅನಾವರಣದ ಬಳಿಕ ಮಾತನಾಡಿದ ಕೇಂದ್ರ ಸಚಿವ ಭಗವಂತ ಖೂಬಾರವರು, 12ನೇ ಶತಮಾನದಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಕ್ರಾಂತಿ ಮಾಡಿದ ವಿಶ್ವಗುರು ಬಸವಣ್ಣನವರ ಮೂರ್ತಿ ಮತ್ತು 21ನೇ ಶತಮಾನದ ಪಕ್ಕ ಬಸವಣ್ಣನವರ ಅನುಯಾಯಿಯಾಗಿ ಈ ಭಾಗದಲ್ಲಿ ನಿಜಾಮರ ಕಾಲದಲ್ಲಿ ಕನ್ನಡವನ್ನು ಉಳಿಸಿ, ಬೆಳೆಸಿ ನಡೆದಾಡುವ ದೇವರು ಎಂಬ ಪ್ರಖ್ಯಾತಿ ಪಡೆದ ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೆವರುರವರ ಮೂರ್ತಿಗಳನ್ನು ಅನಾವರಣ ಮಾಡಿರುವುದು ನಮ್ಮ ಪೂರ್ವ ಜನ್ಮದ ಪೂಣ್ಯವಾಗಿದೆ ಎಂದರು.

ಮನುಷ್ಯ ಸುಖ, ಶಾಂತಿಯಿಂದ ಜೀವನ ಸಾಗಿಸಲು ಮಹಾಪುರುಷರ ಆಶೀರ್ವಾದ ಸದಾ ನಮ್ಮ ಮೇಲೆ ಇದ್ದಾಗ ಮಾತ್ರ ಸಾಧ್ಯವಾಗುತ್ತದೆ. ಇಬ್ಬರು ಮಹಾಪುರುಷರು ತಮ್ಮ ತಮ್ಮ ಕಾಲದಲ್ಲಿ ಕ್ರಾಂತಿ ಮಾಡಿದ್ದಾರೆ. ಅವರ ನಡೆ, ನುಡಿ ಸಮಾಜಕ್ಕೆ ಮಾದರಿಯಾಗಿದೆ. ಅದೇ ಕಾರಣಕ್ಕಾಗಿ ಮಹಾತ್ಮರು ನಮ್ಮ ಮಧ್ಯದಲ್ಲಿ ಇನ್ನೂ ಇದ್ದಾರೆ ಎಂದು ಕೇಂದ್ರ ಸಚಿವರಾದ ಭಗವಂತ ಖೂಬಾರವರು ಹೇಳಿದರು.


ಬಳಿಕ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, 12ನೇ ಶತಮಾನದಲ್ಲಿ ಬಸವಣ್ಣನವರು ವಿಶ್ವಕ್ಕೆ ಮಾದರಿಯಾಗುವಂತ ಸಾಮಾಜಿಕ ಕ್ರಾಂತಿ ಮಾಡಿದ್ದರು. ನಿಜಾಮರ ಕಾಲದಲ್ಲಿ ಹೊರಗಡೆ ಉರ್ದು ಬೋರ್ಡ್ ಹಾಕಿ ಒಳಗಡೆ ಕನ್ನಡ ಕಲಿಸುವ ಕೆಲಸವನ್ನು ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೆವರು ಮಾಡಿದ್ದಾರೆ. ಅಂತ ಇಬ್ಬರು ಮಹಾತ್ಮರ ಮೂರ್ತಿಗಳನ್ನು ಅನಾವರಣ ಮಾಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು‌.


ನಾವು ಮಹಾತ್ಮರ ಮೂರ್ತಿಗಳನ್ನು ನಿರ್ಮಿಸುವುದಷ್ಟೇ ಅಲ್ಲ ಅವರ ತತ್ವಾದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಸಾಗಬೇಕಾಗಿದೆ. ಬಸವಣ್ಣನವರು ಆಗಿನ ಕಾಲದಲ್ಲೇ ಇತಿಹಾಸ ನಿರ್ಮಿಸಿದ್ದಾರೆ. ಅಂದಿನ ಕಾಲದಲ್ಲಿ ಅವರು ಅನುಭವ ಮಂಟಪದಲ್ಲಿ ಮೀಸಲಾತಿ ಕಲ್ಪಿಸಿ, 12ನೇ ಶತಮಾನದಲ್ಲಿಯೇ ಸಾಮಾಜಿಕ ಕ್ರಾಂತಿ ಮಾಡಿದ್ದರು.

21ನೇ ಶತಮಾನದಲ್ಲಿ ಚನ್ನಬಸವ ಪಟ್ಟದ್ದೆವರು ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ. ಅದರಂತೆಯೇ ಬಾಬಾ ಸಾಹೇಬ್ ಡಾ. ಬಿ..ಆರ್ ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಮೀಸಲಾತಿ ಕಲ್ಪಿಸಿಕೊಟ್ಟಿದ್ದಾರೆ. ಸಮಾನತೆಗಾಗಿ ಹೋರಾಡಿದ್ದಾರೆ. ಇವತ್ತಿನ ಪರಿಸ್ಥಿತಿಯಲ್ಲಿ ಶಿಕ್ಷಣದಲ್ಲಿ ಕ್ರಾಂತಿಯಾಗುವುದು ಅವಶ್ಯಕವಾಗಿದೆ. ಶಿಕ್ಷಣದಲ್ಲಿ ಕ್ರಾಂತಿ ಆಗಬೇಕೆಂದರೆ, ಪ್ರತಿ ಹಳ್ಳಿಯಲ್ಲಿನ ಮಕ್ಕಳು ಶಿಕ್ಷಣವಂತರಾಗಬೇಕು. ಪ್ರತಿಯೊಬ್ಬರಿಗೂ ಶಿಕ್ಷಣ ಒದಗಿಸಿಕೊಡಬೇಕು ಎಂಬ ಗುರಿಯೊಂದಿಗೆ ಚನ್ನಬಸವ ಪಟ್ಟದ್ದೆವರು ಕೆಲಸ ಮಾಡಿದ್ದಾರೆ.

ಸಿದ್ದರಾಮಪ್ಪ ಕಪಲಾಪೂರೆರವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸವನ್ನು ಪ್ರೋತ್ಸಾಹಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಕಪಲಾಪೂರದ ಈ ಆಶ್ರಮಕ್ಕೆ ಅನುದಾನ ಒದಗಿಸಿಕೊಡುವ ಕೆಲಸ ಮಾಡುತ್ತೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಈ ಸಂದರ್ಭದಲ್ಲಿ ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷರಾದ ಪೂಜ್ಯ ಡಾ. ಬಸವಲಿಂಗ ಪಟ್ಟದ್ದೆವರು, ಹುಲಸೂರು ಶ್ರೀ ಗುರು ಬಸವೇಶ್ವರ ಸಂಸ್ಥಾನ ಮಠದ ಪೂಜ್ಯ ಡಾ. ಶಿವಾನಂದ ಮಹಾಸ್ವಾಮಿಗಳು, ಭಾಲ್ಕಿ ಹಿರೇಮಠ ಸಂಸ್ಥಾನದ ಪೂಜ್ಯ ಶ್ರೀ ಗುರುಬಸವ ಪಟ್ಟದ್ದೆವರು, ಹಿರೇಮಠ ಸಂಸ್ಥಾನ ಭಾಲ್ಕಿಯ ಪೂಜ್ಯ ಶ್ರೀ ಮಹಾಲಿಂಗ ಮಹಾಸ್ವಾಮಿಗಳು, ಕಪಲಾಪೂರದ ಪೂರ್ಣಾನಂದ ಮಹಾಸ್ವಾಮಿಗಳು, ಕೆಎಸ್ಐಐಡಿಸಿ ಅಧ್ಯಕ್ಷರಾದ ಡಾ. ಶೈಲೇಂದ್ರ ಬೆಳ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ, ಪ್ರಮುಖರಾದ ಸೂರ್ಯಕಾಂತ್ ನಾಗಮರಪಳ್ಳಿ, ಶಂಕರ್ ಪಾಟೀಲ್, ಈಶ್ವರಿ, ಹಣುಮಂತರಾವ್ ಮೈಲಾರಿ, ಸಿದ್ದರಾಮಪ್ಪ ಕಪಲಾಪೂರೆ, ಶಕುಂತಲಾ ಬೆಲ್ದಾಳೆ, ಶಂಕರಪ್ಪ ಪಾಟೀಲ್, ನವಲಿಂಗ ಪಾಟೀಲ್ ರವರು ಸೇರಿದಂತೆ ಅನೇಕರಿದ್ದರು.

Tuesday, December 27, 2022

‘ರೈತರಿಗೆ ಜಮೀನು ವಾಪಸ್ ಕೊಟ್ಬಿಡಿ’ ಬಿಲ್ ಮೇಲಿನ ಚರ್ಚೆಯ ವೇಳೆ ಶಾಸಕ ಬಂಡೆಪ್ಪ ಖಾಶೆಂಪುರ್ ಒತ್ತಾಯ

 


‘ರೈತರಿಗೆ ಜಮೀನು ವಾಪಸ್ ಕೊಟ್ಬಿಡಿ’ ಬಿಲ್ ಮೇಲಿನ ಚರ್ಚೆಯ ವೇಳೆ ಶಾಸಕ ಬಂಡೆಪ್ಪ ಖಾಶೆಂಪುರ್ ಒತ್ತಾಯ

ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು, ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಮಂಗಳವಾರ ನಡೆದ 15ನೇ ವಿಧಾನ ಸಭೆಯ 14ನೇ ಅಧಿವೇಶನ (ಚಳಿಗಾಲದ ಅಧಿವೇಶನ)ದ ಏಳನೇ ದಿನದ ಕಲಾಪದಲ್ಲಿ ಪಾಲ್ಗೊಂಡು, ಬಿಲ್ ಮೇಲಿನ ಚರ್ಚೆಯ ವೇಳೆ ಮಾತನಾಡಿ, ಬೀದರ್ ಜಿಲ್ಲೆಯಲ್ಲಿ 1982ರಲ್ಲಿ ರೈತರಿಂದ ಕೇವಲ 08 ಸಾ. ರೂ.ಗೆ ಎಕರೆಯಂತೆ ಜಮೀನನ್ನು ವಶಪಡಿಸಿಕೊಂಡಿದ್ದರು. ಆದರೇ ಇದುವರೆಗೂ ಪೂರ್ಣ ಪ್ರಮಾಣದ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ಹಾಗಾಗಿ ರೈತರ ಜಮೀನನ್ನು ವಾಪಸ್ಸು ನೀಡಬೇಕೆಂದು ಒತ್ತಾಯಿಸಿದರು.

‘ರೈತರಿಗೆ ಜಮೀನು ವಾಪಸ್ ಕೊಟ್ಬಿಡಿ’ ಬಿಲ್ ಮೇಲಿನ ಚರ್ಚೆಯ ವೇಳೆ ಶಾಸಕ ಬಂಡೆಪ್ಪ ಖಾಶೆಂಪುರ್ ಒತ್ತಾಯ

ಕೂಡಲೇ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್

 


ಕೂಡಲೇ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ (ಡಿ.27): ನಮ್ಮ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಗತ್ಯವಾಗಿದ್ದು,  ಕೂಡಲೇ ಕ್ಷೇತ್ರದೆಲ್ಲಡೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಿ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಸರ್ಕಾರವನ್ನು ಒತ್ತಾಯಿಸಿದರು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಮಂಗಳವಾರ ನಡೆದ 15ನೇ ವಿಧಾನ ಸಭೆಯ 14ನೇ ಅಧಿವೇಶನ (ಚಳಿಗಾಲದ ಅಧಿವೇಶನ)ದ ಏಳನೇ ದಿನದ ಕಲಾಪದಲ್ಲಿ ಪಾಲ್ಗೊಂಡು, ಪ್ರಶ್ನೋತ್ತರದ ವೇಳೆ ಜಲಜೀವನ್ ಮಿಷನ್‌ ಯೋಜನೆಗೆ ಸಂಬಂಧಿಸಿದ ಪ್ರಶ್ನೆ ಕೇಳಿ ಅವರು ಮಾತನಾಡಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಮಠಾಣಾ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ ಮಾತ್ರ ಮಲ್ಟಿ ವಿಲೇಜ್ ಸ್ಕೀಮ್ ಜಾರಿಯಿದೆ. ಮನ್ನಾಎಖ್ಖೇಳ್ಳಿ ಭಾಗದ 31 ಹಳ್ಳಿಗಳು, ಬಗದಲ್ ಭಾಗದ 38 ಹಳ್ಳಿಗಳು ಸೇರಿದಂತೆ ಎಲ್ಲಾ ಹಳ್ಳಿಗಳಿಗೂ ಮಲ್ಟಿ ವಿಲೇಜ್ ಸ್ಕೀಮ್ ನಲ್ಲಿ ನೀರಿನ ಸೌಲಭ್ಯ ಒದಗಿಸಿಕೊಡಬೇಕು. ಶೀಘ್ರದಲ್ಲೇ ಕ್ಯಾಬಿನೆಟ್ ನಲ್ಲಿ ಪಾಸ್ ಮಾಡಿ ಯೋಜನೆ ಜಾರಿಗೊಳಿಸಬೇಕು.

ನಮ್ಮ ಭಾಗದಲ್ಲಿ ಬೋರ್ವೆಲ್ ಆಧಾರಿತವಾಗಿ ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಬೋರ್ವೆಲ್ ಗಳಲ್ಲಿ ಇವತ್ತು ಇರುವ ನೀರು ನಾಳೆ ಇರುವುದಿಲ್ಲ. ಹಾಗಾಗಿ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೆ ತರಬೇಕಾಗಿದೆ. ಮನ್ನಾಎಖ್ಖೇಳ್ಳಿ, ಬಗದಲ್ ಭಾಗಗಳ ಸುಮಾರು 69 ಹಳ್ಳಿಗಳು ಸೇರಿದಂತೆ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೂ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ಜಾರಿಗೊಳಿಸಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.

 ಕೂಡಲೇ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್

ಇದು ಕೇವಲ ನನ್ನ ಕ್ಷೇತ್ರದ ಸಮಸ್ಯೆಯಲ್ಲ, ರಾಜ್ಯದ ಸಮಸ್ಯೆ:

ಜಲಜೀವನ್ ಮಿಷನ್ ಯೋಜನೆ ಕೇವಲ ನನ್ನ ಕ್ಷೇತ್ರದಲ್ಲಿ ಮಾತ್ರವಲ್ಲ ರಾಜ್ಯಾದ್ಯಂತ ಸಮಸ್ಯೆಯಾಗಿದೆ. ನಾವು ಈ ಯೋಜನೆಯನ್ನು ಮೊದಲು ಸ್ವಾಗತಿಸಿದ್ದೇವು. ಕೇಂದ್ರ ಸರ್ಕಾರ ದುಡ್ಡು ಕೊಡ್ತಿದೆ. ಮನೆಮನೆಗೆ ನೀರು ಹೋಗ್ತಿವೆ ಎಂದು ಅಭಿಪ್ರಾಯ ಪಟ್ಟಿದ್ದೇವು. ಆದರೆ ಪ್ರಾಯೋಗಿಕವಾಗಿ ನೋಡಿದಾಗ ಸಮಸ್ಯೆಯಿದೆ. ನೀರು ನೀಡುವ ಸಲುವಾಗಿ ನಡುರಸ್ತೆಯನ್ನು  ಅಗೆಯುತ್ತಿದ್ದಾರೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಬೇಸರ ವ್ಯಕ್ತಪಡಿಸಿದರು.

 

ನಾವು ಕಷ್ಟಪಟ್ಟು ರಸ್ತೆ ಮಾಡಿಸಿರುತ್ತೇವೆ:

ನಾವು ಕಷ್ಟಪಟ್ಟು ಯಾವ್ಯಾವೋದೋ ಯೋಜನೆಗಳಲ್ಲಿ ರಸ್ತೆಗಳನ್ನು ಮಾಡಿಸಿದ್ದೇವೆ. ಹಿಂದೆ ಕುಮಾರಸ್ವಾಮಿರವರು ಮುಖ್ಯಮಂತ್ರಿಯಾಗಿದ್ದಾಗ ಸುವರ್ಣ ಗ್ರಾಮಗಳಲ್ಲಿ ಸಿಸಿ ರಸ್ತೆ ಮಾಡಿಸಿದ್ದೇವೆ. ಜೆಜೆಎಮ್ ನವರು ನಡುರಸ್ತೆಯಲ್ಲಿ 1.50 ಅಡಿ ರಸ್ತೆ ಕಟ್ ಮಾಡಿ, ಎಸ್ಡಿಪಿ ಪೈಪ್ ಹಾಕುತ್ತಿದ್ದಾರೆ. ಯಾವುದಾದರು ಒಂದು ದೊಡ್ಡ ಲಾರಿ ಬಂದರೆ ಪೈಪ್ ಗಳು ಕಂಪ್ಲಿಟ್ ಡ್ಯಾಮೇಜ್ ಹಾಗುತ್ತವೆ. ಅದರಿಂದ ಇದನ್ನು ಮರುಪರಿಶೀಲನೆ ಮಾಡಬೇಕಾಗಿದೆ. ಎಸ್ಡಿಪಿ ಬದಲಿಗೆ ಎಮ್ಎಸ್ ಪೈಪ್ ಹಾಕಿದರೆ ಶಾಶ್ವತ ಪರಿಹಾರ ಸಿಗುತ್ತದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸಲಹೆ ನೀಡಿದರು.

ಉತ್ತರ ನೀಡಿ ಮಾತನಾಡಿದ ಸಚಿವ ಸಿ.ಸಿ ಪಾಟೀಲ್ ರವರು, ಬಂಡೆಪ್ಪ ಖಾಶೆಂಪುರ್ ರವರು ಒಳ್ಳೆಯ ಪ್ರಶ್ನೆ ಕೇಳಿದ್ದಾರೆ. ಇದು ಅವರ ಕ್ಷೇತ್ರಕ್ಕೆ ಮಾತ್ರ ಸಿಮಿತವಾದದ್ದಲ್ಲ. ರಾಜ್ಯಾದ್ಯಂತ  ಇರುವ ಪ್ರಶ್ನೆಯಾಗಿದೆ. ಜೆಜೆಎಮ್ ನವರು ಕಟ್ ಮಾಡಿದ ರಸ್ತೆ ಸರಿಪಡಿಸುತ್ತಾರೆ. ಒಂದು ವೇಳೆ ರಸ್ತೆ ಸರಿ ಪಡಿಸದಿದ್ದಲ್ಲಿ ಅಂತವರ ಬಿಲ್ ನೀಡಬಾರದು ಎಂದು ಜಿಲ್ಲಾ ಪಂಚಾಯತಿ ಸಿಇಒರವರಿಗೆ ಸೂಚನೆ ನೀಡಲಾಗಿದೆ. ಸಾಧ್ಯವಾದಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಲು ಮತ್ತೇ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದರು.

ಮರುಪ್ರಶ್ನೆ ಕೇಳಿ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಕಮಠಾಣಾ ವ್ಯಾಪ್ತಿಯ 18 ಹಳ್ಳಿಗಳಿಗೆ ಮಾತ್ರ ಬಹುಗ್ರಾಮ ಕುಡಿಯುವ ನೀರು ಸಿಗುತ್ತಿವೆ. ಇನ್ನುಳಿದಂತೆ ಮನ್ನಾಎಖ್ಖೇಳ್ಳಿಯ 31 ಹಳ್ಳಿಗಳು, ಬಗದಲ್ 38 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಇನ್ನು ತಾಂತ್ರಿಕ ಹಂತದಲ್ಲಿವೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ. ಸರ್ಕಾರದಲ್ಲಿ ದುಡ್ಡು ಕೊಳೆಯುತ್ತಿದೆ. ಇಲಾಖೆಯ ಎಮ್.ಡಿ ಸೇರಿದಂತೆ ಅನೇಕ ಅಧಿಕಾರಿಗಳಿಗೆ ನಾನು ಸುಮಾರು ಸಲ ಮಾತನಾಡಿದ್ದೇನೆ. ಡಿಪಿಆರ್ ತರೆಸಿಕೊಂಡು 08-10 ದಿನಗಳಲ್ಲಿ ಕ್ಯಾಬಿನೆಟ್ ಗೆ ತಂದು ಕ್ಲಿಯರ್ ಮಾಡಿ ಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ಯಾವುದೇ ರೀತಿಯಲ್ಲಿ ವಿಳಂಭವಾಗದಂತೆ ಆದಷ್ಟು ಬೇಗ ಈ ಯೋಜನೆ ಜಾರಿಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಸಚಿವರು ತಿಳಿಸಿದರು. ಶಾಸಕರಾದ ರಮೇಶ್ ಕುಮಾರ್, ಹೆಚ್.ಕೆ ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡರವರು ಸೇರಿದಂತೆ ಅನೇಕರು ಶಾಸಕ ಬಂಡೆಪ್ಪ ಖಾಶೆಂಪುರ್ ರವರೊಟ್ಟಿಗೆ ಧ್ವನಿಗೂಡಿಸಿದರು.

Monday, December 26, 2022

ಕಾರಂಜಾ ಸಂತ್ರಸ್ತ ರೈತರ ಪರ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಬಂಡೆಪ್ಪ ಖಾಶೆಂಪುರ್

 


ಕಾರಂಜಾ ಸಂತ್ರಸ್ತ ರೈತರ ಪರ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ (ಡಿ.26): ಸೂಕ್ತ ಪರಿಹಾರಕ್ಕಾಗಿ ಸುಮಾರು 180 ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಬೀದರ್ ಜಿಲ್ಲೆಯ ಕಾರಂಜಾ ಸಂತ್ರಸ್ತ ರೈತರಿಗೆ ಕೂಡಲೇ ನ್ಯಾಯಯುತವಾದ ಪರಿಹಾರ ಒದಗಿಸಿಕೊಡಬೇಕೆಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಕಾರಂಜಾ ಸಂತ್ರಸ್ತ ರೈತರ ಪರವಾಗಿ ಸದನದಲ್ಲಿ ಧ್ವನಿ ಎತ್ತಿದರು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸೋಮವಾರ ನಡೆದ 15ನೇ ವಿಧಾನ ಸಭೆಯ 14ನೇ ಅಧಿವೇಶನ (ಚಳಿಗಾಲದ ಅಧಿವೇಶನ)ದ ಆರನೇ ದಿನದ ಕಲಾಪದಲ್ಲಿ ಪಾಲ್ಗೊಂಡು, ಕಾರಂಜಾ ಸಂತ್ರಸ್ತ ರೈತರ ವಿಷಯವಾಗಿ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ಕಾರಂಜಾ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಬೀದರ್ ಜಿಲ್ಲೆಯಲ್ಲಿರುವ ಒಂದೇ ಒಂದು ನೀರಾವರಿ ಯೋಜನೆ ಕಾರಂಜಾ. ಕಾರಂಜಾ ನೀರಾವರಿ ಯೋಜನೆಗೆ 1964ರಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿರವರು ಅಡಿಗಲ್ಲು ಹಾಕಿದ್ದರು. ಅಂದಿನಿಂದ ಇಲ್ಲಿಯವರೆಗೂ ರೈತರು ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಪ್ರತಿಭಟನೆ ಮಾಡಿಕೊಂಡು ಬರುತ್ತಿದ್ದಾರೆ. ಕೋರ್ಟ್ ಗೆ ಹೋದವರಿಗೆ ಸ್ಪಲ್ಪಮಟ್ಟಿಗೆ ನ್ಯಾಯ ದೊರೆತಿದೆ. ಆದರೇ ಬಹಳಷ್ಟು ರೈತರು ಕೋರ್ಟ್ ಗೆ ಹೋಗಿಲ್ಲ. ಆಗಾಗಿ ಅವರು ಪರಿಹಾರದಿಂದ ವಂಚಿತರಾಗಿದ್ದಾರೆ.

ಕಾರಂಜಾ ಜಲಾಶಯದಿಂದ 28 ಗ್ರಾಮಗಳು ಮುಳಗಡೆಯಾಗಿವೆ. ಅವುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಆದರೇ ಪರಿಪೂರ್ಣ ಮೂಲಭೂತ ಸೌಲಭ್ಯಗಳು ಆ ಗ್ರಾಮಗಳಿಗೆ ಸಿಕ್ಕಿಲ್ಲ. ಕಾರಂಜಾದಿಂದ ತೊಂದರೆಗೆ ಸಿಲುಕಿದವುಗಳ ಪೈಕಿ ಹೆಚ್ಚಿನ ಗ್ರಾಮಗಳು ನನ್ನ ಕ್ಷೇತ್ರದಲ್ಲಿ ಬರುತ್ತವೆ. ಮೂರು ನಾಲ್ಕು ವರ್ಷಗಳಿಂದ ಹೆಚ್ಚಿನ ಮಳೆ ಬಂದಿರುವುದರಿಂದ ಕಾರಂಜಾ ಜಲಾಶಯ ಭರ್ತಿಯಾಗುತ್ತಿದ್ದು, ಎಫ್.ಆರ್.ಎಲ್ ಗಿಂತ ಹೆಚ್ಚಿಗೆ ನೀರು ನಿಲ್ಲುತ್ತಿದೆ.

ನಾನು ಈ ಹಿಂದೆ ಎರಡು ಬಾರಿ ಕಾರಂಜಾ ಸಂತ್ರಸ್ತ ರೈತರ ಪರವಾಗಿ ಸದನದಲ್ಲಿ ಧ್ವನಿ ಎತ್ತಿದ್ದೇನೆ. ಆಗ ನೀರಾವರಿ ಸಚಿವರಾದ ಗೋವಿಂದ ಕಾರಜೋಳರವರು ಕೂಡಲೇ ಪರಿಹಾರ ಕೊಡಿಸ್ತಿನಿ ಅಂತ ಹೇಳಿದ್ದರು. ಇಲ್ಲಿಯವರೆಗೂ ಪರಿಹಾರ ಕೊಡಿಸಿಲ್ಲ. 180 ದಿನಗಳಿಂದ ಬೀದರ್ ನಗರದಲ್ಲಿರುವ ಉಸ್ತುವಾರಿ ಸಚಿವರ ಕಛೇರಿ ಮುಂಭಾಗದಲ್ಲಿ ಕಾರಂಜಾ ಸಂತ್ರಸ್ತ ರೈತರು ಹೋರಾಟ ನಡೆಸುತ್ತಿದ್ದಾರೆ. ಉಸ್ತುವಾರಿ ಸಚಿವರು ಇಲ್ಲಿಯವರೆಗೂ ಅವರ ಮನವಿಯನ್ನು ಸ್ವೀಕರಿಸಿಲ್ಲ.

ಸಂತ್ರಸ್ತ ರೈತರು ಈಗ ಎಲ್ಲಾ ಶಾಸಕರ ಮನೆಗಳ ಮುಂದೆ ಧರಣಿ ಮಾಡುತ್ತಿದ್ದಾರೆ. ಆಗಾಗಿ ಕೂಡಲೇ ಪರಿಹಾರ ಒದಗಿಸಿಕೊಡಬೇಕು. ಈ ಹಿಂದೆ ನಾವು ಸರ್ಕಾರದಲ್ಲಿದ್ದಾಗ ನಾನು ಬೀದರ್ ಜಿಲ್ಲೆ ಉಸ್ತುವಾರಿ ಸಚಿವನಾಗಿದ್ದೆ. ಕುಮಾರಸ್ವಾಮಿರವರು ಮುಖ್ಯಮಂತ್ರಿಯಾಗಿದ್ದರು. ವಿಧಾನಸೌಧದ ಮೂರನೇ ಮಹಡಿಯಲ್ಲಿ ದೊಡ್ಡಮಟ್ಟದ ಸಭೆ ನಡೆಸಿದ್ದೇವು. ರೈತರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದ್ದೇವು. ಈಗ ನಿಮ್ಮ ಸರ್ಕಾರವಿದೆ. ರೈತರ ಪರವಾಗಿ ಕಾಳಜಿ ವಹಿಸಿ, ಕಾರಂಜಾ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸದನದಲ್ಲಿ ಒತ್ತಾಯಿಸಿದರು.

ಉತ್ತರ ನೀಡಿ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿರವರು, ನಾನು ಈ ವಿಷಯದ ಕುರಿತು ನೀರಾವರಿ ಸಚಿವರೊಂದಿಗೆ ಮಾತನಾಡುತ್ತೇನೆ. ಒಂದು ವಾರದೊಳಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮತ್ತು ಹೋರಾಟಗಾರರೊಟ್ಟಿಗೆ ಸಭೆ ನಡೆಸಿ, ತೀರ್ಮಾನ ಕೈಗೊಳ್ಳುತ್ತೇವೆಂದು ತಿಳಿಸಿದರು.

==============================================

ಚಿಟಗುಪ್ಪಾ ತಾಲೂಕು ಅಭಿವೃದ್ಧಿಗೊಳಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್

 

ಬೀದರ್ (ಡಿ.26): ಬೀದರ್ ಜಿಲ್ಲೆಯ ಚಿಟಗುಪ್ಪಾ, ಜಗದೀಶ್ ಶೆಟ್ಟರ್ ರವರ ಕಾಲದಲ್ಲಿ ತಾಲೂಕು ಕೇಂದ್ರವೆಂದು ಘೋಷಣೆಯಾಗಿದೆ. ಆದರೆ ಅಭಿವೃದ್ಧಿಗಾಗಿ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಚಿಟಗುಪ್ಪಾ ತಾಲೂಕು ಕೇಂದ್ರಕ್ಕೆ ಬೇಕಾದ ಸೌಕರ್ಯಗಳನ್ನು ಒದಗಿಸಿಕೊಡುವ ಕೆಲಸ ಮಾಡಬೇಕೆಂದು ಸದನದಲ್ಲಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದರು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸೋಮವಾರ ನಡೆದ 15ನೇ ವಿಧಾನ ಸಭೆಯ 14ನೇ ಅಧಿವೇಶನ (ಚಳಿಗಾಲದ ಅಧಿವೇಶನ)ದ ಆರನೇ ದಿನದ ಕಲಾಪದಲ್ಲಿ ಪಾಲ್ಗೊಂಡು, ಪ್ರಶ್ನೋತ್ತರದ ವೇಳೆ ಮಾತನಾಡಿದ ಅವರು, ಚಿಟಗುಪ್ಪಾವನ್ನು ಜಗದೀಶ್ ಶೆಟ್ಟರ್ ರವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ತಾಲೂಕು  ಕೇಂದ್ರವೆಂದು ಘೋಷಣೆ ಮಾಡಿದ್ದರು.

ಚಿಟಗುಪ್ಪಾ ತಾಲೂಕು ಕೇಂದ್ರಕ್ಕೆ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಿಕೊಡುವಂತೆ ನಾನು ಈ ಹಿಂದೆ ಅನೇಕ ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದೆ. ಇದುವರೆಗೂ ಯಾವುದೇ ರೀತಿಯ ಅಭಿವೃದ್ಧಿಯಾಗಿಲ್ಲ ಈಗಲಾದರೂ ಅಭಿವೃದ್ಧಿ ಪಡಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

Wednesday, December 21, 2022

ತೊಗರಿ ಬೆಳೆಗಾರ ರೈತರ ಪರ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಬಂಡೆಪ್ಪ ಖಾಶೆಂಪುರ್ | ಹೆಕ್ಟರ್ ಗೆ ಕನಿಷ್ಟ 50 ಸಾ. ರೂ. ಪರಿಹಾರ ಒದಗಿಸಲು ಸಿಎಂ ಬೊಮ್ಮಾಯಿಗೆ ಮನವಿ

 

ತೊಗರಿ ಬೆಳೆಗಾರ ರೈತರ ಪರ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಬಂಡೆಪ್ಪ ಖಾಶೆಂಪುರ್

ಹೆಕ್ಟರ್ ಗೆ ಕನಿಷ್ಟ 50 ಸಾ. ರೂ. ಪರಿಹಾರ ಒದಗಿಸಲು ಸಿಎಂ ಬೊಮ್ಮಾಯಿಗೆ ಮನವಿ

ಬೀದರ್ (ಡಿ.21): ಬೀದರ್, ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೆಟೆ ರೋಗದಿಂದ ಬೆಳೆ ಕಳೆದುಕೊಂಡಿರುವ ತೊಗರಿ ಬೆಳೆಗಾರ ರೈತರಿಗೆ ಹೆಕ್ಟರ್ ಗೆ ಕನಿಷ್ಟ 50 ಸಾ. ರೂ. ಪರಿಹಾರ ಒದಗಿಸಬೇಕೆಂದು ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ತೊಗರಿ ಬೆಳೆಗಾರ ರೈತರ ಪರವಾಗಿ ಸದನದಲ್ಲಿ ಧ್ವನಿ ಎತ್ತಿದರು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಬುಧವಾರ ನಡೆದ 15ನೇ ವಿಧಾನ ಸಭೆಯ 14ನೇ ಅಧಿವೇಶನ (ಚಳಿಗಾಲದ ಅಧಿವೇಶನ)ದ ಮೂರನೇ ದಿನದ ಕಲಾಪದಲ್ಲಿ ಪಾಲ್ಗೊಂಡು, ರೋಗಬಾಧೆಯಿಂದ ನಾಶವಾಗಿರುವ ತೊಗರಿ ಬೆಳೆ ಮತ್ತು ಪರಿಹಾರ ವಿಷಯಕ್ಕೆ ಸಂಬಂಧಿಸಿದಂತೆ ಚುಕ್ಕೆ ಗುರುತಿನ ಪ್ರಶ್ನೆ ಕೇಳಿ ಅವರು ಮಾತನಾಡಿದರು.

ಬೀದರ್ ಮತ್ತು ಕಲಬುರಗಿ ಜಿಲ್ಲೆಯಲ್ಲಿ ನೀರಾವರಿ ಹೊರತಾಗಿ ಕ್ಯಾಶ್ ಕ್ರಾಪ್ ಅಂತ ಇರುವುದು ತೊಗರಿ ಬೆಳೆಯಾಗಿದೆ. ಬೀದರ್ ನಲ್ಲಿ ಸುಮಾರು 1.25 ಲಕ್ಷ ಹೆಕ್ಟರ್, ಕಲಬುರಗಿಯಲ್ಲಿ 6.50 ಲಕ್ಷ ಹೆಕ್ಟರ್ ತೊಗರಿ ಬಿತ್ತನೆಯಾಗಿದೆ. ಕೃಷಿ ಇಲಾಖೆಯವರ ವರದಿಯ ಪ್ರಕಾರ ನೆಟೆ ರೋಗದಿಂದ ಬೀದರ್ ನಲ್ಲಿ 15 ಸಾವಿರ ಹೆಕ್ಟರ್, ಕಲಬುರಗಿಯಲ್ಲಿ 69 ಸಾವಿರ ಹೆಕ್ಟರ್ ತೊಗರಿ ಬೆಳೆ ಹಾಳಾಗಿದೆ. ನನ್ನ ಮಾಹಿತಿಯ ಪ್ರಕಾರ ಬಹುತೇಕ ಶೇ. 90% ರಷ್ಟು ಬೆಳೆ ನಾಶವಾಗಿದೆ. ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ತೊಗರಿ ಬೆಳೆ ಕಳೆದುಕೊಂಡಿರುವ ರೈತರಿಗೆ ಸಿಹಿ ಸುದ್ದಿ ನೀಡಬೇಕು ಎಂದು  ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದರು.

ತೊಗರಿ ಬೆಳೆಗಾರ ರೈತರ ಪರ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಬಂಡೆಪ್ಪ ಖಾಶೆಂಪುರ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಈ ವೇಳೆ ಮಾತನಾಡಿದ ಆಳಂದ ಶಾಸಕ ಸುಭಾಷ್ ಗುತ್ತೇದಾರ್ ರವರು, ನೆಟೆ ರೋಗದಿಂದ ಆಳಂದ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದ ತೊಗರಿ ಬೆಳೆ ಹಾಳಾಗಿದೆ. ಬಂಡೆಪ್ಪ ಖಾಶೆಂಪುರ್ ರವರು ಹೇಳಿದಂತೆ ಇದು ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ ಎಂದರು.

ಉತ್ತರ ನೀಡಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ರವರು, ಜುಲೈ, ಆಗಷ್ಟ್, ಸೆಪ್ಟಂಬರ್ ತಿಂಗಳಲ್ಲಿ ಸುರಿದ ಮಳೆಯಿಂದಾಗಿ, ಕಲಬುರಗಿ ಜಿಲ್ಲೆಯಲ್ಲಿ 69776 ಹೆಕ್ಟರ್, ಬೀದರ್ ಜಿಲ್ಲೆಯಲ್ಲಿ 10426 ಹೆಕ್ಟರ್ ತೊಗರಿ ಬೆಳೆ ನಾಶವಾಗಿದೆ. ಇನ್ನೂಳಿದಂತೆ ಸ್ಥಳಕ್ಕೆ ಕೃಷಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ಒದಗಿಸಿಕೊಡುವ ಕೆಲಸ ಮಾಡುತ್ತಾರೆ ಎಂದರು.

ಕಲಬುರಗಿ ಜಿಲ್ಲೆಯಲ್ಲಿ ಸುಮಾರು 259404 ಜನ ರೈತರಿಗೆ 239.91 ಲಕ್ಷ ರೂ. ಬೆಳೆ ವಿಮೆ ಆಧಾರಿತ ಪರಿಹಾರ ಒದಗಿಸಲಾಗುತ್ತದೆ. ಖಾಶೆಂಪುರ್ ರವರು ಹೇಳಿದ ಸಮಸ್ಯೆಯನ್ನು ಕೃಷಿ ಸಚಿವರ ಗಮನಕ್ಕೆ ತಂದು ಪರಿಹಾರ ಒದಗಿಸಲು ತಿಳಿಸುತ್ತೇನೆ ಎಂದರು.

ಮರು ಪ್ರಶ್ನೆ ಕೇಳಿ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಸಚಿವರ ಉತ್ತರ ಸಮರ್ಪಕವಾಗಿಲ್ಲ. ಕನಿಷ್ಟ ಶೇ.90% ನಷ್ಟು ಬೆಳೆ ನಾಶವಾಗಿದೆ. ಇದನ್ನು ಎನ್.ಡಿ.ಆರ್.ಎಫ್ ನಲ್ಲಿ ತೆಗೆದುಕೊಳ್ಳಬೇಕು. ಕನಿಷ್ಟ ಹೆಕ್ಟರ್ ಗೆ 50 ಸಾವಿರ ರೂ. ನಂತೆ ಪರಿಹಾರ ನೀಡಬೇಕು. ಬೆಳೆ ವಿಮಾ ಪರಿಹಾರ ರೈತರು ಮಾಡಿದ ಬೆಳೆ ವಿಮೆಯ ಆಧಾರದ ಮೇಲೆ ನೀಡಲಾಗುತ್ತದೆ. ಅದು ಸರ್ಕಾರ ನೀಡುವ ಪರಿಹಾರವಲ್ಲ. ಸಚಿವರು ಉದ್ರಿಯಾಗಿ ಸರ್ಕಾರ ನಡೆಸಬಾರದು. ರೈತರಿಗೆ ನಗದಿಯಾಗಿ ಪರಿಹಾರದ ದುಡ್ಡು ಒದಗಿಸಬೇಕು.

ಮುಖ್ಯಮಂತ್ರಿಗಳು, ಸಚಿವರು ಸದನದಲ್ಲಿಯೇ ಏನಾದರು ಒಂದು ಸಿಹಿ ಸುದ್ದಿ ನೀಡುತ್ತಾರೆ ಎಂದುಕೊಂಡಿದ್ದೇನೆ. ಸದನದಲ್ಲೇ ಮುಖ್ಯಮಂತ್ರಿಗಳು ಪರಿಹಾರ ಘೋಷಣೆ ಮಾಡಬೇಕು. ಕೂಡಲೇ ಪರಿಹಾರ ಒದಗಿಸಬೇಕು. ಮುಖ್ಯಮಂತ್ರಿಗಳಿಂದ ಮಾತ್ರ ಪರಿಹಾರ ಒದಗಿಸಲು ಸಾಧ್ಯ. ಯಾವ ಮಂತ್ರಿಯಿಂದಲೂ ಪರಿಹಾರ ಒದಗಿಸಲಾಗದು. ಮುಖ್ಯಮಂತ್ರಿಗಳು ದೊಡ್ಡಮನಸ್ಸು ಮಾಡಿ ಪರಿಹಾರ ಘೋಷಣೆ ಮಾಡಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸದನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿರವರಿಗೆ ಮನವಿ ಮಾಡಿದರು.

Tuesday, December 20, 2022

ಒಂದಿಂಚು ಜಾಗವನ್ನು ಬೇರೆಯವರಿಗೆ ನೀಡಬಾರದು: ಸಿಎಂಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಒತ್ತಾಯ

 


ಒಂದಿಂಚು ಜಾಗವನ್ನು ಬೇರೆಯವರಿಗೆ ನೀಡಬಾರದು: ಸಿಎಂಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಒತ್ತಾಯ

ಬೀದರ್ (ಡಿ.21): ಗಡಿ ವಿಷಯದಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವ ಸಂಪೂರ್ಣ ಅಧಿಕಾರವನ್ನು ನಾವು ಮುಖ್ಯಮಂತ್ರಿಗಳಿಗೆ ನೀಡುತ್ತೇವೆ. ಅವರು ಕೂಡ ಶೀಘ್ರದಲ್ಲೇ ಸಭೆ ಕರೆದು ಒಳ್ಳೆಯ ರೀತಿಯಲ್ಲಿ ಕ್ರಮಕೈಗೊಳ್ಳಬೇಕು ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರನ್ನು ಒತ್ತಾಯಿಸಿದರು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಮಂಗಳವಾರ ನಡೆದ 15ನೇ ವಿಧಾನ ಸಭೆಯ 14ನೇ ಅಧಿವೇಶನ (ಚಳಿಗಾಲದ ಅಧಿವೇಶನ)ದ ಎರಡನೇ ದಿನದ ಕಲಾಪದಲ್ಲಿ ಪಾಲ್ಗೊಂಡು, ಗಡಿ ಪ್ರದೇಶದಲ್ಲಿನ ಸಮಸ್ಯೆಗಳ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಲ್ಲೇ ಇರಲಿ, ಸುಪ್ರೀಂ ಕೋರ್ಟ್ ನಲ್ಲಿಯೇ ಇರಲಿ ಒಳ್ಳೆಯ ರೀತಿಯಲ್ಲಿ ಲೀಡ್ ಮಾಡುವ ಮೂಲಕ ನಮ್ಮ ಪಾಲಿನ ಒಂದಿಂಚು ಜಾಗವನ್ನು ನಾವು ಬೇರೆಯವರಿಗೆ ಬಿಟ್ಟುಕೊಡದಂತೆ ನೋಡಿಕೊಳ್ಳಬೇಕು ಎಂದರು.

ಗಡಿ ತಕರಾರುಗಳ ನಿವಾರಣೆಯ ವಿಷಯದಲ್ಲಿ ಉತ್ತಮ ನ್ಯಾಯಾವಾಧಿಗಳನ್ನು ರಾಜ್ಯ ಸರ್ಕಾರದವರು ನೇಮಕ ಮಾಡಿಕೊಳ್ಳಬೇಕು. ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರ ಸ್ಥಾನ ಖಾಲಿ ಇದ್ದು, ಅದು ನೇಮಕ ಮಾಡಬೇಕು. ಎಲ್ಲಾ ಗಡಿ ತಜ್ಞರೊಂದಿಗೆ ಸಮಾಲೋಚನೆ ಮಾಡಬೇಕು ಎಂಬ ಜನರ ಅಭಿಪ್ರಾಯಗಳನ್ನು ಪತ್ರಿಕೆಗಳು ತಿಳಿಸಿವೆ.

ಗಡಿ ವಿಷಯವನ್ನು ಮಹಾರಾಷ್ಟ್ರ ರಾಜ್ಯದವರು ಬಹಳಷ್ಟು ಗಂಭೀರವಾಗಿ ಪರಿಗಣಿಸುತ್ತಾರೆ. ಅಲ್ಲಿನ ಮುಖ್ಯಮಂತ್ರಿಗಳು ಮೂರು ಜನರನ್ನು ಗಡಿ ಸಚಿವರು ಅಂತ ನೇಮಕ ಮಾಡುತ್ತಾರೆ. ಈ ಹಿಂದೆ ಹೆಚ್.ಕೆ ಪಾಟೀಲ್ ರನ್ನು ಬಾರ್ಡರ್ ಮಿನಿಷ್ಟರ್ ಅಂತ ನೇಮಕ ಮಾಡಲಾಗಿತ್ತು. ತಮ್ಮ ತಮ್ಮ ಇಲಾಖೆಗಳನ್ನು ನೋಡಿಕೊಳ್ಳುವ ಮಿನಿಷ್ಟರ್ ಗಳು ಮತ್ತು ಗೃಹ ಸಚಿವರು ಇದ್ದೇ ಇರುತ್ತಾರೆ. ಆದರೇ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಒಬ್ಬರು ಸಚಿವರು ಇದ್ದರೆ ಚನ್ನಾಗಿ ಇರುತ್ತದೆ ಎಂದು ಮಾಧ್ಯಮಗಳು ಹೇಳುತ್ತಿವೆ. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಯೋಚಿಸಬೇಕಾಗಿದೆ.

ಮುಖ್ಯಮಂತ್ರಿಗಳ ಮೇಲೆ ನಮಗೆ ವಿಶ್ವಾಸವಿದೆ. ಅವರು ಸರ್ಕಾರ ನಡೆಸುವವರಾಗಿರುತ್ತಾರೆ. ಗಡಿ ವಿಷಯದಲ್ಲಿ ನಮ್ಮ ಸರ್ಕಾರ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮಕೈಗೊಳ್ಳಬೇಕಾಗಿರುತ್ತದೆ. ಗಡಿ ವಿಷಯವನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಸರ್ಕಾರದ ನಿರಾಶಕ್ತಿ ಹೀಗೆ ಮುಂದುವರೆದರೆ ಮುಂದೊಂದಿನ ಗಂಭೀರ ಸಮಸ್ಯೆ ಎದುರಿಸಬೇಕಾಗುತ್ತದೆ ಎಂಬ ಆತಂಕ ಕನ್ನಡಿಗರಲ್ಲಿ ಮನೆ ಮಾಡಿದೆ ಎಂದು ಮಾಧ್ಯಮಗಳು ತಿಳಿಸಿವೆ. ಮುಖ್ಯಮಂತ್ರಿಗಳು ಇಂತವುಗಳಿಗೆ ಅವಕಾಶ ನೀಡಬಾರದು.

ಮುಖ್ಯಮಂತ್ರಿಗಳು ಸರ್ವ ಪಕ್ಷ ಸಭೆ ಕರೆಯುತ್ತೇನೆ ಎಂದಿದ್ದಾರೆ. ಸಭೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಒಳ್ಳೊಳ್ಳೆ ವಕೀಲರನ್ನು ನೇಮಿಸಬೇಕು. ಗಡಿ ತಜ್ಞರ ಸಲಹೆ ತೆಗೆದುಕೊಳ್ಳಬೇಕು. ಕನ್ನಡ ಪರ ಹೋರಾಟಗಾರರನ್ನು, ರಕ್ಷಣಾ ವೇದಿಕೆಯವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಸರ್ಕಾರ ಮಾಡಬೇಕು.

ಈ ಹಿಂದೆ 2006ರಲ್ಲಿ ಹೆಚ್.ಡಿ ಕುಮಾರಸ್ವಾಮಿರವರು ಮುಖ್ಯಮಂತ್ರಿಯಾಗಿದ್ದರು. ಅವರು ದೇವೇಗೌಡರ ಮಾರ್ಗದರ್ಶನದಲ್ಲಿ ಮಹಾರಾಷ್ಟ್ರದ ನಾಗಪೂರದಲ್ಲಿ ನಡೆಯುವ ಅಧಿವೇಶನದಂತೆ ಉತ್ತರ ಕರ್ನಾಟಕದ ಪ್ರಮುಖ ನಗರವಾದ ಬೆಳಗಾವಿಯಲ್ಲಿ ಅಧಿವೇಶನ ಆರಂಭಿಸಿದ್ದರು. ಆ ಮೂಲಕ ಅವರು ಬೆಳಗಾವಿ ಕರ್ನಾಟಕದ ಎರಡನೇ ಶಕ್ತಿ ಕೇಂದ್ರ ಎಂದು ತೋರಿಸಿಕೊಟ್ಟಿದ್ದರು.

ಸುವರ್ಣ ಸೌಧಕ್ಕೆ ಅವರೇ ಚಾಲನೆ ನೀಡಿದ್ದರು. ಯಡಿಯೂರಪ್ಪರವರು ಪೂರ್ಣಗೊಳಿಸಿದ್ದರು. ಇಲ್ಲಿನ ಜನರಿಗೆ ಶಕ್ತಿ ಕೊಡಬೇಕು ಎಂಬ ನಿಟ್ಟಿನಲ್ಲಿ ಅಂದು ಆ ನಿರ್ಧಾರಗಳನ್ನು ಮಾಡಿದ್ದರು. ನಾವು ಯಾವುದಕ್ಕೂ ಕಮ್ಮಿ ಇಲ್ಲ ಎಂದು ತೋರಿಸಿಕೊಟ್ಟಿದ್ದರು. ಮುಂದಿನ ದಿನಗಳಲ್ಲಿ ನಮ್ಮ ಕರ್ನಾಟಕದ ಒಂದಿಂಚು ಜಾಗವನ್ನು ನಾವು ಬಿಡದಂತೆ ಡಬಲ್ ಇಂಜೀನ್ ಸರ್ಕಾರ ಕೆಲಸ ಮಾಡಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸದನದಲ್ಲಿ ಹೇಳಿದರು.

ನಮ್ಮ ಪಾಲಿನ ನೀರು ಉಳಿಸಲು ಮುಖ್ಯಮಂತ್ರಿಗಳು ಕ್ರಮಕೈಗೊಳ್ಳಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ (ಡಿ.20): ನೀರಾವರಿ ವಿಷಯದಲ್ಲಿ ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಜಿಲ್ಲೆ ನಮ್ಮ ಬೀದರ್ ಜಿಲ್ಲೆಯಾಗಿದೆ. ನಮ್ಮ ಕರ್ನಾಟಕದ ಪಾಲಿನ ನೀರನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕ್ರಮಕೈಗೊಳ್ಳಬೇಕು ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರನ್ನು ಒತ್ತಾಯಿಸಿದರು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಮಂಗಳವಾರ ನಡೆದ 15ನೇ ವಿಧಾನ ಸಭೆಯ 14ನೇ ಅಧಿವೇಶನ (ಚಳಿಗಾಲದ ಅಧಿವೇಶನ)ದ ಎರಡನೇ ದಿನದ ಕಲಾಪದಲ್ಲಿ ಪಾಲ್ಗೊಂಡು, ಬೀದರ್ ಜಿಲ್ಲೆ ಭಾಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಈಶ್ವರ ಖಂಡ್ರೆರವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉಪಪ್ರಶ್ನೆ ಕೇಳಿ ಅವರು ಮಾತನಾಡಿದರು.

ಗೋದಾವರಿ ಬೇಸಿನ್ ನಲ್ಲಿ 22 ಟಿ.ಎಮ್.ಸಿ ನೀರಿನ ಅಲೊಕೇಶನ್ ಇದೆ ಅಂತ ಹೇಳಿದ್ದಾರೆ. ಆದರೆ ಎಲ್ಲಾ ಸೇರಿ 10 ಟಿ.ಎಮ್.ಸಿ ನೀರನ್ನು ಸಹ ನಾವು ಬಳಕೆ ಮಾಡಿಕೊಳ್ಳುತ್ತಿಲ್ಲ. ನಮ್ಮ ಪಾಲಿನ ನೀರು ವ್ಯರ್ಥವಾಗಿ ಪಕ್ಕದ ತೆಲಂಗಾಣ ರಾಜ್ಯಕ್ಕೆ ಹರಿದು ಹೋಗುತ್ತಿದೆ. 2019-20ರಲ್ಲಿ ಬೀದರ್ ಜಿಲ್ಲೆಯ ನೀರಾವರಿ ಯೋಜನೆಗಳಿಗಾಗಿ 375 ಕೋಟಿ ರೂ. ಬಜೆಟ್ ನಲ್ಲಿ ಕೊಟ್ಟು ಸುಮಾರು 33 ಕೆರೆ ತುಂಬಿಸಲು ಅಲೊಕೇಶನ್ ಕೊಡಲಾಗಿತ್ತು. ಆದರೆ ಇದುವರೆಗೂ ಆ ಯೋಜನೆ  ವಿಷಯದಲ್ಲಿ ಯಾವುದೇ ಕ್ರಮಕೈಗೊಂಡಿಲ್ಲ. ನಮ್ಮ ಪಾಲಿನ ನೀರನ್ನು ನಾವು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕ್ರಮಕೈಗೊಳ್ಳಬೇಕು. ಬಚಾವತ್ ಆಯೋಗದ ತೀರ್ಪಿನನ್ವಯ ನೀರಿನ ಹಂಚಿಕೆಯಾಗಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದರು.

ನಾವು ನೀರನ್ನು ಉಪಯೋಗ ಮಾಡಿಕೊಳ್ಳುತ್ತಿದ್ದೇವೆ. ನಾಲ್ಕು ಬ್ಯಾರೇಜ್ ಗಳಿಗೆ ನೀರು ಹೋಗುತ್ತಿಲ್ಲವೆಂದು ಖಂಡ್ರೆಯವರು ಹೇಳಿದ್ದಾರೆ. ನಾನು ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲಿಸಲು ತಿಳಿಸುತ್ತೇನೆ. ಅಡೆತಡೆಗಳಿದ್ದಲ್ಲಿ ಪರಿಹರಿಸಲು ಸೂಚಿಸುತ್ತೇನೆ. 22.37 ಟಿ.ಎಮ್.ಸಿ ನೀರನ್ನು ಬಳಕೆ ಮಾಡಿಕೊಳ್ಳುತ್ತಿಲ್ಲವೆಂದು ಖಾಶೆಂಪುರ್ ರವರು ಹೇಳಿದ್ದಾರೆ. ನಾವು ನೀರನ್ನು ಬಳಕೆ ಮಾಡಿಕೊಳ್ಳುತ್ತಿದ್ದೇವೆ. ಪ್ರಾಜೆಕ್ಟ್ ಗಳನ್ನು ಅನುಮೋದನೆ ಮಾಡಿದ್ದಿವಿ. ಕೆಲವು ಪ್ರಾಜೆಕ್ಟ್ ಗಳು ಮುಗಿದಿವೆ. ಕೆಲವು ಪ್ರಗತಿಯಲ್ಲಿವೆ. ಗೋದಾವರಿ ನೀರನ್ನು ಖಂಡಿತವಾಗಿ ಬಳಕೆ ಮಾಡಿಕೊಳ್ಳುತ್ತಿದ್ದೇವೆಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳರವರು ಉತ್ತರದಲ್ಲಿ ತಿಳಿಸಿದರು.

ಸದನದಲ್ಲಿ ಯಾವುದೇ ಕಾರಣಕ್ಕೂ ತಪ್ಪು ತಪ್ಪಾದ, ಸುಳ್ಳು ಮಾಹಿತಿಗಳನ್ನು, ಆಶ್ವಾಸನೆಗಳನ್ನು ನೀಡಬೇಡಿ. ಸರಿಯಾದ ಪರಿಹಾರಾತ್ಮಕ ಉತ್ತರ ನೀಡಿ, ಸರ್ಕಾರ ನಿಮ್ಮದಿದೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸಚಿವರನ್ನು ಒತ್ತಾಯಿಸಿದರು.

Monday, December 19, 2022

ಕ್ಯಾನ್ಸರ್ ತಡೆಗೆ ಮುಖ್ಯಮಂತ್ರಿಗಳು ಹೆಚ್ಚು ಒತ್ತು ನೀಡಲಿ: ಶಾಸಕ ಬಂಡೆಪ್ಪ ಖಾಶೆಂಪುರ್

 

ಸದನದಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಮಾತು.

ಬೀದರ್ (ಡಿ.19): ಈ ಮುಂಚೆ ವಿದೇಶಗಳಲ್ಲಿ ಹೆಚ್ಚಾಗಿದ್ದ ಕ್ಯಾನ್ಸರ್ ಕಾಯಿಲೆ ಇತ್ತೀಚೆಗೆ ಭಾರತದಲ್ಲಿ ಕೂಡ ಹೆಚ್ಚುತ್ತಿದೆ. ಕ್ಯಾನ್ಸರ್ ಪತ್ತೆಹಚ್ಚಿ ತಡೆಗಟ್ಟುವ ಕಡೆಗೆ ಮುಖ್ಯಮಂತ್ರಿಗಳು ಹೆಚ್ಚಿನ ಗಮನಹರಿಸಲಿ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸೋಮವಾರ ನಡೆದ 15ನೇ ವಿಧಾನ ಸಭೆಯ 14ನೇ ಅಧಿವೇಶನ (ಚಳಿಗಾಲದ ಅಧಿವೇಶನ)ದ ಮೊದಲ ದಿನದ ಕಲಾಪದಲ್ಲಿ ಪಾಲ್ಗೊಂಡು, ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿರವರು ತಂದ ಸಂತಾಪ ಸೂಚನೆಗೆ ಬೆಂಬಲಿಸಿ ಮಾತನಾಡಿದ ಅವರು, ಕ್ಯಾನ್ಸರ್ ಪ್ರಮಾಣ ತಡೆಗಟ್ಟುವ ನಿಟ್ಟಿನಲ್ಲಿ ಹಳ್ಳಿಗಳ ಮಟ್ಟದಲ್ಲಿ ಡಿಟೆಕ್ಷನ್ ಟೆಸ್ಟ್ ಮಾಡಿಸಿ ಪ್ರಿವೆನ್ಷನ್ ಮಾಡಿದರೆ ಒಳ್ಳೆದು ಅನಿಸುತ್ತಿದೆ ಎಂದು  ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಸಂತಾಪ ಸೂಚನಾ ನಿರ್ಣಯದ ಮೇಲೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ವಿಧಾನ ಸಭೆಯ ಹಾಲಿ ಉಪ ಸಭಾಧ್ಯಕ್ಷರಾಗಿದ್ದ ಆನಂದ ಅಲಿಯಾಸ್ ವಿಶ್ವನಾಥ್ ಚಂದ್ರಶೇಖರ ಮಾಮನಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ಯಾದವ್, ರಾಜ್ಯಸಭೆಯ ಮಾಜಿ ಸದಸ್ಯರಾಗಿದ್ದ ಅಬ್ದುಲ್ ಸಮದ್ ಸಿದ್ದಿಕಿ, ಲೋಕಸಭೆಯ ಮಾಜಿ ಸದಸ್ಯರಾಗಿದ್ದ ಕೋಳೂರು ಬಸವನಗೌಡ, ರಾಜ್ಯದ ಮಾಜಿ ಸಚಿವರುಗಳಾಗಿದ್ದ ಜಬ್ಬಾರಖಾನ್ ಹೊನ್ನಳ್ಳಿ, ಸುಧೀಂದ್ರರಾವ್ ಕಸ್ಬೆ, ವಿಧಾನಸಭೆಯ ಮಾಜಿ ಸದಸ್ಯರುಗಳಾಗಿದ್ದ ಎನ್.ಟಿ. ಬೊಮ್ಮಣ್ಣ, ಶ್ರೀಶೈಲಪ್ಪ ಬಿದರೂರು, ಕುಂಬ್ಳೆ ಸುಂದರರಾವ್, ಶಂಕರಗೌಡ ಎನ್. ಪಾಟೀಲ್ ರವರನ್ನು ಸ್ಮರಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

ವಿಧಾನ ಸಭೆಯ ಹಾಲಿ ಉಪ ಸಭಾಧ್ಯಕ್ಷರಾಗಿದ್ದ ಆನಂದ ಮಾಮನಿರವರ ನಿಧನದ ಸುದ್ದಿ ಕೇಳಿ ಎಲ್ಲರಿಗೂ ಆಘಾತವಾಗಿದೆ. ಅವರು ಬಹಳ ಸೌಮ್ಯ ವ್ಯಕ್ತಿತ್ವದವರಾಗಿದ್ದರು. ನಮ್ಮ ಜೆಡಿಎಲ್ಫಿ ಆಫೀಸ್ ಅವರ ಆಫೀಸ್ ನ ಪಕ್ಕದಲ್ಲೇ ಇರುವುದರಿಂದ ನಾವು ಬರುವಾಗ ಹೋಗುವಾಗ ಅವರನ್ನು ಮಾತಾಡಿಸಿಕೊಂಡು ಹೋಗ್ತಿದ್ವಿ. ಅವರು ಮೂರು ಬಾರಿ ಶಾಸಕರಾಗಿದ್ದರು. ಅಲ್ಲದೇ ಉದ್ಯಮಿ (ವ್ಯಾಪಾರಸ್ಥರು) ಕೂಡ ಆಗಿದ್ದರು. ಬೇರೆ ಬೇರೆ ಸಂಸ್ಥೆಗಳಿಗೆ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಅವರು ಕ್ಯಾನ್ಸರ್ ನಿಂದ ನಿಧನ ಹೊಂದಿರುವುದು ದುಃಖದ ವಿಷಯವಾಗಿದೆ.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ಯಾದವ್ ರವರು 10 ಬಾರಿ ಉತ್ತರ ಪ್ರದೇಶದಲ್ಲಿ ಶಾಸಕರು, ಒಂದು ಬಾರಿ ವಿಧಾನ ಪರಿಷತ್, 07 ಬಾರಿ ಲೋಕಸಭಾ ಸದಸ್ಯರು ಹಾಗೂ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರು. ಅಲ್ಲದೇ ಅವರು ಕುಸ್ತಿಪಟು ಆಗಿದ್ದದ್ದನ್ನು ಗುರುತಿಸಿ ಅವರನ್ನು ರಾಜಕೀಯಕ್ಕೆ ತರಲಾಗಿತ್ತು. ಕರ್ನಾಟಕದವರೇ ಆದ ಹೆಚ್.ಡಿ ದೇವೇಗೌಡರು ಪ್ರಧಾನಮಂತ್ರಿಯಾಗಿದ್ದಾಗ ಅವರಿಗೆ ಗೃಹ ಸಚಿವ ಸ್ಥಾನ ನೀಡಲಾಗಿತ್ತು. ಅವರು ಸಾಮಾಜಿಕ ನ್ಯಾಯದ ಪರವಾಗಿ ಬಹಳಷ್ಟು ಹೋರಾಟ ಮಾಡಿದ್ದರು.

ರಾಜ್ಯಸಭೆಯ ಮಾಜಿ ಸದಸ್ಯರಾಗಿದ್ದ ಅಬ್ದುಲ್ ಸಮದ್ ಸಿದ್ದಿಕಿರವರು ನಮ್ಮ ರಾಯಚೂರು ಭಾಗದವರು, ರಾಯಚೂರು ಮಾತ್ರವಲ್ಲದೇ ಕಲಬುರಗಿ, ಬೀದರ್ ಕಡೆ ಯಾವಾಗ ಬಂದರು ಕೂಡ ಅವರು ಒಳ್ಳೆಯ ವ್ಯಕ್ತಿ ಎಂದು ಗುರುತಿಸಿಕೊಂಡಿದ್ದರು. ಈಗಲೂ ಅವರ ಕುಟುಂಬದವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಇನ್ನೂ ರಾಜ್ಯದ ಮಾಜಿ ಸಚಿವರಾದ ಸುಧೀಂದ್ರರಾವ್ ಕಸ್ಬೆರವರು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸದಸ್ಯರಾಗಿ ಕೆಲಸ ಮಾಡಿದ್ದರು. ರಾಯಚೂರಿನ ಸ್ಕೌಡ್ಸ್ ಮತ್ತು ಗೈಡ್ಸ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದರು.

ವಿಧಾನಸಭೆಯ ಮಾಜಿ ಸದಸ್ಯರಾದ ಎನ್.ಟಿ. ಬೊಮ್ಮಣ್ಣರವರು, ಇತ್ತೀಚೆಗೆ ನಮ್ಮ ಜೊತೆಗೆ ಇದ್ದರು. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದಿಂದಲೇ ಸ್ಪರ್ಧೆ ಮಾಡಿದ್ದರು. ನಮ್ಮ ಪಕ್ಷದ ಅಧ್ಯಕ್ಷರಾಗಿ ಕೂಡ ಕೆಲಸ ಮಾಡಿದ್ದರು. ವಿರೋಧ ಪಕ್ಷದ ನಾಯಕರು ಹೇಳಿದಂತೆ ಅವರು ಬಹಳಷ್ಟು ಸೌಮ್ಯ ಹೃದಯದ ವ್ಯಕ್ತಿಯಾಗಿದ್ದರು. ಇನ್ನೂ ಶ್ರೀಶೈಲಪ್ಪ ಬಿದರೂರುರವರು, ಕಾಂಗ್ರೆಸ್ ಆಫೀಸ್ ನ ಸಭೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದರು. ಇತ್ತೀಚೆಗೆ ನಿಧನರಾದ ಅವರೆಲ್ಲರ ಆತ್ಮಕ್ಕೆ ಶಾಂತಿ ಲಭಿಸಲಿ, ಮೃತರ ಕುಟುಂಬ ವರ್ಗದವರಿಗೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸಂತಾಪ ವ್ಯಕ್ತಪಡಿಸಿದರು.

Thursday, December 8, 2022

ಖಾಶೆಂಪುರ್: ಸದ್ಗುರು ಸಚ್ಚಿದಾನಂದ ಸ್ವಾಮೀಜಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಶಾಸಕ ಬಂಡೆಪ್ಪ ಖಾಶೆಂಪುರ್


ಬೀದರ್ (ಡಿ.08): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದಲ್ಲಿ ನಡೆದ ದತ್ತ ಮಹಾರಾಜರ ಅವತಾರ ಪುರುಷ ಶ್ರೀ ಸದ್ಗುರು ಸಚ್ಚಿದಾನಂದ ಸ್ವಾಮೀಜಿರವರ 6ನೇ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಪಲ್ಲಕ್ಕಿ ಮಹೋತ್ಸವಕ್ಕೆ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಚಾಲನೆ ನೀಡಿದರು.

ಖಾಶೆಂಪುರ್ ಪಿ ಗ್ರಾಮದ ಶ್ರೀ ಸದ್ಗುರು ಸಚ್ಚಿದಾನಂದ ಸ್ವಾಮೀಜಿ ದೇವಸ್ಥಾನಕ್ಕೆ ಗುರುವಾರ ಬೆಳಗ್ಗೆ ಭೇಟಿ ನೀಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರನ್ನು ಖಾಶೆಂಪುರ್ ಪಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ವಿವಿಧ ಕಲಾ ತಂಡದವರು ಅದ್ದೂರಿಯಾಗಿ ಸ್ವಾಗತಿಸಿದರು. ಇದೇ ವೇಳೆ ಶಾಸಕರು ಶ್ರೀ ಸದ್ಗುರು ಸಚ್ಚಿದಾನಂದ ಸ್ವಾಮೀಜಿಗೆ ವಿಶೇಷ ಪೂಜೆ ಸಲ್ಲಿಸಿ ಪಲ್ಲಕ್ಕಿ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಇಟಗಾ ಮಠದ ಶರಣಯ್ಯ ಸ್ವಾಮಿ ಅರ್ಚಕರು, ಶ್ರೀ ಸದ್ಗುರು ಸಚ್ಚಿದಾನಂದ ಸ್ವಾಮೀಜಿ ದೇವಸ್ಥಾನದ ಅರ್ಚಕರಾದ ಶಿವಾನಂದ ಸ್ವಾಮಿ, ವಿಶ್ವನಾಥ ಬಾಲೆಬಾಯಿ, ಶರಣಪ್ಪ ಖಾಶೆಂಪುರ್, ಲಕ್ಷ್ಮಣ ಹೊಸಳ್ಳಿ, ಮಂಜುನಾಥ ಬಾಲೆಬಾಯಿ, ಸುನೀಲ್ ಗುಮಾಸ್ತಿ, ಶಾಂತು ಗುಮಾಸ್ತಿ, ಸಿದ್ದು ಖಾಶೆಂಪುರ್, ರಾಜಕುಮಾರ್ ಪೊಲೀಸ್ ಪಾಟೀಲ್, ಶಿವಪ್ಪ ಪೊಲೀಸ್ ಪಾಟೀಲ್, ಮಹೇಶ ಗುಮಾಸ್ತಿ, ಭಜರಂಗ ತಮಗೊಂಡ, ಮೋಹನ್ ಸಾಗರ್, ನರಸಪ್ಪ ಬಸಗೊಂಡ, ಚಂದ್ರಶೇಖರ್ ಪಾಟೀಲ್, ನವನಾಥ ಬಾಲೆಬಾಯಿ, ಕೃಷ್ಣ ಖಾಶೆಂಪುರ್, ಚಿದಾನಂದ ಖಾಶೆಂಪುರ್, ರವಿ ಬಾಲೆಬಾಯಿ, ಶಿವಕುಮಾರ್ ಬಾಲೆಬಾಯಿ, ಸುನೀಲ್ ಪಟ್ನೆ, ದೂಳಪ್ಪ ಪಟ್ನೆ, ಆನಂದ ತಮಗೊಂಡ, ಬಕ್ಕಪ್ಪ ಸುತಾರ್, ಬಾಬು ಗುಮಾಸ್ತಿ, ಸತೀಶ್ ಗುಮಾಸ್ತಿ, ಶಿವರಾಜ್ ಹಳ್ಳೊಳ್ಳಿ, ಬಸವರಾಜ ಬಂತಿಗಿ, ರಮೇಶ ಬಾಲೆಬಾಯಿ ಸೇರಿದಂತೆ ಅನೇಕರಿದ್ದರು.
#ಬಂಡೆಪ್ಪ #ಖಾಶೆಂಪುರ್ #ಬೀದರ್ #ದಕ್ಷಿಣ #ಶಾಸಕರು
#Bandeppa #Khashempur #Bidar #South #MLA

Monday, December 5, 2022

ಜಿಲ್ಲಾ ಮಟ್ಟದಲ್ಲೊಂದು ಪ್ಲಾನಿಟೋರಿಯಂ ಅಗತ್ಯ: ಶಾಸಕ ಬಂಡೆಪ್ಪ ಖಾಶೆಂಪುರ್


ಬೀದರ್ (ಡಿ.05): ಪ್ರತಿ ಜಿಲ್ಲೆಗೆ ಒಂದರಂತೆ ಜಿಲ್ಲಾ ಮಟ್ಟದಲ್ಲೊಂದು ಪ್ಲಾನಿಟೋರಿಯಂ ಮಾಡುವುದು ಅಗತ್ಯವಾಗಿದೆ. ಅದರಿಂದ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹೆಚ್ಚಲಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ನಡೆದ 'ಶಾಲೆಯ ಅಂಗಳದಲ್ಲೆ ತಾರಾಲಯ' ಯೋಜನೆಯ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಂಚಾರಿ ತಾರಾಲಯ ಎಂಬ ಯೋಜನೆ ಆರಂಭಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
ಸಂಚಾರಿ ತಾರಾಲಯ ಎಂಬ ಯೋಜನೆಯ ಮೂಲಕ ಗ್ರಾಮೀಣ ಭಾಗದ ಶಾಲೆಗಳಲ್ಲಿನ ಮಕ್ಕಳಿಗೆ ತಾರಾಲಯ ಪರಿಚಯಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ವಿಜ್ಞಾನ ವಿಭಾಗದಿಂದ ಒಳ್ಳೆಯ ಕೆಲಸವಾಗುತ್ತಿದೆ. ಅಬ್ದುಲ್ ಕಲಾಂರವರು ಗ್ರಾಮೀಣ ಭಾಗದಲ್ಲಿ ಜನಿಸಿ ವಿಜ್ಞಾನಿಯಾಗಿರುವುದು ಅವರಲ್ಲಿರುವ ಶಕ್ತಿ ಸಾಮರ್ಥ್ಯದಿಂದಲೇ ಸಾಧ್ಯವಾಗಿದೆ. ಅದರಂತೆಯೇ ಅಂಬೇಡ್ಕರ್ ರವರು ತಮ್ಮ ಶಕ್ತಿ ಸಾಮರ್ಥ್ಯದಿಂದಲೇ ಭಾರತ ಸಂವಿಧಾನ ರಚಿಸಿದ್ದಾರೆ ಅಂತವರ ಆದರ್ಶಗಳನ್ನು ಮಕ್ಕಳು ಮೈಗೂಡಿಸಿಕೊಂಡು ಸಾಗಬೇಕು.
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹೆಚ್ಚಿಸಲು ತಾರಾಲಯದಂತಹ ಯೋಜನೆಗಳಿಂದ ಸಾಧ್ಯವಾಗುತ್ತದೆ. ಕನಿಷ್ಠ ಪಕ್ಷ ಜಿಲ್ಲಾ ಮಟ್ಟದಲ್ಲಿ ಒಂದೊಂದು ತಾರಾಲಯಗಳನ್ನು ಸ್ಥಾಪಿಸಬೇಕು ಎಂಬುದು ನನ್ನ ಒತ್ತಾಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಯೋಜನೆಯ ಮುಖ್ಯ ವ್ಯವಸ್ಥಾಪಕ ವೀರೇಶ ಹಂಚಿನಾಳರವರು, ಸಂಚಾರಿ ತಾರಾಲಯ ಎಂದರೆ ಶಾಲೆಯ ಅಂಗಳದಲ್ಲಿಯೇ ಮಕ್ಕಳಿಗೆ ತಾರಾಲಯ ತೋರಿಸುವ ಯೋಜನೆಯಾಗಿದೆ. ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದಂತೆ ಮಕ್ಕಳಿಗೆ ತಿಳುವಳಿಕೆ ನೀಡುವ ಕೆಲಸ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದ ಮಕ್ಕಳು ನಿಜವಾದ ನಕ್ಷತ್ರಗಳು ಇದ್ದಂತೆ. ಅಂತವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಇಂತಹ ಯೋಜನೆ ರೂಪಿಸಿದೆ. ಮಕ್ಕಳಲ್ಲಿ ವೈಜ್ಞಾನಿಕ ಪ್ರವೃತ್ತಿ ಬೆಳೆಸುವ ಕೆಲಸವನ್ನು ಸಂಚಾರಿ ತಾರಾಲಯ ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿ ಇಂದುಮತಿ, ಯೋಜನೆಯ ಮುಖ್ಯ ವ್ಯವಸ್ಥಾಪಕ ವೀರೇಶ ಹಂಚಿನಾಳ, ನಿವೃತ್ತ ಕುಲಪತಿ ಬಿ.ಜಿ ಮೂಲಿಮನಿ, ಅಗಸ್ತ್ಯ ಫೌಂಡೇಶನ್ ನ ಮುಖ್ಯಸ್ಥ ಬಾಬುರಾವ್ ಸಲಾಸರೆ, ಎಸ್ಡಿಎಮ್ಸಿ ಅಧ್ಯಕ್ಷ ಸೂರ್ಯಕಾಂತ್ ಜ್ಯೋತಿ, ಪ್ರಮುಖರಾದ ಭಜರಂಗ ತಮಗೊಂಡ, ಮಂಜುನಾಥ ಬಾಲೆಬಾಯಿ, ಶರಣಪ್ಪ ಖಾಶೆಂಪುರ್, ಸುನೀಲ್ ಗುಮಾಸ್ತಿ, ಸಂತೋಷ ಗುಮಾಸ್ತಿ, ನಾಗೇಶ ಪಾಟೀಲ್, ಸಚ್ಚಿದಾನಂದ, ಮಚೇಂದ್ರ ಮುತ್ತಂಗಿ, ಸುಪ್ರಿಯಾ, ದಿನೇಶ್, ವಿಶ್ವನಾಥ, ತುಕ್ಕರಾಮ್, ಸದಾನಂದ, ಸಂಜುಕುಮಾರ್, ದೀಪಾ, ಶಶಿಕಲಾ, ಅಶೋಕ್ ಸೇರಿದಂತೆ ಅನೇಕರಿದ್ದರು.
#ಬಂಡೆಪ್ಪ #ಖಾಶೆಂಪುರ್ #ಬೀದರ್ #ದಕ್ಷಿಣ #ಶಾಸಕರು #Bandeppa #Khashempur #Bidar #South #MLA