‘ರೈತರಿಗೆ ಜಮೀನು ವಾಪಸ್ ಕೊಟ್ಬಿಡಿ’
ಬಿಲ್ ಮೇಲಿನ ಚರ್ಚೆಯ ವೇಳೆ ಶಾಸಕ ಬಂಡೆಪ್ಪ ಖಾಶೆಂಪುರ್ ಒತ್ತಾಯ
ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್
ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು,
ಬೆಳಗಾವಿಯ ಸುವರ್ಣ ವಿಧಾನ
ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಮಂಗಳವಾರ ನಡೆದ 15ನೇ ವಿಧಾನ ಸಭೆಯ 14ನೇ ಅಧಿವೇಶನ
(ಚಳಿಗಾಲದ ಅಧಿವೇಶನ)ದ ಏಳನೇ ದಿನದ ಕಲಾಪದಲ್ಲಿ ಪಾಲ್ಗೊಂಡು, ಬಿಲ್ ಮೇಲಿನ ಚರ್ಚೆಯ ವೇಳೆ
ಮಾತನಾಡಿ, ಬೀದರ್ ಜಿಲ್ಲೆಯಲ್ಲಿ 1982ರಲ್ಲಿ ರೈತರಿಂದ ಕೇವಲ 08 ಸಾ. ರೂ.ಗೆ ಎಕರೆಯಂತೆ
ಜಮೀನನ್ನು ವಶಪಡಿಸಿಕೊಂಡಿದ್ದರು. ಆದರೇ ಇದುವರೆಗೂ ಪೂರ್ಣ ಪ್ರಮಾಣದ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ.
ಹಾಗಾಗಿ ರೈತರ ಜಮೀನನ್ನು ವಾಪಸ್ಸು ನೀಡಬೇಕೆಂದು ಒತ್ತಾಯಿಸಿದರು.
‘ರೈತರಿಗೆ ಜಮೀನು ವಾಪಸ್ ಕೊಟ್ಬಿಡಿ’ ಬಿಲ್ ಮೇಲಿನ ಚರ್ಚೆಯ ವೇಳೆ ಶಾಸಕ ಬಂಡೆಪ್ಪ ಖಾಶೆಂಪುರ್ ಒತ್ತಾಯ
No comments:
Post a Comment