Saturday, September 30, 2023

ಸತತವಾಗಿ ಆರನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾದ ಮಾರುತಿ ಖಾಶೆಂಪುರ್

ಸತತವಾಗಿ ಆರನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾದ ಮಾರುತಿ ಖಾಶೆಂಪುರ್

ಕೆಎಮ್ಎಫ್ ನಿರ್ದೇಶಕರನ್ನು ಸನ್ಮಾನಿಸಿದ ಮುಖಂಡರು

ಬೀದರ್ (ಸೆ.30): ಕಲಬುರಗಿ, ಬೀದರ್ ಹಾಗೂ ಯಾದಗಿರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಬೀದರ್ ವಿಭಾಗದ ಸಾಮಾನ್ಯ ಚುನಾವಣೆಯಲ್ಲಿ ಗೆದ್ದು ಸತತವಾಗಿ ಆರನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾಗಿ ಆಯ್ಕೆಯಾದ ಮಾರುತಿ ಖಾಶೆಂಪುರ್ ರವರು ತಮ್ಮ ಅಣ್ಣನವರಾದ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ನಿವಾಸದಲ್ಲಿ ಶನಿವಾರ ಬೆಳಗ್ಗೆ ಬಂಡೆಪ್ಪ ಖಾಶೆಂಪುರ್ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಎರಡನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾಗಿ ಆಯ್ಕೆಯಾದ ಭೀಮರಾವ್ ಬಳತೆರವರು ಇದ್ದರು.
ಈ ವೇಳೆ ಮಾತನಾಡಿದ ಬಂಡೆಪ್ಪ ಖಾಶೆಂಪುರ್ ರವರು, ಸಹೋದರ ಮಾರುತಿ ಖಾಶೆಂಪುರ್ ರವರು ಸತತವಾಗಿ ಆರನೇ ಬಾರಿಗೆ ಹಾಗೂ ಭೀಮರಾವ್ ಬಳತೆರವರು ಎರಡನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾಗಿರುವುದು ಸಂತಸದ ವಿಷಯವಾಗಿದೆ ಎಂದರು.
ಬೀದರ್ ಜಿಲ್ಲೆಯಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ಸಹೋದರರಿಂದ ಜಿಲ್ಲೆಯಲ್ಲಿ ಹೈನುಗಾರಿಕೆ ಪ್ರಮಾಣ ಹೆಚ್ಚಳವಾಗಲಿ. ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುವ ರೈತರಿಗೆ ಹೆಚ್ಚಿನ ಸೌಲಭ್ಯಗಳು ದೊರಕುವಂತಾಗಲಿ. ಹೆಚ್ಚಿನ ಪ್ರಮಾಣದ ಡೈರಿಗಳು ಜಿಲ್ಲೆಯಲ್ಲಿ ಹುಟ್ಟಿಕೊಳ್ಳಲಿ ಎಂದು ಬಂಡೆಪ್ಪ ಖಾಶೆಂಪುರ್ ರವರು ಶುಭ ಹಾರೈಸಿದರು.
ಇದೇ ವೇಳೆ ಜೆಡಿಎಸ್ ಪಕ್ಷದ ವಿವಿಧ ಘಟಕಗಳ ಪ್ರಮುಖರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಅನೇಕರು ಕೆಎಮ್ಎಫ್ ನಿರ್ದೇಶಕರನ್ನು ಸನ್ಮಾನಿಸಿ ಗೌರವಿಸಿದರು.
#Bandeppa #khashempur #Bandeppakhashempur #BandeppaKashempur #MarutiKhashempur #MarutiKashempur #BidarSouth

Monday, September 25, 2023

ಮೈತ್ರಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

ಮೈತ್ರಿ ವಿಷಯದಲ್ಲಿ ಯಾವುದೇ ಅಸಮಾಧಾನ ಇಲ್ಲ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಸ್ಪಷ್ಟನೆ

ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಮಾತನಾಡಿದರು.

ಬೀದರ್ (ಸೆ.25): ಲೋಕಸಭಾ ಚುನಾವಣೆ ವಿಷಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಹೊಂದಾಣಿಕೆ (ಮೈತ್ರಿ) ಮಾಡಿಕೊಳ್ಳುತ್ತಿರುವುದಕ್ಕೆ ಯಾರು ಅಸಮಾಧಾನ ವ್ಯಕ್ತಪಡಿಸಿಲ್ಲ. ಯಾವುದೇ ಅಸಮಾಧಾನವೂ ಇಲ್ಲ. ನಾವೆಲ್ಲರೂ ಒಂದಾಗಿದ್ದೇವೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಸ್ಪಷ್ಟನೆ ನೀಡಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ತಮ್ಮ ನಿವಾಸದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈತ್ರಿ ವಿಷಯದಲ್ಲಿ ದೇವೇಗೌಡರು, ಕುಮಾರಸ್ವಾಮಿರವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ. ಈ ಹಿಂದೆ ನಡೆದ ಎರಡು ಸಭೆಗಳಲ್ಲಿ ಮೈತ್ರಿಗೆ ಎಲ್ಲರೂ ಒಪ್ಪಿಗೆ ನೀಡಿದ್ದಾರೆ ಎಂದರು.
ರಾಜಕೀಯದಲ್ಲಿ ಸಂದರ್ಭಾನುಸಾರ ಪಕ್ಷಗಳು ನಿರ್ಧಾರ ತೆಗೆದುಕೊಳ್ಳುತ್ತವೆ. ಅದರಂತೆ ನಮ್ಮ ಪಕ್ಷ ಕೂಡ ಎನ್ಡಿಎ ಜೊತೆಗಿನ ಮೈತ್ರಿಯ ನಿರ್ಧಾರವನ್ನು ತೆಗೆದುಕೊಂಡಿದೆ. ಅದಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದೇವೆ. ದೇವೇಗೌಡರು ಮತ್ತು ಕುಮಾರಸ್ವಾಮಿರವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಪಕ್ಷದಲ್ಲಿ ಒಬ್ಬಿಬ್ಬರು ಅಸಮಾಧಾನ ಹೊಂದಿರುತ್ತಾರೆ, ಅದನ್ನು ಕುಮಾರಸ್ವಾಮಿರವರು ಸರಿಪಡಿಸುತ್ತಾರೆ.
ಕರ್ನಾಟಕದ ಒಳಿತಿಗಾಗಿ ನಾವು ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ. ರಾಜ್ಯದ ಪರವಾಗಿ ನಮ್ಮ ಪಕ್ಷ ಧ್ವನಿ ಎತ್ತುವ ಕೆಲಸ ಮಾಡಿಕೊಂಡು ಬಂದಿದೆ. ಅದರೊಟ್ಟಿಗೆ ನಮ್ಮ ಪಕ್ಷವನ್ನು ಉಳಿಸಿ ಬೆಳಸುವ ಕೆಲಸವನ್ನು ನಾವು ಮಾಡಬೇಕಾಗಿದೆ. ಪಕ್ಷದ ರಾಜ್ಯ ಉಪಾಧ್ಯಕ್ಷರು ರಾಜೀನಾಮೆ ನೀಡಿರುವುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಪಕ್ಷದಲ್ಲಿ ಬಹಳಷ್ಟು ಜನ ಉಪಾಧ್ಯಕ್ಷರಿದ್ದಾರೆ.
ಪೆಂಡ್ರೈವ್ ಟೂಸ್ ಬಾಂಬ್ ಅಲ್ಲ, ಸಮಯ ಬಂದಾಗ ತೋರಿಸ್ತಾರೆ:
ಕುಮಾರಸ್ವಾಮಿರವರು ತೋರಿಸಿರುವ ಪೆಂಡ್ರೈವ್ ಟೂಸ್ ಬಾಂಬ್ ಅಲ್ಲ. ಸಮಯ ಬಂದಾಗ ತೋರಿಸ್ತಾರೆ. ರಾಜಕೀಯದಲ್ಲಿ ಕುಮಾರಸ್ವಾಮಿರವರು ಯಾವತ್ತೂ ಟೂಸ್ ಬಿಟ್ಟಿಲ್ಲ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಪಕ್ಕದ ವರಿಷ್ಠರು ಅದನ್ನು ಸರಿಪಡಿಸುತ್ತಾರೆ.
ನಾನು ಲೋಕಸಭಾ ಟಿಕೆಟ್ ಆಕಾಂಕ್ಷಿ ಅಲ್ಲ:
ನಾನು ಲೋಕಸಭಾ ಟಿಕೆಟ್ ಆಕಾಂಕ್ಷಿ ಅಲ್ಲ. ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಪಕ್ಷ ಸಂಘಟನೆಯ ಕೆಲಸ ಮಾಡುತ್ತೇನೆ. ಬೀದರ್ ಲೋಕಸಭಾ ಟಿಕೆಟ್ ವಿಷಯದಲ್ಲಿ ದೇವೇಗೌಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಕ್ಷದಲ್ಲಿ ಯಾರು ಅಸಮಾಧಾನಿತರಿಲ್ಲ, ಯಾವುದೇ ಸಭೆ ನಡೆಸುವುದಿಲ್ಲ. ಅಸಮಾಧಾನಿತರ ಯಾವುದೇ ಸಭೆಗೆ ನಾನು ಹೋಗುವುದಿಲ್ಲ. ಮೈತ್ರಿ ವಿಷಯದಲ್ಲಿ ದೇವೇಗೌಡರು, ಕುಮಾರಸ್ವಾಮಿರವರ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
Bandeppa Khashempur/ಬಂಡೆಪ್ಪ ಖಾಶೆಂಪುರ್ #Bandeppa #Khashempur #Bidar #ಬೀದರ್ #ದಕ್ಷಿಣ #South

Tuesday, September 19, 2023

ಕುಮಾರರಾಮ ಇತಿಹಾಸ ಸಂರಕ್ಷಣಾ ಸಮಿತಿಗೆ ಅಯ್ಯಣ್ಣ ನಾಯಕ ಪಾಮನಕಲ್ಲೂರು ರಾಜೀನಾಮೆ

ಕುಮಾರರಾಮ ಇತಿಹಾಸ ಸಂರಕ್ಷಣಾ ಸಮಿತಿಗೆ ಅಯ್ಯಣ್ಣ ನಾಯಕ ಪಾಮನಕಲ್ಲೂರು ರಾಜೀನಾಮೆ

Ayyanna Nayaka Pamanakallur
ಅಯ್ಯಣ್ಣ ನಾಯಕ ಪಾಮನಕಲ್ಲೂರು

ರಾಯಚೂರು (ಸೆ.19): ಕುಮಾರರಾಮ ಇತಿಹಾಸ ಸಂರಕ್ಷಣಾ ಸಮಿತಿಯ ರಾಜ್ಯ ಘಟಕದ ಮಾಧ್ಯಮ ಸಲಹೆಗಾರರು ಸ್ಥಾನಕ್ಕೆ ಯುವ ಪತ್ರಕರ್ತ (ಬರಹಗಾರ) ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಪಾಮನಕಲ್ಲೂರು ಮೂಲದ ಅಯ್ಯಣ್ಣ ನಾಯಕ ಪಾಮನಕಲ್ಲೂರುರವರು ರಾಜೀನಾಮೆ ನೀಡಿದ್ದಾರೆ.

ಕುಮಾರರಾಮ ಇತಿಹಾಸ ಸಂರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷರಾಗಿರುವ ರಾಜೇಶ್ ನಾಯಕರವರಿಗೆ ಸೋಮವಾರ ಸಂಜೆ ಅಯ್ಯಣ್ಣ ನಾಯಕ ಪಾಮನಕಲ್ಲೂರುರವರು ಪತ್ರ ಬರೆದಿದ್ದಾರೆ. 

‘ಇತ್ತೀಚಿನ ಕೆಲ ವರ್ಷಗಳ ಹಿಂದೆ ರಚಿಸಲಾಗಿದ್ದ ಕುಮಾರರಾಮ ಇತಿಹಾಸ ಸಂರಕ್ಷಣಾ ಸಮಿತಿ (ರಿ) ರಾಜ್ಯ ಘಟಕದಲ್ಲಿ ತಾವು ನನಗೆ ರಾಜ್ಯ ಘಟಕದ ಮಾಧ್ಯಮ ಸಲಹೆಗಾರರು ಹುದ್ದೆ (ಸ್ಥಾನ) ನೀಡಿದ್ದಿರಿ. ಕಾರಣಾಂತರಗಳಿಂದ ನಾನು ತಾವು ನೀಡಿದ್ದ ರಾಜ್ಯ ಘಟಕದ ಮಾಧ್ಯಮ ಸಲಹೆಗಾರರು ಹುದ್ದೆ (ಸ್ಥಾನ) ಗೆ ಈ ಪತ್ರದ ಮೂಲಕ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ಪತ್ರವನ್ನು ಪರಿಗಣಿಸಿ ನನ್ನ ರಾಜೀನಾಮೆಯನ್ನು ಕೂಡಲೇ ಅಂಗೀಕಾರ ಮಾಡಬೇಕೆಂದು ವಿನಂತಿಸಿಕೊಳ್ಳುತ್ತೀದ್ದೇನೆ.

ತಮ್ಮ ಸಮಿತಿಯಲ್ಲಿ ನನಗೆ ಅವಕಾಶ ನೀಡಿದ್ದ ಸಮಿತಿಯ ಸರ್ವ ಸದಸ್ಯರಿಗೂ ಮತ್ತು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ನನ್ನೊಂದಿಗೆ ಇದ್ದು ಸಹಕರಿಸಿದ ಸರ್ವರಿಗೂ ಈ ಮೂಲಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ಇನ್ನೂ ಮುಂದೆ ತಮ್ಮ ಕುಮಾರರಾಮ ಇತಿಹಾಸ ಸಂರಕ್ಷಣಾ ಸಮಿತಿ (ರಿ) ಯ ಕಾರ್ಯಚಟುವಟಿಕೆಗಳಿಂದ ದೂರವಿರಲು ಬಯಸಿದ ನನಗೆ ತಾವು ಸಹಕರಿಸುವಿರಿ ಎಂದು ನಂಬಿದ್ದೇನೆ. ಮತ್ತೊಮ್ಮೆ ಸರ್ವರಿಗೂ ಧನ್ಯವಾದಗಳು. ತಮ್ಮ ಕಾರ್ಯಗಳಿಗೆ ಶುಭವಾಗಲಿ. ವಂದನೆಗಳು’ ಎಂದು ಅಯ್ಯಣ್ಣ ನಾಯಕ ಪಾಮನಕಲ್ಲೂರುರವರು ರಾಜೇಶ್ ನಾಯಕರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

Sunday, September 10, 2023

ಜೆಡಿಎಸ್ ಸಮಾವೇಶದಲ್ಲಿ ಗರ್ಜಿಸಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

ಬಂಡೆಪ್ಪ ಖಾಶೆಂಪುರ್ (ಮಾಜಿ ಸಚಿವರು, ಕರ್ನಾಟಕ ಸರ್ಕಾರ)

ಸಿಲಿಕಾನ್ ಸಿಟಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ನಡೆದ ಜೆಡಿಎಸ್ ಪಕ್ಷದ ಮುಖಂಡರ, ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್ ರವರು ಮಾತನಾಡಿದ ಸಂಪೂರ್ಣ ವಿಡಿಯೋ..

ಭಾಷಣದ ಸಂಪೂರ್ಣ ವಿಡಿಯೋ ಇಲ್ಲಿದೆ ನೋಡಿ...

#ಬಂಡೆಪ್ಪ #ಖಾಶೆಂಪುರ್ #bandeppakashempur #Bandeppa #Khashempur #jds #karnataka #kannada #india #news #jdsnews #bidar #south #mla #minister #hdk #hdkumaraswamy #hdd #hddevegowda