ಸತತವಾಗಿ ಆರನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾದ ಮಾರುತಿ ಖಾಶೆಂಪುರ್
![]() |
ಕೆಎಮ್ಎಫ್ ನಿರ್ದೇಶಕರನ್ನು ಸನ್ಮಾನಿಸಿದ ಮುಖಂಡರು |
ಬೀದರ್ (ಸೆ.30): ಕಲಬುರಗಿ, ಬೀದರ್ ಹಾಗೂ ಯಾದಗಿರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಬೀದರ್ ವಿಭಾಗದ ಸಾಮಾನ್ಯ ಚುನಾವಣೆಯಲ್ಲಿ ಗೆದ್ದು ಸತತವಾಗಿ ಆರನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾಗಿ ಆಯ್ಕೆಯಾದ ಮಾರುತಿ ಖಾಶೆಂಪುರ್ ರವರು ತಮ್ಮ ಅಣ್ಣನವರಾದ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ನಿವಾಸದಲ್ಲಿ ಶನಿವಾರ ಬೆಳಗ್ಗೆ ಬಂಡೆಪ್ಪ ಖಾಶೆಂಪುರ್ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಎರಡನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾಗಿ ಆಯ್ಕೆಯಾದ ಭೀಮರಾವ್ ಬಳತೆರವರು ಇದ್ದರು.
ಈ ವೇಳೆ ಮಾತನಾಡಿದ ಬಂಡೆಪ್ಪ ಖಾಶೆಂಪುರ್ ರವರು, ಸಹೋದರ ಮಾರುತಿ ಖಾಶೆಂಪುರ್ ರವರು ಸತತವಾಗಿ ಆರನೇ ಬಾರಿಗೆ ಹಾಗೂ ಭೀಮರಾವ್ ಬಳತೆರವರು ಎರಡನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾಗಿರುವುದು ಸಂತಸದ ವಿಷಯವಾಗಿದೆ ಎಂದರು.
ಬೀದರ್ ಜಿಲ್ಲೆಯಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ಸಹೋದರರಿಂದ ಜಿಲ್ಲೆಯಲ್ಲಿ ಹೈನುಗಾರಿಕೆ ಪ್ರಮಾಣ ಹೆಚ್ಚಳವಾಗಲಿ. ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುವ ರೈತರಿಗೆ ಹೆಚ್ಚಿನ ಸೌಲಭ್ಯಗಳು ದೊರಕುವಂತಾಗಲಿ. ಹೆಚ್ಚಿನ ಪ್ರಮಾಣದ ಡೈರಿಗಳು ಜಿಲ್ಲೆಯಲ್ಲಿ ಹುಟ್ಟಿಕೊಳ್ಳಲಿ ಎಂದು ಬಂಡೆಪ್ಪ ಖಾಶೆಂಪುರ್ ರವರು ಶುಭ ಹಾರೈಸಿದರು.
ಇದೇ ವೇಳೆ ಜೆಡಿಎಸ್ ಪಕ್ಷದ ವಿವಿಧ ಘಟಕಗಳ ಪ್ರಮುಖರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಅನೇಕರು ಕೆಎಮ್ಎಫ್ ನಿರ್ದೇಶಕರನ್ನು ಸನ್ಮಾನಿಸಿ ಗೌರವಿಸಿದರು.
#Bandeppa #khashempur #Bandeppakhashempur #BandeppaKashempur #MarutiKhashempur #MarutiKashempur #BidarSouth
No comments:
Post a Comment