Friday, November 10, 2023

ಹಾವು ಕಡಿತಕ್ಕೆ ಗ್ರಾಮೀಣ ಭಾಗದಲ್ಲೂ ಔಷದಿ ಸಿಗುವಂತೆ ನೋಡಿಕೊಳ್ಳಿ: ದೇವಿಕಾ ದೊರೆ

ಹಾವು ಕಡಿತಕ್ಕೆ ಗ್ರಾಮೀಣ ಭಾಗದಲ್ಲೂ ಔಷದಿ ಸಿಗುವಂತೆ ನೋಡಿಕೊಳ್ಳಿ: ದೇವಿಕಾ ದೊರೆ

ದೇವಿಕಾ ದೊರೆ

ರಾಯಚೂರು (ನ.10): ಹಾವು ಕಡಿತದಿಂದ ಸಾವನ್ನಪ್ಪುವವರ ಸಂಖ್ಯೆ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದ್ದು ಹಾವು ಕಡಿತಕ್ಕೆ ಗ್ರಾಮೀಣ ಭಾಗದಲ್ಲೇ ಔಷದಿ ಸಿಗುವಂತೆ ನೋಡಿಕೊಳ್ಳಿ ಎಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದ ಸಮಾಜ ಸೇವಕಿ ದೇವಿಕಾ ದೊರೆ ಮನವಿ ಮಾಡಿದ್ದಾರೆ.

ಕಳೆದ ಕೆಲ ತಿಂಗಳುಗಳಲ್ಲೇ ದೇವದುರ್ಗ ತಾಲೂಕಿನಲ್ಲಿ ಅನೇಕ ಜನರು ಹಾವು ಕಡಿತದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಹಾವು ಕಡಿತದಿಂದ ಸಾವನ್ನಪ್ಪುವವರಲ್ಲಿ ಬಹುತೇಕರು ರೈತರು, ಕೃಷಿ ಕಾರ್ಮಿಕರಾಗಿದ್ದಾರೆ. ಹಾವು ಕಚ್ಚಿದ ತಕ್ಷಣ ಅವರ ಅಕ್ಕಪಕ್ಕದಲ್ಲೇ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಅದಕ್ಕಿಂತ ಕೆಳ ಹಂತದ ಆಸ್ಪತ್ರೆಗಳಲ್ಲಿ ಅವರಿಗೆ ಔಷಧಿ, ಚಿಕಿತ್ಸೆ ಲಭ್ಯವಾಗಿದ್ದರೆ ಅವರ ಪ್ರಾಣವನ್ನು ಉಳಿಸಬಹುದಾಗಿತ್ತು.

ತಾಲೂಕು ಆಸ್ಪತ್ರೆಗಳು, ತಾಲೂಕು ಕೇಂದ್ರಗಳು ಗ್ರಾಮಗಳಿಂದ 30-35 ಕಿ.ಮೀ. ದೂರವಿದ್ದಾಗ ಹಾವು ಕಡಿತಕ್ಕೆ ಒಳಗಾದವರನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವುದು ತುಂಬಾ ಕಷ್ಟದ ಕೆಲಸವಾಗಿರುತ್ತದೆ. ಗ್ರಾಮೀಣ ಭಾಗದಲ್ಲಿ ಔಷಧಿ ಮತ್ತು ಚಿಕಿತ್ಸೆ ಸಿಗುವಂತೆ ಮಾಡಿದರೆ ಹಾವು ಕಡಿತದಿಂದ ಉಂಟಾಗುವ ಸಾವುಗಳನ್ನು ತಪ್ಪಿಸಬಹುದಾಗಿದೆ.

ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಅದಕ್ಕಿಂತ ಚಿಕ್ಕ ಆಸ್ಪತ್ರೆಗಳಲ್ಲೂ ಕೂಡ ಹಾವು ಕಡಿತಕ್ಕೆ ಔಷಧಿ ಮತ್ತು ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕೆಂದು ಮಾಧ್ಯಮಗಳ ಮೂಲಕ ಸಮಾಜ ಸೇವಕಿ ದೇವಿಕಾ ದೊರೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Wednesday, November 1, 2023

ಪಾಮನಕಲ್ಲೂರು: ಸಡಗರದಿಂದ ಜರುಗಿದ ಕನ್ನಡ ರಾಜ್ಯೋತ್ಸವ

ಪಾಮನಕಲ್ಲೂರು: ಸಡಗರದಿಂದ ಜರುಗಿದ ಕನ್ನಡ ರಾಜ್ಯೋತ್ಸವ

ರಾಯಚೂರು (ನಂ.01): ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಕನ್ನಡ (ಕರ್ನಾಟಕ) ರಾಜ್ಯೋತ್ಸವ ಕಾರ್ಯಕ್ರಮವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಕರವೇಯಿಂದ ಕನ್ನಡಾಂಬೆ ಭಾವಚಿತ್ರಕ್ಕೆ ಪೂಜೆ:
ಗ್ರಾಮದ ಸಂತೆಕಟ್ಟೆ ಬಳಿ ಇರುವ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ನಾಮಫಲಕದ ಬಳಿ ಕನ್ನಡಾಂಬೆ ಭಾವಚಿತ್ರವಿಟ್ಟು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಕನ್ನಡ ರಾಜ್ಯೋತ್ಸವ ಆಚರಿಸಿದರು.
ಆಟೋ ಚಾಲಕರಿಂದ ರಾಜ್ಯೋತ್ಸವ ಆಚರಣೆ:
ಗ್ರಾಮದಲ್ಲಿರುವ ಆಟೋ ಚಾಲಕರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಕನ್ನಡಾಂಬೆಯ ಭಾವಚಿತ್ರದ ಮೆರವಣಿಗೆ ಮಾಡಿ ಕನ್ನಡ ರಾಜ್ಯೋತ್ಸವಕ್ಕೆ ಮೆರುಗು ತಂದರು.
ಗ್ರಾಮದಲ್ಲಿರುವ ಸರಕಾರಿ ಕಿರಿಯ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ, ಗ್ರಾಮ ಪಂಚಾಯತಿ ಕಛೇರಿ ಸೇರಿದಂತೆ ವಿವಿಧೆಡೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕರವೇ ಹೋಬಳಿ ಘಟಕದ ಗೌರವಾಧ್ಯಕ್ಷರಾದ ಶಿವಾನಂದ ಹೂಗಾರ, ಅಧ್ಯಕ್ಷರಾದ ರಮೇಶ ಗಂಟ್ಲಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಚೌಡ್ಲಿ, ಖಜಾಂಚಿ ಮಲ್ಲಪ್ಪ ಹಿರೇಮನಿ, ಮುಖಂಡರಾದ ನಾಗಪ್ಪ ಹಡಪಾದ, ಶಿವರಾಜ ಕುರುಬರು, ವೀರೇಶ ಗಂಟ್ಲಿ, ಅಮರಯ್ಯಸ್ವಾಮಿ ಹೊರಗಿನಮಠ, ಅಯ್ಯಪ್ಪ ಯದಲದೊಡ್ಡಿ, ಹನುಮಂತ ಕೊಂಡಾಲ್, ದುರ್ಗಾಸಿಂಗ್, ಹನುಮಂತರಾಯ, ರಮೇಶ್ ಗಂಟ್ಲಿ, ರಾಮಚಂದ್ರಪ್ಪ, ಹುಲ್ಯಪ್ಪ ಸಾನಬಾಳ, ಆಟೋ ಚಾಲಕರಾದ ಅಜಯ್, ಮಾಳಿಂಗರಾಯ, ಮಹೇಶ್, ಮಲ್ಲಿಕಾರ್ಜುನ ಗೊಬ್ಬಿ ಸೇರಿದಂತೆ ಅನೇಕರಿದ್ದರು.
#KannadaRajyotshava #KarnatakaRajyotshava