ಸಾಹಿತ್ಯವನ್ನು ಉಳಿಸಿಕೊಂಡು, ಬೆಳಸಿಕೊಂಡು ಸಾಗುವುದು ಅತ್ಯಗತ್ಯ: ಬಂಡೆಪ್ಪ ಖಾಶೆಂಪುರ್
ಬೀದರ್ (ಡಿ.24): ಸಾಮಾಜಿಕ ಜಾಲತಾಣಗಳ ಪ್ರಭಾವದ ನಡುವೆಯೂ ಸಾಹಿತ್ಯವನ್ನು ನಶಿಸಿ ಹೋಗದಂತೆ ಕಾಪಾಡಿಕೊಂಡು ಉಳಿಸಿಕೊಂಡು, ಬೆಳಸಿಕೊಂಡು ಸಾಗುವುದು ಅತ್ಯಗತ್ಯವಾಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರು, ಜೆಡಿಎಸ್ ಕೋರ್ ಕಮಿಟಿಯ ಸದಸ್ಯರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದರು.
ಪ್ರಥಮ ಜಿಲ್ಲಾ ದಾಸ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಎಂ. ಅಮರವಾಡಿ, ಅವರಿಗೆ ಶ್ರೀ ಕನಕ ಕನ್ನಡ ಸಾಂಸ್ಕೃತಿಕ ಸಂಘದ ವತಿಯಿಂದ ಬೀದರ್ ನಗರದ ಗಾಂಧಿ ಗಂಜ್ ನ ಕನಕ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ದಾಸ ಸಾಹಿತ್ಯ ಎಂಬುದು ಶ್ರೇಷ್ಠ ಸಾಹಿತ್ಯವಾಗಿದೆ. ಅದನ್ನು ಇವತ್ತಿನ ಸಾಮಾಜಿಕ ಜಾಲತಾಣಗಳ ಯುಗದಲ್ಲಿ ಮರೆತು ಹೋಗುತ್ತಿದ್ದೇವೆ. ಅಂದಿನ ದಾಸರು, ವಚನಕಾರರು ರಚಿಸಿದ ಸಾಹಿತ್ಯ ಅರ್ಥಪೂರ್ಣವಾಗಿದೆ. ಅದು ಇಂದಿಗೂ ಜೀವಂತವಾಗಿದೆ. ಐದು ನೂರು ವರ್ಷಗಳ ಹಿಂದೆಯೇ ಶ್ರೇಷ್ಠ ಸಾಹಿತ್ಯವನ್ನು ಕನಕದಾಸರು ರಚಿಸಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ರವರು ಸೇರಿದಂತೆ ಅನೇಕ ಜನ ಮಹಾತ್ಮರು, ದಾಸರು, ಶರಣರು ಮಾನವ ಕುಲ ಎಲ್ಲಾ ಒಂದೇ, ಎಲ್ಲರೂ ಒಟ್ಟಾಗಿ ಸಾಗಬೇಕಾಗಿದೆ ಎಂದು ಹೇಳಿದ್ದಾರೆ.
ಈಗ ಅಮರವಾಡಿರವರು ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡು, ತಮ್ಮದೇಯಾದ ಛಾಪು ಮೂಡಿಸಿ, ಪ್ರಥಮ ಜಿಲ್ಲಾ ದಾಸ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರಿಗೂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೂ ಕೂಡ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ದಾಸ ಸಾಹಿತ್ಯ ಸಮೇಳನವನ್ನು ನಾವೆಲ್ಲರೂ ಸೇರಿ ಅರ್ಥಪೂರ್ಣವಾಗಿ ಮಾಡಬೇಕಾಗಿದೆ. ಅನೇಕ ಸಮಾಜದವರು ಉತ್ತಮವಾದ ಸಮೇಳನಗಳನ್ನು ಮಾಡಿದ್ದಾರೆ. ನಾವು ಕೂಡ ಅರ್ಥಪೂರ್ಣವಾಗಿ ಕಾರ್ಯಕ್ರಮ ಮಾಡಬೇಕಾಗಿದೆ. ಅದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಸಮಾಜದ ಪ್ರಮುಖರಾದ ಪಂಡಿತರಾವ್ ಚಿದ್ರಿರವರು ಹೇಳಿದರು.
ಒಳ್ಳೆಯ ಕೆಲಸ ಮಾಡುವವರನ್ನು ನಾವು ಗುರುತಿಸಿ ಸನ್ಮಾನಿಸಿ, ಗೌರವಿಸುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದೇವೆ. ಅದರಂತೆ ಬಿ.ಎಂ ಅಮರವಾಡಿರವರನ್ನು ಗುರುತಿಸಿ ಸನ್ಮಾನಿಸುವ ಕೆಲಸ ಮಾಡಿದ್ದೇವೆ ಎಂದು ಸಮಾಜದ ಮುಖಂಡರಾದ ಸಂತೋಷ ಜೋಳದಪಗೆರವರು ಪ್ರಾಸ್ತಾವಿಕ ನುಡಿಯಲ್ಲಿ ತಿಳಿಸಿದರು.
ಇದೇ ವೇಳೆ ವೇದಿಕೆಯ ಮೇಲಿದ್ದ ಅತಿಥಿಗಳೆಲ್ಲರೂ ಸೇರಿ ಬೀದರ್ ಜಿಲ್ಲಾ ಪ್ರಥಮ ದಾಸ ಸಾಹಿತ್ಯ ಸಮೇಳನದ ಪೋಸ್ಟರ್ ಬಿಡುಗಡೆ ಮಾಡಿದರು. ಪ್ರಮುಖರಾದ ಗೀತಾ ಪಂಡಿತರಾವ್ ಚಿಂದ್ರಿ, ಬಿ.ಎಂ ಅಮರವಾಡಿ, ಪಂಡಿತರಾವ್ ಚಿದ್ರಿ, ಬಾಬುರಾವ್ ಮಲ್ಕಾಪೂರೆ, ಮಲ್ಲಿಕಾರ್ಜುನ ಬಿರಾದಾರ (ಪರಿಹಾರ), ಲಕ್ಷ್ಮಣ್ ಮೇತ್ರೆ, ಮಾಳಪ್ಪ ಅಡಸಾರೆ, ಎಮ್.ಎಸ್ ಕಟಗಿ, ಬೋಮಗೊಂಡ ಚಿಟ್ಟಾವಾಡಿ, ಸಂತೋಷ್ ಬಗದಲ್, ಸಂತೋಷ ಜೋಳದಪಗೆ, ಲೋಕೇಶ್ ಮರ್ಜಾಪೂರೆ, ಟಿ.ಎಮ್ ಮಚ್ಚೆ, ಬಕ್ಕಪ್ಪ ನಾಗೋರೆ, ಸುಭಾಷ್ ನಾಗೋರೆ, ವಿಜಯಕುಮಾರ್ ಬ್ಯಾಲಳ್ಳಿ, ಸುನೀಲ್ ಚಿಲ್ಲರಗಿ, ವೀರೇಶ್, ವೈಜನಾಥ, ಶರಣಪ್ಪ ಗಂಧುಗೆ, ಸಂಜು ಚಿಲ್ಲರಗಿ, ಪ್ರಕಾಶ್, ಅನಿಲ್ ಚಿಲ್ಲರಗಿ, ಸಾಹೇಬಣ್ಣ, ತುಕ್ಕರಾಮ್ ಸೇರಿದಂತೆ ಅನೇಕರಿದ್ದರು.
#ಬಂಡೆಪ್ಪ #ಖಾಶೆಂಪುರ್ #Bandeppa #Khashempur #BandeppaKashempur #ಬೀದರ್ #Bidar_South
No comments:
Post a Comment