Monday, May 20, 2024

ಪಾಮನಕಲ್ಲೂರು: ಗ್ರಾ.ಪಂ ಆವರಣದಲ್ಲಿ ನಡೆದ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ

ಪಾಮನಕಲ್ಲೂರು: ಗ್ರಾ.ಪಂ ಆವರಣದಲ್ಲಿ ನಡೆದ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ

ರಾಯಚೂರು (ಮೇ.20): ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯತಿ ಆವರಣದಲ್ಲಿ ಇತ್ತೀಚೆಗೆ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ನಡೆಯಿತು.

ಈ ಸಭೆಯಲ್ಲಿ 2022-23ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಮತ್ತು 15ನೇ ಹಣಕಾಸು ಯೋಜನೆಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಕುರಿತು 2023-24ನೇ ಸಾಲಿನ ಸಾಮಾಜಿಕ ಪರಿಶೋಧನೆ ನಡೆಸಲಾಯಿತು.

ಸಭೆಯ ಅಧ್ಯಕ್ಷೆತಯನ್ನು ಮಾನ್ವಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹಾಲಿಂಗ ಹೆಚ್ ಇಂಗಳದಾಳರವರು ವಹಿಸಿದ್ದರು. ಲೆಕ್ಕ ಪರಿಶೋಧನೆ ಮಾಹಿತಿಯನ್ನು ಲಿಂಗಸುಗೂರು ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ  ಚಂದ್ರು ಪವ್ಹಾರ್ ಹಂಚಿಕೊಂಡರು. 

ಈ ಸಂದರ್ಭದಲ್ಲಿ ಮಸ್ಕಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶೇಖ್ ಹುಸೇನ್ ಶರೀಫ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೃಷ್ಣ ಹೆಚ್ ಹುನಗುಂದ, ಗ್ರಾಮ ಪಂಚಾಯತಿ ಸದಸ್ಯರು, ಸಾಮಾಜಿಕ ಪರಿಶೋಧನೆ ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಲಕ್ಷ್ಮೀದೇವಿ, ಹುಸೇನಪ್ಪ, ವಿವಿಧ ಸಂಘಟನೆಗಳ ಮುಖಂಡರಾದ ಲಕ್ಷ್ಮಣ ಚೌಡ್ಲಿ, ಶಾಂಭವಿ, ಸುಂಡೆಪ್ಪ ಆನಂದಗಲ್, ರಮೇಶ್ ಚಿಲ್ಕರಾಗಿ, ಅಮರೇಶ್ ಡಿ ಪೂಜಾರಿ, ಅಯ್ಯಣ್ಣ ನಾಯಕ ಪಾಮನಕಲ್ಲೂರು, ಶರಣಪ್ಪ ಕೊಂಡಾಲ್ ಸೇರಿದಂತೆ ಅನೇಕರಿದ್ದರು.

No comments:

Post a Comment